AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು

Shaheen Cyclone in Oman: ಶಾಹೀನ್ ಚಂಡಮಾರುತದಿಂದ ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು
ಚಂಡಮಾರುತ
TV9 Web
| Edited By: |

Updated on:Oct 04, 2021 | 10:23 AM

Share

ನವದೆಹಲಿ: ಓಮನ್ ಕಡೆ ತೆರಳಿರುವ ಶಾಹೀನ್ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 3ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಚಂಡಮಾರುತದ ಪ್ರಯುಕ್ತ ಓಮನ್​ನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿ ಬೀಸಲಾರಂಭಿಸಿದೆ. ಇದರಿಂದ ಮಸ್ಕತ್​ನಿಂದ ತೆರಳುತ್ತಿದ್ದ ವಿಮಾನಗಳ ಸಂಚಾರ ಸ್ಥಗಿತವಾಗಿದೆ. ಇರಾನ್​ನಲ್ಲೂ ಶಾಹೀನ್ ಚಂಡಮಾರುತದ ಅಬ್ಬರ ಜೋರಾಗಿದ್ದು, 6ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಓಮನ್​ನಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಶವಗಳನ್ನು ಹೊರಗೆ ತೆಗೆದಿದ್ದಾರೆ. ಗಂಟೆಗೆ 120 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ವಿಮಾನ ಸಂಚಾರ ವ್ಯತ್ಯಯವಾಗಿದೆ.

ಮಸ್ಕತ್​ನಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮುಳುಗಡೆಯಾಗಿ, ಮನೆಯೊಳಗೆ ನೀರು ನುಗ್ಗಿದೆ. ಶಾಹೀನ್ ಚಂಡಮಾರುತದಿಂದ ಉಂಟಾಗುತ್ತಿರುವ ಅಪಾಯವನ್ನು ತಗ್ಗಿಸಲು ಹಲವೆಡೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇನ್ನೂ ಚಂಡಮಾರುತದ ಅಬ್ಬರ ಹೆಚ್ಚುತ್ತಲೇ ಇದ್ದು, ಸ್ಥಳೀಯ ಸರ್ಕಾರಗಳು ಅಪಾಯವನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಿವೆ. ಓಮನ್​ನಲ್ಲಿ ಮಳೆ ಹೆಚ್ಚಾಗಿರುವುದರಿಂದ 2 ದಿನಗಳ ರಾಷ್ಟ್ರೀಯ ರಜೆಯನ್ನು ಘೋಷಿಸಲಾಗಿದೆ.

ಇರಾನ್​ನ ಚಬಾಹರ್ ಬಂದರಿನಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಇರಾನ್​ನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದು ಅಪಾರ ಹಾನಿಯಾಗಿದೆ. ಇರಾನ್​ನ ಕರಾವಳಿ ತೀರದಲ್ಲಿ 220 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಯುಎಇಯಲ್ಲಿ ಕೂಡ ಶಾಹೀನ್ ಚಂಡಮಾರುತದ ಆತಂಕ ಹೆಚ್ಚಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Cyclone Shaheen: ಇಂದು ಗುಜರಾತ್​ ಪ್ರವೇಶಿಸಲಿದೆ ಶಾಹೀನ್ ಚಂಡಮಾರುತ; ಪಾಕಿಸ್ತಾನದಲ್ಲಿ ಹೆಚ್ಚಲಿದೆ ಸೈಕ್ಲೋನ್ ಅಬ್ಬರ

Published On - 9:58 am, Mon, 4 October 21

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ