AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Mocha: ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ, ಇದುವರೆಗೆ 81 ಮಂದಿ ಸಾವು

ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು.

Cyclone Mocha: ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ, ಇದುವರೆಗೆ 81 ಮಂದಿ ಸಾವು
ಚಂಡಮಾರುತImage Credit source: The Hindu
ನಯನಾ ರಾಜೀವ್
|

Updated on: May 17, 2023 | 7:46 AM

Share

ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ ಡೋಕ್ ಗ್ರಾಮಗಳಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ರಾಖೈನ್‌ನ ರಾಜಧಾನಿ ಸಿಟ್ವೆಯ ಉತ್ತರದಲ್ಲಿರುವ ರಾಥೆಡಾಂಗ್ ಟೌನ್‌ಶಿಪ್‌ನ ಹಳ್ಳಿಯಲ್ಲಿ ಧಾರ್ಮಿಕ ಕಟ್ಟಡವೊಂದು ಕುಸಿದು 13 ಜನರು ಸಾವನ್ನಪ್ಪಿದ್ದಾರೆ ಮತ್ತು ಪಕ್ಕದ ಹಳ್ಳಿಯಲ್ಲಿ ಕಟ್ಟಡವೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಟ್ವೆ ಸಮೀಪದ ಬು ಮಾ ಗ್ರಾಮದ ಮುಖ್ಯಸ್ಥ ಕಾರ್ಲೋ ಹೇಳಿದ್ದಾರೆ. ಇದೀಗ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಮೋಕಾ ಎಂಬ ಹೆಸರು ಹೇಗೆ ಬಂತು? ಮಧ್ಯಪ್ರಾಚ್ಯ ಏಷ್ಯಾದ ದೇಶವಾದ ಯೆಮೆನ್ ಈ ಹೆಸರನ್ನು ನೀಡಿದೆ. ಮೋಕಾ ಯೆಮೆನ್‌ನಲ್ಲಿರುವ ಒಂದು ನಗರ, ನಗರವು ಕಾಫಿ ವ್ಯಾಪಾರಕ್ಕೆ ಹೆಸರುವಾಸಿಯಾಗಿದೆ. ಮೋಕಾ ಕಾಫಿ ಎಂಬ ಹೆಸರನ್ನೂ ಇಡಲಾಗಿದೆ.

1982ರ ನಂತರ ರೂಪಗೊಂಡ ಅತಿ ದೊಡ್ಡ ಚಂಡಮಾರುತ ಇದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಬಾಂಗ್ಲಾದೇಶದಲ್ಲಿ ಆಸ್ತಿ-ಪಾಸ್ತಿಗೆ ಹಾನಿಯಾಗಿದ್ದರೂ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ ಎಂದು ತಿಳಿದು ಬಂದಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಎರಡು ದಿನ ಮಳೆ

ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೋಕಾ ಚಂಡಮಾರುತ ಮ್ಯಾನ್ಮಾರ್ ಪಶ್ಚಿಮ ಭಾಗದ ಕರಾವಳಿ ಹಾಗೂ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ.

ಮತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್​ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟು ಮಾಡಿದೆ. 236ಕ್ಕೂ ಅಧಿಕ ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ನಿರಾಶ್ರಿತ ಶಿಬಿರಗಳಲ್ಲಿ ನೀರು ಆವರಿಸಿದ್ದು, ಜನರ ಪರಿಸ್ಥಿತಿ ಅತಂತ್ರವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು