AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ನವಜಾತ ಶಿಶುಗಳನ್ನು ಕೊಂದು ವರ್ಷಗಳ ಕಾಲ ಫ್ರೀಜರ್​ನಲ್ಲಿಟ್ಟಿದ್ಲು ದಕ್ಷಿಣ ಕೊರಿಯಾ ಮಹಿಳೆ

ದಕ್ಷಿಣ ಕೊರಿಯಾದ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಂದು ಶವವನ್ನು ವರ್ಷಗಳ ಕಾಲ ಫ್ರೀಜರ್​ನಲ್ಲಿ ಇರಿಸಿರುವ ಘಟನೆ ಬೆಳಕಿಗೆ ಬಂದಿದೆ.

ತನ್ನ ನವಜಾತ ಶಿಶುಗಳನ್ನು ಕೊಂದು ವರ್ಷಗಳ ಕಾಲ ಫ್ರೀಜರ್​ನಲ್ಲಿಟ್ಟಿದ್ಲು ದಕ್ಷಿಣ ಕೊರಿಯಾ ಮಹಿಳೆ
ಮಗು
ನಯನಾ ರಾಜೀವ್
|

Updated on: Jun 25, 2023 | 10:25 AM

Share

ದಕ್ಷಿಣ ಕೊರಿಯಾದ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಂದು ಶವವನ್ನು ವರ್ಷಗಳ ಕಾಲ ಫ್ರೀಜರ್​ನಲ್ಲಿ ಇರಿಸಿರುವ ಘಟನೆ ಬೆಳಕಿಗೆ ಬಂದಿದೆ. 30 ವರ್ಷದ ಮಹಿಳೆಯು ಮಕ್ಕಳು ಹುಟ್ಟಿ ಒಂದು ದಿನದ ಬಳಿಕ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. 12,10 ಹಾಗೂ 8 ವರ್ಷದ ಮೂರು ಮಕ್ಕಳು ಆಕೆಗೆ ಈಗಾಗಲೇ ಇದ್ದು, ಅವರನ್ನು ನೋಡಿಕೊಳ್ಳುವಲ್ಲಿ ಆರ್ಥಿಕ ತೊಂದರೆಗಳು ಎದುರಾಗುತ್ತಿದ್ದು, ಇನ್ನೂ ಇಬ್ಬರು ಮಕ್ಕಳನ್ನು ಸಾಕುವುದು ಹೇಗೆ ಎಂದು ಆಲೋಚನೆ ಮಾಡಿ ಶಿಶುಗಳನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದಾರೆ.

ಮಹಿಳೆಯು ನವೆಂಬರ್ 2018ರಲ್ಲಿ ನಾಲ್ಕನೇ ಮಗುವನ್ನು ಹತ್ಯೆ ಮಾಡಿದ್ದಳು. ಹೆರಿಗೆಯಾದ ಮರುದಿನ ಹೆಣ್ಣು ಮಗುವನ್ನು ಕತ್ತು ಹಿಸುಕಿ ಮಗುವಿನ ಶವವನ್ನು ತನ್ನ ಮನೆಯ ಫ್ರೀಜರ್​ನಲ್ಲಿರಿಸಿದ್ದಳು. 2019ರಲ್ಲಿ ಜನಿಸಿದ ತನ್ನ ಐದನೇ ಮಗುವಿಗೆ ಅದೇ ರೀತಿ ಮಾಡಿದ್ದಾಳೆ ಎನ್ನಲಾಗಿದೆ.

ಮತ್ತಷ್ಟು ಓದಿ: Mandya News: ಪತ್ನಿ ಮೇಲಿನ ಅನುಮಾನಕ್ಕೆ ಪುಟ್ಟ ಕಂದಮ್ಮಗಳನ್ನ ಸುತ್ತಿಗೆಯಿಂದ ಹೊಡೆದು ಕೊಂದ ತಂದೆ ಅರೆಸ್ಟ್

ಗರ್ಭಪಾತ ಮಾಡಲಾಗಿದೆ ಎಂದು ಆಕೆಯ ಪತಿ ಎಲ್ಲರಿಗೂ ಹೇಳಿದ್ದ, ಆದರೆ ಮೇ ತಿಂಗಳಲ್ಲಿ ಶಿಶುಗಳ ಜನನದ ಗಣತಿ ನಡೆಸಿದಾಗ ಆಸ್ಪತ್ರೆಯಲ್ಲಿ ಮಗು ಹುಟ್ಟಿದೆ ಆದರೆ ಸಾವನ್ನಪ್ಪಿರುವುದು ಹೇಗೆ ಎನ್ನುವ ವಿಚಾರ ಕುರಿತು ತನಿಖೆ ಆರಂಭವಾಯಿತು.

ಆಗ ಮಹಿಳೆಯ ಮನೆಯಲ್ಲಿ ತಪಾಸಣೆ ನಡೆಸಿದಾಗ ಶಿಶುಗಳ ಶವ ಪತ್ತೆಯಾಗಿದೆ. ಮಹಿಳೆ ಮನೆಯಲ್ಲಿ ಒಂದು ಮಗುವನ್ನು ಮತ್ತು ಆಸ್ಪತ್ರೆಯ ಬಳಿ ಮತ್ತೊಂದು ಮಗುವನ್ನು ಕೊಂದಿದ್ದಾಳೆ.

ದಕ್ಷಿಣ ಕೊರಿಯಾದ ಆಡಿಟ್ ಮತ್ತು ತಪಾಸಣೆ ಮಂಡಳಿಯು 2015 ಮತ್ತು 2022 ರ ನಡುವೆ ಜನಿಸಿದ ಸುಮಾರು 2,236 ಶಿಶುಗಳನ್ನು ಅವರ ಪೋಷಕರು ನೋಂದಾಯಿಸಿಲ್ಲ ಎಂಬುದು ಬೆಳಕಿಗೆ ಬಂದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?