AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಷಿಂಗ್ಟನ್​ನ ಟಕೋಮಾದಲ್ಲಿ ಗುಂಡಿನ ದಾಳಿ; ನಾಲ್ವರ ಹತ್ಯೆ

ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ವಾಷಿಂಗ್ಟನ್​ನ ಟಕೋಮಾದಲ್ಲಿ ಗುಂಡಿನ ದಾಳಿ; ನಾಲ್ವರ ಹತ್ಯೆ
ವಾಷಿಂಗ್ಟನ್​ನಲ್ಲಿ ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಪೊಲೀಸರು
TV9 Web
| Edited By: |

Updated on: Oct 22, 2021 | 1:27 PM

Share

ವಾಷಿಂಗ್ಟನ್: ಅಮೆರಿಕದ ಟಕೋಮಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಿನ್ನೆ ಸಂಜೆಯ ವೇಳೆಗೆ ಆತನ ಕೂಡ ಸಾವನ್ನಪ್ಪಿದ್ದಾರೆ ಎಂದು ಟಕೋಮಾ ಪೊಲೀಸರು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ.

ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ಈ ಗುಂಡಿನ ದಾಳಿ ನಡೆದಿದೆ. ಸಾವನ್ನಪ್ಪಿರುವವರೆಲ್ಲರೂ 35 ವರ್ಷದೊಳಗಿನವರಾಗಿದ್ದಾರೆ. ಟಕೋಮಾ ನಗರದ ಈಸ್ಟ್ ಸೈಡ್ ಸಮೀಪದ ಎವೆರೆಟ್ ಸ್ಟ್ರೀಟ್ ನ 4200 ಬ್ಲಾಕ್ ನಲ್ಲಿ ಈ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸಂಜೆ 5 ಗಂಟೆಯ ವೇಳೆಗೆ ಗುಂಡಿನದ ದಾಳಿ ನಡೆದಿದ್ದು, ಇದಕ್ಕೆ ಕಾರಣವೇನೆಂಬುದು ಪತ್ತೆಯಾಗಿಲ್ಲ. ದಾಳಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಂಜೆ 6.30ರ ವೇಳೆಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ.

ಅಮೆರಿಕದ ಯೂನಿವರ್ಸಿಟಿಯೊಂದರಲ್ಲಿ ಕೆಲವು ದಿನಗಳ ಹಿಂದೆ ಗುಂಡಿನ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದ. ಏಳು ಮಂದಿ ಗಾಯಗೊಂಡಿದ್ದರು. ಲೂಯಿಸಿಯಾನ ರಾಜ್ಯದ ಗ್ರಾಂಬ್ಲಿಂಗ್​ ಸ್ಟೇಟ್​ ವಿಶ್ವವಿದ್ಯಾಲಯದಲ್ಲಿ ಈ ಗುಂಡಿನ ದಾಳಿ ನಡೆದಿದ್ದು, ಅಕ್ಟೋಬರ್​ 13ರಂದು ಇದೇ ವಿಶ್ವವಿದ್ಯಾಲಯದಲ್ಲಿ ದುಷ್ಕರ್ಮಿಗಳು ಫೈರಿಂಗ್​ ನಡೆಸಿದ್ದರು.

ಇದನ್ನೂ ಓದಿ: ಪೂಂಚ್​​ನಲ್ಲಿ 12ನೇ ದಿನಕ್ಕೆ ಕಾಲಿಟ್ಟ ಉಗ್ರರ ವಿರುದ್ಧದ ಕಾರ್ಯಾಚರಣೆ; ಸೇನೆಯಿಂದ ಗುಂಡಿನ ದಾಳಿ

ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ