AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covishield SIIನ ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಯುರೋಪಿಯನ್ ಯೂನಿಯನ್‌ಗೆ ನೋ ಎಂಟ್ರಿ..

ಇಂಗ್ಲೆಂಡ್‌ನಲ್ಲಿ ಉತ್ಪಾದನೆಯಾಗುವ ಆಕ್ಸ್‌ಫರ್ಡ್ ವಿವಿಯ ಲಸಿಕೆಗೆ ಯೂರೋಪಿಯನ್ ಯೂನಿಯನ್ ಒಪ್ಪಿಗೆ ನೀಡಿದೆ. ಆದರೆ ಭಾರತದಲ್ಲಿ ಉತ್ಪಾದನೆಯಾಗುವ ಕೊವಿಶೀಲ್ಡ್ ಲಸಿಕೆಗೆ ಯುರೋಪ್ ಮೆಡಿಸಿನ್ ಏಜೆನ್ಸಿ ಅನುಮೋದನೆ ನೀಡಿಲ್ಲ.

Covishield SIIನ ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಯುರೋಪಿಯನ್ ಯೂನಿಯನ್‌ಗೆ ನೋ ಎಂಟ್ರಿ..
ಕೊವಿಡ್​ ಲಸಿಕೆ
TV9 Web
| Edited By: |

Updated on: Jun 28, 2021 | 3:34 PM

Share

ದೆಹಲಿ: ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸಿದ ಕೊವಿಶೀಲ್ಡ್ ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರು ಯುರೋಪಿಯನ್ ಯೂನಿಯನ್ ‘ಗ್ರೀನ್ ಪಾಸ್’ ಗೆ ಅರ್ಹರಲ್ಲ. ಜುಲೈ 1 ರಿಂದ SIIನ ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಯುರೋಪಿಯನ್ ಯೂನಿಯನ್‌ಗೆ ಎಂಟ್ರಿ ಇರುವುದಿಲ್ಲ.

ಇಂಗ್ಲೆಂಡ್‌ನಲ್ಲಿ ಉತ್ಪಾದನೆಯಾಗುವ ಆಕ್ಸ್‌ಫರ್ಡ್ ವಿವಿಯ ಲಸಿಕೆಗೆ ಯೂರೋಪಿಯನ್ ಯೂನಿಯನ್ ಒಪ್ಪಿಗೆ ನೀಡಿದೆ. ಆದರೆ ಭಾರತದಲ್ಲಿ ಉತ್ಪಾದನೆಯಾಗುವ ಕೊವಿಶೀಲ್ಡ್ ಲಸಿಕೆಗೆ ಯುರೋಪ್ ಮೆಡಿಸಿನ್ ಏಜೆನ್ಸಿ ಅನುಮೋದನೆ ನೀಡಿಲ್ಲ. ಆಮೆರಿಕಾದ ಫೈಜರ್, ಮಾಡೆರ್ನಾ ಲಸಿಕೆಗಳಿಗೆ ಯೂರೋಪ್ ಮೆಡಿಸಿನ್ ಏಜೆನ್ಸಿ ಒಪ್ಪಿಗೆ ನೀಡಿದೆ. ಆದರೆ ಆಕ್ಸ್‌ಫರ್ಡ್ ವಿವಿ ಸಂಶೋಧನೆಯ ಲಸಿಕೆ ಉತ್ಪಾದನೆಯಾಗುವ ಲಸಿಕೆಗೆ ಮನ್ನಣೆ ಇಲ್ಲ. ಹೀಗಾಗಿ ಒಪ್ಪಿಗೆ ಪಡೆಯುವಂತೆ ಯೂರೋಪ್ ಮೆಡಿಸಿನ್ ಏಜೆನ್ಸಿ, ಸೆರಮ್‌ಗೆ ಸೂಚನೆ ನೀಡಿದೆ.

ಕೊವಿಶೀಲ್ಡ್ ಲಸಿಕೆಗೆ ಯೂರೋಪ್ ಮೆಡಿಸಿನ್ ಏಜೆನ್ಸಿಯ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರದಿಂದ ಪುಣೆಯ ಎಸ್‌ಐಐಗೆ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ರಾಜತಾಂತ್ರಿಕ ಮಟ್ಟದಲ್ಲಿ ಯುರೋಪಿಯನ್ ಯೂನಿಯನ್ ರಾಷ್ಟ್ರಗಳ ಜೊತೆಗೆ ಚರ್ಚೆ ನಡೆಯುತ್ತಿದೆ. WHOನಿಂದ ಅನುಮೋದನೆ ಪಡೆದ ಲಸಿಕೆಗಳಿಗೆ ಗ್ರೀನ್ ಪಾಸ್ ನೀಡುವಂತೆ ಭಾರತ ಒತ್ತಾಯಿಸಿದೆ. ಕೊವಿಶೀಲ್ಡ್ ಲಸಿಕೆಗೆ WHO ತುರ್ತುಬಳಕೆಗೆ ಒಪ್ಪಿಗೆ ನೀಡಿದೆ. ಆದರೆ ಯುರೋಪಿಯನ್ ಯೂನಿಯನ್ ಒಪ್ಪಿಗೆ ನೀಡಿಲ್ಲ ಎಂದು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದಾರ್ ಪೂನಾವಾಲಾ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ವಿಷಯ ಪ್ರಸ್ತಾಪಿಸಿದ್ದೇವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಕೊವೀಶೀಲ್ಡ್​ ತಯಾರಕರಿಗೆ ಯೂರೋಪಿಯನ್​ ಯೂನಿಯನ್​ನಿಂದ ಸಂಕಷ್ಟ: ಲಸಿಕೆ ನೀಡಿಕೆ ವಿಳಂಬ, ಕೋರ್ಟ್​ ಕೇಸ್ ಸಾಧ್ಯತೆ

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು