AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಷಿಂಗ್ಟನ್​ನ ಟಕೋಮಾದಲ್ಲಿ ಗುಂಡಿನ ದಾಳಿ; ನಾಲ್ವರ ಹತ್ಯೆ

ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ವಾಷಿಂಗ್ಟನ್​ನ ಟಕೋಮಾದಲ್ಲಿ ಗುಂಡಿನ ದಾಳಿ; ನಾಲ್ವರ ಹತ್ಯೆ
ವಾಷಿಂಗ್ಟನ್​ನಲ್ಲಿ ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಪೊಲೀಸರು
TV9 Web
| Edited By: |

Updated on: Oct 22, 2021 | 1:27 PM

Share

ವಾಷಿಂಗ್ಟನ್: ಅಮೆರಿಕದ ಟಕೋಮಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಿನ್ನೆ ಸಂಜೆಯ ವೇಳೆಗೆ ಆತನ ಕೂಡ ಸಾವನ್ನಪ್ಪಿದ್ದಾರೆ ಎಂದು ಟಕೋಮಾ ಪೊಲೀಸರು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ.

ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ಈ ಗುಂಡಿನ ದಾಳಿ ನಡೆದಿದೆ. ಸಾವನ್ನಪ್ಪಿರುವವರೆಲ್ಲರೂ 35 ವರ್ಷದೊಳಗಿನವರಾಗಿದ್ದಾರೆ. ಟಕೋಮಾ ನಗರದ ಈಸ್ಟ್ ಸೈಡ್ ಸಮೀಪದ ಎವೆರೆಟ್ ಸ್ಟ್ರೀಟ್ ನ 4200 ಬ್ಲಾಕ್ ನಲ್ಲಿ ಈ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸಂಜೆ 5 ಗಂಟೆಯ ವೇಳೆಗೆ ಗುಂಡಿನದ ದಾಳಿ ನಡೆದಿದ್ದು, ಇದಕ್ಕೆ ಕಾರಣವೇನೆಂಬುದು ಪತ್ತೆಯಾಗಿಲ್ಲ. ದಾಳಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಂಜೆ 6.30ರ ವೇಳೆಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ.

ಅಮೆರಿಕದ ಯೂನಿವರ್ಸಿಟಿಯೊಂದರಲ್ಲಿ ಕೆಲವು ದಿನಗಳ ಹಿಂದೆ ಗುಂಡಿನ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದ. ಏಳು ಮಂದಿ ಗಾಯಗೊಂಡಿದ್ದರು. ಲೂಯಿಸಿಯಾನ ರಾಜ್ಯದ ಗ್ರಾಂಬ್ಲಿಂಗ್​ ಸ್ಟೇಟ್​ ವಿಶ್ವವಿದ್ಯಾಲಯದಲ್ಲಿ ಈ ಗುಂಡಿನ ದಾಳಿ ನಡೆದಿದ್ದು, ಅಕ್ಟೋಬರ್​ 13ರಂದು ಇದೇ ವಿಶ್ವವಿದ್ಯಾಲಯದಲ್ಲಿ ದುಷ್ಕರ್ಮಿಗಳು ಫೈರಿಂಗ್​ ನಡೆಸಿದ್ದರು.

ಇದನ್ನೂ ಓದಿ: ಪೂಂಚ್​​ನಲ್ಲಿ 12ನೇ ದಿನಕ್ಕೆ ಕಾಲಿಟ್ಟ ಉಗ್ರರ ವಿರುದ್ಧದ ಕಾರ್ಯಾಚರಣೆ; ಸೇನೆಯಿಂದ ಗುಂಡಿನ ದಾಳಿ

ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು