AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ

ತನಗೆ ಸಂಬಂಧವಿಲ್ಲದಿದ್ದರೂ ಇಸ್ರೇಲ್ ಜೊತೆ ಸೇರಿ ಇರಾನ್ ಮೇಲೆ ದಂಡೆತ್ತಿ ಹೋಗಿತ್ತು ಅಮೆರಿಕ. ಅಮೆರಿಕದ ಈ ನಡೆಗೆ ಜಗತ್ತಿನಾದ್ಯಂತ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಸಮಯದಲ್ಲಿ ಬೆಂಬಲ ನೀಡದ ಕಾರಣಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ನ್ಯಾಟೋ ಮಿತ್ರರಾಷ್ಟ್ರಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ದೀರ್ಘಕಾಲದ ಯುಎಸ್ ಮಿತ್ರರಾಷ್ಟ್ರಗಳಾಗಿರುವ ನ್ಯಾಟೋ ರಾಷ್ಟ್ರಗಳನ್ನು "ಹೇಡಿಗಳು, ಕಾಗದದ ಹುಲಿಗಳು" ಎಂದು ಟ್ರಂಪ್ ಲೇವಡಿ ಮಾಡಿದ್ದಾರೆ.

ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Mar 20, 2026 | 10:12 PM

Share

ವಾಷಿಂಗ್ಟನ್, ಮಾರ್ಚ್ 20: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ನ ಹಿಡಿತವನ್ನು ಕಡಿಮೆ ಮಾಡಲು ಸೈನ್ಯವನ್ನು ಕಳುಹಿಸಬೇಕೆಂಬ ತನ್ನ ಮನವಿಗೆ ಬೆಂಬಲ ನೀಡದ NATO ಮಿತ್ರರಾಷ್ಟ್ರಗಳ ವಿರುದ್ಧ ಆಕ್ರೋಶಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನ್ಯಾಟೋ ರಾಷ್ಟ್ರಗಳನ್ನು “ಹೇಡಿಗಳು, ಪೇಪರ್ ಟೈಗರ್​ಗಳು” ಎಂದು ಟೀಕಿಸಿದ್ದಾರೆ.

ಟ್ರೂತ್ ಸೋಷಿಯಲ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಟ್ರಂಪ್, ಅಮೆರಿಕ ಇಲ್ಲದೆ NATO “ಕಾಗದದ ಹುಲಿ” ಎಂದು ಹೇಳಿದರು. ಈ ಸಂಘರ್ಷವನ್ನು ಈಗಾಗಲೇ ಮಿಲಿಟರಿ ದಾಳಿಯ ಮೂಲಕ ನಾವು ಗೆದ್ದಿದ್ದೇವೆ. ನಮಗೆ ಯಾವುದೇ ಅಪಾಯವಿಲ್ಲ. ಪರಮಾಣು ಚಾಲಿತ ಇರಾನ್ ಅನ್ನು ನಿಲ್ಲಿಸುವ ಹೋರಾಟಕ್ಕೆ ನ್ಯಾಟೋ ರಾಷ್ಟ್ರಗಳು ಸೇರಲು ಬಯಸಲಿಲ್ಲ. ಈಗ ಹೋರಾಟವು ಮಿಲಿಟರಿಯ ದಾಳಿಯಾಗಿ ಗೆದ್ದಿದೆ. ಈಗ ಅವರು ಹೆಚ್ಚಿನ ತೈಲ ಬೆಲೆಗಳ ಬಗ್ಗೆ ದೂರು ನೀಡುತ್ತಿದ್ದಾರೆ. ಅವರಿಂದಲೇ ತೈಲ ಬೆಲೆ ಹೆಚ್ಚಳವಾಗಿದ್ದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಸಹಾಯ ಮಾಡಲು ಅವರು ಬಯಸಲಿಲ್ಲ. ಅವರ ಈ ವರ್ತನೆಯನ್ನು ನಾವು ನೆನಪಿನಲ್ಲಿಟ್ಟುಕೊಳ್ಳುತ್ತೇನೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಹಾರ್ಮುಜ್ ಜಲಸಂಧಿಯ ಮೂಲಕ ಸಮುದ್ರ ಸಂಚಾರವನ್ನು ಸುರಕ್ಷಿತಗೊಳಿಸಲು ಸಹಾಯ ಮಾಡುವಂತೆ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಮುಖ ಮಿತ್ರರಾಷ್ಟ್ರಗಳನ್ನು ಒತ್ತಾಯಿಸಿದ್ದರು. ಆದರೆ, ನ್ಯಾಟೋ ರಾಷ್ಟ್ರಗಳು ಇದಕ್ಕೆ ಬೆಂಬಲ ನೀಡಿರಲಿಲ್ಲ. ಫೆಬ್ರವರಿ 28ರಂದು ಯುಎಸ್-ಇಸ್ರೇಲ್ ದಾಳಿಯೊಂದಿಗೆ ಪ್ರಾರಂಭವಾದ ಯುದ್ಧವು ಜಾಗತಿಕ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿದೆ. ಇದರಿಂದ ದೊಡ್ಡ ಪ್ರಮಾಣದ ಸಾವುನೋವುಗಳಿಗೆ ಕಾರಣವಾಯಿತು ಮತ್ತು ಲಕ್ಷಾಂತರ ಜನರನ್ನು ಸ್ಥಳಾಂತರಿಸಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ