AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಗನ್ ಜೊತೆ ಆಟವಾಡುತ್ತಾ ಮುಖಕ್ಕೆ ಶೂಟ್ ಮಾಡಿಕೊಂಡ 3 ವರ್ಷದ ಬಾಲಕ!

ಅಮೆರಿಕಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಲೂಸಿಯಾನದಲ್ಲಿ 3 ವರ್ಷದ ಬಾಲಕ ತನ್ನ ತಂದೆಯ ಗನ್​ನಿಂದ ತನ್ನ ಮುಖಕ್ಕೆ ಗುಂಡು ಹಾರಿಸಿಕೊಂಡಿದ್ದಾನೆ. ತನ್ನ ಮನೆಯ ಶೆಲ್ಪ್ ಮೇಲೆ ಪಿಸ್ತೂಲ್ ಇಟ್ಟಿದ್ದನ್ನು ಕಂಡ ಬಾಲಕ ಮೇಲೆ ಹತ್ತಿ ಆ ಪಿಸ್ತೂಲ್ ತೆಗೆದುಕೊಂಡು ಆಟವಾಡುವಾಗ ಈ ದುರ್ಘಟನೆ ನಡೆದಿದೆ.

ಅಪ್ಪನ ಗನ್ ಜೊತೆ ಆಟವಾಡುತ್ತಾ ಮುಖಕ್ಕೆ ಶೂಟ್ ಮಾಡಿಕೊಂಡ 3 ವರ್ಷದ ಬಾಲಕ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 20, 2024 | 5:41 PM

Share

ಲೂಸಿಯಾನ: ಅಮೆರಿಕದ ಲೂಸಿಯಾನ ರಾಜ್ಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮೂರು ವರ್ಷದ ಬಾಲಕ ತನ್ನ ತಂದೆಯ ಗನ್‌ ಜೊತೆ ಆಟವಾಡುವಾಗ ಆಕಸ್ಮಿಕವಾಗಿ ತನ್ನ ಮುಖಕ್ಕೆ ಗುಂಡು ಹಾರಿಸಿಕೊಂಡಿದ್ದಾನೆ. ಇದರಿಂದ ಆ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಬೆಡ್​ ರೂಂನಲ್ಲಿ ಇಟ್ಟಿದ್ದ ತನ್ನ ತಂದೆಯ ಗನ್ ಅನ್ನು ತೆಗೆದುಕೊಂಡ ಬಾಲಕ ಅದರೊಂದಿಗೆ ಆಟವಾಡುತ್ತಿದ್ದ. ಇದು ಯಾರ ಗಮನಕ್ಕೂ ಬರಲಿಲ್ಲ. ಈ ವೇಳೆ ಆತ ತನ್ನ ಮುಖದ ಮುಂದೆ ಗನ್ ಹಿಡಿದುಕೊಂಡು ಟ್ರಿಗರ್ ಒತ್ತಿದ್ದಾನೆ. ಇದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಶಬ್ದ ಕೇಳಿ ಓಡಿಬಂದ ಆತನ ತಂದೆ ಅವನನ್ನು ಬದುಕಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆದರೆ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಆ ಗನ್ ಅನ್ನು ಹಾಸಿಗೆಯ ಮೇಲ್ಭಾಗದಲ್ಲಿದ್ದ ಶೆಲ್ಫ್​ನಲ್ಲಿ ಇರಿಸಲಾಗಿತ್ತು. ಹೀಗಾಗಿ, ಆ ಮಗುವಿಗೆ ಅದು ಸುಲಭವಾಗಿ ಸಿಕ್ಕಿತ್ತು.

ಇದನ್ನೂ ಓದಿ: ಬಿಹಾರ: ವಿಐಪಿ ಮುಖ್ಯಸ್ಥ, ಮಾಜಿ ಸಚಿವ ಮುಕೇಶ್​ ಸಹಾನಿ ತಂದೆ ಜಿತನ್ ಹತ್ಯೆ

ತಂದೆ ಬಂದೂಕನ್ನು ಸುರಕ್ಷತೆಯ ದೃಷ್ಟಿಯಿಂದ ಇಟ್ಟುಕೊಂಡಿದ್ದರೂ ಅದನ್ನು ಸರಿಯಾಗಿ ಭದ್ರಪಡಿಸದಿರುವುದು ದುರದೃಷ್ಟಕರ ದುರಂತಕ್ಕೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು