AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ಒಂದು ವಾರದೊಳಗೆ ಯುರೋಪ್​ಗೆ ಅಪ್ಪಳಿಸಲಿದೆ ಹೊಸ ಕೋವಿಡ್-19 ಅಲೆ

ಒಂದು ವಾರದೊಳಗೆ ಯುರೋಪ್​ಗೆ ಹೊಸ ಕೋವಿಡ್ ಅಲೆ ಅಪ್ಪಳಿಸಲಿದೆ ಎಂದು ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಲಸಿಕೆಗಳ ಪೂರೈಕೆಗಿಂತ ವೈರಸ್​ನ ಹೊಸ ರೂಪಾಂತರಗಳು ವೇಗವಾಗಿ ವಿಕಸನಗೊಳ್ಳುತ್ತಿವೆ ಎಂದು ಹೇಳಲಾಗಿದೆ.

Covid 19: ಒಂದು ವಾರದೊಳಗೆ ಯುರೋಪ್​ಗೆ ಅಪ್ಪಳಿಸಲಿದೆ ಹೊಸ ಕೋವಿಡ್-19 ಅಲೆ
Coronavirus
Follow us
TV9 Web
| Updated By: ನಯನಾ ರಾಜೀವ್

Updated on: Oct 27, 2022 | 10:59 AM

ಒಂದು ವಾರದೊಳಗೆ ಯುರೋಪ್​ಗೆ ಹೊಸ ಕೋವಿಡ್ ಅಲೆ ಅಪ್ಪಳಿಸಲಿದೆ ಎಂದು ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಲಸಿಕೆಗಳ ಪೂರೈಕೆಗಿಂತ ವೈರಸ್​ನ ಹೊಸ ರೂಪಾಂತರಗಳು ವೇಗವಾಗಿ ವಿಕಸನಗೊಳ್ಳುತ್ತಿವೆ ಎಂದು ಹೇಳಲಾಗಿದೆ. ಯುರೋಪಿಯನ್ ಮೆಡಿಸಿನ್ಸ್​ ಏಜೆನ್ಸಿಯು ಕೋವಿಡ್ ಸಾಂಕ್ರಾಮಿಕ ರೋಗವು ಇನ್ನೂ ಮುಗಿದಿಲ್ಲ, ಹೊಸ ರೂಪಾಂತರಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಹೇಳಿದೆ.

ಕಳೆದ ವಾರ BQ.1 ಎಂದು ಕರೆಯಲ್ಪಡುವ ಈ ಹೊಸ Omicron ರೂಪಾಂತರಗಳಲ್ಲಿ ಒಂದು ಐದು ದೇಶಗಳಲ್ಲಿ ಪತ್ತೆಯಾಗಿತ್ತು. ಯುರೋಪಿಯನ್ ಸೆಂಟರ್ ಫಾರ್ ಡಿಸೀಸ್ ಪ್ರಿವೆನ್ಷನ್ ಆಂಡ್ ಕಂಟ್ರೋಲ್ ಪ್ರಕಾರ ಕೊರೊನಾದ ಹೊಸ ರೂಪಾಂತರಿಯು ನವೆಂಬರ್ ಮಧ್ಯದಿಂದ ಡಿಸೆಂಬರ್​ವರೆಗೆ ಪ್ರಬಲ ಪರಿಣಾಮ ಬೀರಲಿದೆ ಎಂದು ಹೇಳಿದೆ.

ಕೋವಿಡ್ ವಿರುದ್ಧ ಲಸಿಕೆಗಳು ಇನ್ನೂ ಪರಿಣಾಮಕಾರಿಯಾಗಿವೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ. ಅದೇ ಸಮಯದಲ್ಲಿ, ಯುರೋಪಿಯನ್ ಆರೋಗ್ಯ ಅಧಿಕಾರಿಗಳು ಈ ಚಳಿಗಾಲದಲ್ಲಿ ಹರಡಬಹುದಾದ ಇನ್ಫ್ಲುಯೆನ್ಸ ವೈರಸ್ ವಿರುದ್ಧ ಲಸಿಕೆಗಳನ್ನು ಪಡೆಯಲು ಜನರಲ್ಲಿ ಮನವಿ ಮಾಡಿದ್ದಾರೆ. BQ.1.1 ಸಬ್‌ವೇರಿಯಂಟ್ ಕನಿಷ್ಠ 29 ದೇಶಗಳಲ್ಲಿ ಹರಡಿದೆ.

ಓಮಿಕ್ರಾನ್‌ ಹೊಸ ರೂಪಾಂತರಗಳಾದ BA.5.1.7 ಮತ್ತು BF.7 ಅನ್ನು ಓಮಿಕ್ರಾನ್‌ ಸ್ಪಾನ್ ಎಂದು ಸಹ ಕರೆಯುತ್ತಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಪ್ರಪಂಚದೆಲ್ಲೆಡೆ ಕೋವಿಡ್ -19 ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದ್ದರೂ ಈ ವೈರಸ್ ನಿರಂತರವಾಗಿ ಹೊಸ ಹಾಗೂ ಹೆಚ್ಚು ರೂಪಾಂತರಗಳಾಗಿ ವಿಕಸನಗೊಳ್ಳುತ್ತಿರುವುದೇ ಈಗ ಆರೋಗ್ಯ ತಜ್ಞರ ಆತಂಕವನ್ನು ಹೆಚ್ಚಿಸಿದೆ.

ಚೀನಾದಲ್ಲಿ ಹರಡುತ್ತಿರುವ ಓಮಿಕ್ರಾನ್‌ ಸ್ಪಾನ್‌ ಅಕ್ಟೋಬರ್ 11 ರಂದು, ಓಮಿಕ್ರಾನ್ ಸ್ಪಾನ್ ಎಂಬ ಓಮಿಕ್ರಾನ್‌ ಹೊಸ ರೂಪಾಂತರ, BA.5.1.7 ಮತ್ತು BF 7 ಗಳು ಚೀನಾದ ಮಂಗೋಲಿಯಾದ ಪ್ರದೇಶದಲ್ಲಿ ಕಂಡುಬಂದಿದೆ. ಇದೀಗ ಚೀನಾದ ಹಲವು ಜಿಲ್ಲೆಗಳಿಗೂ ವೇಗವಾಗಿ ಹರಡುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!