AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು

Shaheen Cyclone in Oman: ಶಾಹೀನ್ ಚಂಡಮಾರುತದಿಂದ ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು
ಚಂಡಮಾರುತ
TV9 Web
| Edited By: |

Updated on:Oct 04, 2021 | 10:23 AM

Share

ನವದೆಹಲಿ: ಓಮನ್ ಕಡೆ ತೆರಳಿರುವ ಶಾಹೀನ್ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 3ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಚಂಡಮಾರುತದ ಪ್ರಯುಕ್ತ ಓಮನ್​ನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿ ಬೀಸಲಾರಂಭಿಸಿದೆ. ಇದರಿಂದ ಮಸ್ಕತ್​ನಿಂದ ತೆರಳುತ್ತಿದ್ದ ವಿಮಾನಗಳ ಸಂಚಾರ ಸ್ಥಗಿತವಾಗಿದೆ. ಇರಾನ್​ನಲ್ಲೂ ಶಾಹೀನ್ ಚಂಡಮಾರುತದ ಅಬ್ಬರ ಜೋರಾಗಿದ್ದು, 6ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಓಮನ್​ನಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಶವಗಳನ್ನು ಹೊರಗೆ ತೆಗೆದಿದ್ದಾರೆ. ಗಂಟೆಗೆ 120 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ವಿಮಾನ ಸಂಚಾರ ವ್ಯತ್ಯಯವಾಗಿದೆ.

ಮಸ್ಕತ್​ನಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮುಳುಗಡೆಯಾಗಿ, ಮನೆಯೊಳಗೆ ನೀರು ನುಗ್ಗಿದೆ. ಶಾಹೀನ್ ಚಂಡಮಾರುತದಿಂದ ಉಂಟಾಗುತ್ತಿರುವ ಅಪಾಯವನ್ನು ತಗ್ಗಿಸಲು ಹಲವೆಡೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇನ್ನೂ ಚಂಡಮಾರುತದ ಅಬ್ಬರ ಹೆಚ್ಚುತ್ತಲೇ ಇದ್ದು, ಸ್ಥಳೀಯ ಸರ್ಕಾರಗಳು ಅಪಾಯವನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಿವೆ. ಓಮನ್​ನಲ್ಲಿ ಮಳೆ ಹೆಚ್ಚಾಗಿರುವುದರಿಂದ 2 ದಿನಗಳ ರಾಷ್ಟ್ರೀಯ ರಜೆಯನ್ನು ಘೋಷಿಸಲಾಗಿದೆ.

ಇರಾನ್​ನ ಚಬಾಹರ್ ಬಂದರಿನಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಇರಾನ್​ನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದು ಅಪಾರ ಹಾನಿಯಾಗಿದೆ. ಇರಾನ್​ನ ಕರಾವಳಿ ತೀರದಲ್ಲಿ 220 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಯುಎಇಯಲ್ಲಿ ಕೂಡ ಶಾಹೀನ್ ಚಂಡಮಾರುತದ ಆತಂಕ ಹೆಚ್ಚಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Cyclone Shaheen: ಇಂದು ಗುಜರಾತ್​ ಪ್ರವೇಶಿಸಲಿದೆ ಶಾಹೀನ್ ಚಂಡಮಾರುತ; ಪಾಕಿಸ್ತಾನದಲ್ಲಿ ಹೆಚ್ಚಲಿದೆ ಸೈಕ್ಲೋನ್ ಅಬ್ಬರ

Published On - 9:58 am, Mon, 4 October 21

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!