AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡಲು ರಾಷ್ಟ್ರಗಳಿಗೆ ಸೂಚನೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡುವಂತೆ ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡಲು ರಾಷ್ಟ್ರಗಳಿಗೆ ಸೂಚನೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ
ಕೊರೊನಾ
ನಯನಾ ರಾಜೀವ್
|

Updated on: Dec 25, 2023 | 12:33 PM

Share

ಕೊರೊನಾ(Corona) ಪ್ರಕರಣಗಳ ಮೇಲೆ ನಿಗಾ ಇಡುವಂತೆ ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.

ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ಏರಿಕೆ ಕಂಡುಬಂದಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.

ಕ್ರಿಸ್ಮಸ್​ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ ಮತ್ತೆ ಭೀತಿ ಹುಟ್ಟಿಸಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ.

ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ರೇಟ್‌ ಕೂಡ ಏರಿಕೆ ಕಂಡಿದ್ದು, 7.35 % ಆಗಿದೆ.

ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದು, ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು, ಕೋವಿಡ್ ಟೆಸ್ಟ್ ಹೆಚ್ಚಳ, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದೇಶಿಸಿದೆ.

ಬೆಂಗಳೂರಿನಲ್ಲಿ 350-400 ಟೆಸ್ಟ್ ನಡೆಸುತ್ತಿದ್ದು 1000 ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ