AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ನವಜಾತ ಶಿಶುಗಳನ್ನು ಕೊಂದು ವರ್ಷಗಳ ಕಾಲ ಫ್ರೀಜರ್​ನಲ್ಲಿಟ್ಟಿದ್ಲು ದಕ್ಷಿಣ ಕೊರಿಯಾ ಮಹಿಳೆ

ದಕ್ಷಿಣ ಕೊರಿಯಾದ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಂದು ಶವವನ್ನು ವರ್ಷಗಳ ಕಾಲ ಫ್ರೀಜರ್​ನಲ್ಲಿ ಇರಿಸಿರುವ ಘಟನೆ ಬೆಳಕಿಗೆ ಬಂದಿದೆ.

ತನ್ನ ನವಜಾತ ಶಿಶುಗಳನ್ನು ಕೊಂದು ವರ್ಷಗಳ ಕಾಲ ಫ್ರೀಜರ್​ನಲ್ಲಿಟ್ಟಿದ್ಲು ದಕ್ಷಿಣ ಕೊರಿಯಾ ಮಹಿಳೆ
ಮಗು
ನಯನಾ ರಾಜೀವ್
|

Updated on: Jun 25, 2023 | 10:25 AM

Share

ದಕ್ಷಿಣ ಕೊರಿಯಾದ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಂದು ಶವವನ್ನು ವರ್ಷಗಳ ಕಾಲ ಫ್ರೀಜರ್​ನಲ್ಲಿ ಇರಿಸಿರುವ ಘಟನೆ ಬೆಳಕಿಗೆ ಬಂದಿದೆ. 30 ವರ್ಷದ ಮಹಿಳೆಯು ಮಕ್ಕಳು ಹುಟ್ಟಿ ಒಂದು ದಿನದ ಬಳಿಕ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. 12,10 ಹಾಗೂ 8 ವರ್ಷದ ಮೂರು ಮಕ್ಕಳು ಆಕೆಗೆ ಈಗಾಗಲೇ ಇದ್ದು, ಅವರನ್ನು ನೋಡಿಕೊಳ್ಳುವಲ್ಲಿ ಆರ್ಥಿಕ ತೊಂದರೆಗಳು ಎದುರಾಗುತ್ತಿದ್ದು, ಇನ್ನೂ ಇಬ್ಬರು ಮಕ್ಕಳನ್ನು ಸಾಕುವುದು ಹೇಗೆ ಎಂದು ಆಲೋಚನೆ ಮಾಡಿ ಶಿಶುಗಳನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದಾರೆ.

ಮಹಿಳೆಯು ನವೆಂಬರ್ 2018ರಲ್ಲಿ ನಾಲ್ಕನೇ ಮಗುವನ್ನು ಹತ್ಯೆ ಮಾಡಿದ್ದಳು. ಹೆರಿಗೆಯಾದ ಮರುದಿನ ಹೆಣ್ಣು ಮಗುವನ್ನು ಕತ್ತು ಹಿಸುಕಿ ಮಗುವಿನ ಶವವನ್ನು ತನ್ನ ಮನೆಯ ಫ್ರೀಜರ್​ನಲ್ಲಿರಿಸಿದ್ದಳು. 2019ರಲ್ಲಿ ಜನಿಸಿದ ತನ್ನ ಐದನೇ ಮಗುವಿಗೆ ಅದೇ ರೀತಿ ಮಾಡಿದ್ದಾಳೆ ಎನ್ನಲಾಗಿದೆ.

ಮತ್ತಷ್ಟು ಓದಿ: Mandya News: ಪತ್ನಿ ಮೇಲಿನ ಅನುಮಾನಕ್ಕೆ ಪುಟ್ಟ ಕಂದಮ್ಮಗಳನ್ನ ಸುತ್ತಿಗೆಯಿಂದ ಹೊಡೆದು ಕೊಂದ ತಂದೆ ಅರೆಸ್ಟ್

ಗರ್ಭಪಾತ ಮಾಡಲಾಗಿದೆ ಎಂದು ಆಕೆಯ ಪತಿ ಎಲ್ಲರಿಗೂ ಹೇಳಿದ್ದ, ಆದರೆ ಮೇ ತಿಂಗಳಲ್ಲಿ ಶಿಶುಗಳ ಜನನದ ಗಣತಿ ನಡೆಸಿದಾಗ ಆಸ್ಪತ್ರೆಯಲ್ಲಿ ಮಗು ಹುಟ್ಟಿದೆ ಆದರೆ ಸಾವನ್ನಪ್ಪಿರುವುದು ಹೇಗೆ ಎನ್ನುವ ವಿಚಾರ ಕುರಿತು ತನಿಖೆ ಆರಂಭವಾಯಿತು.

ಆಗ ಮಹಿಳೆಯ ಮನೆಯಲ್ಲಿ ತಪಾಸಣೆ ನಡೆಸಿದಾಗ ಶಿಶುಗಳ ಶವ ಪತ್ತೆಯಾಗಿದೆ. ಮಹಿಳೆ ಮನೆಯಲ್ಲಿ ಒಂದು ಮಗುವನ್ನು ಮತ್ತು ಆಸ್ಪತ್ರೆಯ ಬಳಿ ಮತ್ತೊಂದು ಮಗುವನ್ನು ಕೊಂದಿದ್ದಾಳೆ.

ದಕ್ಷಿಣ ಕೊರಿಯಾದ ಆಡಿಟ್ ಮತ್ತು ತಪಾಸಣೆ ಮಂಡಳಿಯು 2015 ಮತ್ತು 2022 ರ ನಡುವೆ ಜನಿಸಿದ ಸುಮಾರು 2,236 ಶಿಶುಗಳನ್ನು ಅವರ ಪೋಷಕರು ನೋಂದಾಯಿಸಿಲ್ಲ ಎಂಬುದು ಬೆಳಕಿಗೆ ಬಂದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ