Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು

Shaheen Cyclone in Oman: ಶಾಹೀನ್ ಚಂಡಮಾರುತದಿಂದ ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು
ಚಂಡಮಾರುತ
Follow us
| Updated By: ಸುಷ್ಮಾ ಚಕ್ರೆ

Updated on:Oct 04, 2021 | 10:23 AM

ನವದೆಹಲಿ: ಓಮನ್ ಕಡೆ ತೆರಳಿರುವ ಶಾಹೀನ್ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 3ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಚಂಡಮಾರುತದ ಪ್ರಯುಕ್ತ ಓಮನ್​ನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿ ಬೀಸಲಾರಂಭಿಸಿದೆ. ಇದರಿಂದ ಮಸ್ಕತ್​ನಿಂದ ತೆರಳುತ್ತಿದ್ದ ವಿಮಾನಗಳ ಸಂಚಾರ ಸ್ಥಗಿತವಾಗಿದೆ. ಇರಾನ್​ನಲ್ಲೂ ಶಾಹೀನ್ ಚಂಡಮಾರುತದ ಅಬ್ಬರ ಜೋರಾಗಿದ್ದು, 6ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಓಮನ್​ನಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಶವಗಳನ್ನು ಹೊರಗೆ ತೆಗೆದಿದ್ದಾರೆ. ಗಂಟೆಗೆ 120 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ವಿಮಾನ ಸಂಚಾರ ವ್ಯತ್ಯಯವಾಗಿದೆ.

ಮಸ್ಕತ್​ನಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮುಳುಗಡೆಯಾಗಿ, ಮನೆಯೊಳಗೆ ನೀರು ನುಗ್ಗಿದೆ. ಶಾಹೀನ್ ಚಂಡಮಾರುತದಿಂದ ಉಂಟಾಗುತ್ತಿರುವ ಅಪಾಯವನ್ನು ತಗ್ಗಿಸಲು ಹಲವೆಡೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇನ್ನೂ ಚಂಡಮಾರುತದ ಅಬ್ಬರ ಹೆಚ್ಚುತ್ತಲೇ ಇದ್ದು, ಸ್ಥಳೀಯ ಸರ್ಕಾರಗಳು ಅಪಾಯವನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಿವೆ. ಓಮನ್​ನಲ್ಲಿ ಮಳೆ ಹೆಚ್ಚಾಗಿರುವುದರಿಂದ 2 ದಿನಗಳ ರಾಷ್ಟ್ರೀಯ ರಜೆಯನ್ನು ಘೋಷಿಸಲಾಗಿದೆ.

ಇರಾನ್​ನ ಚಬಾಹರ್ ಬಂದರಿನಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಇರಾನ್​ನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದು ಅಪಾರ ಹಾನಿಯಾಗಿದೆ. ಇರಾನ್​ನ ಕರಾವಳಿ ತೀರದಲ್ಲಿ 220 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಯುಎಇಯಲ್ಲಿ ಕೂಡ ಶಾಹೀನ್ ಚಂಡಮಾರುತದ ಆತಂಕ ಹೆಚ್ಚಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Cyclone Shaheen: ಇಂದು ಗುಜರಾತ್​ ಪ್ರವೇಶಿಸಲಿದೆ ಶಾಹೀನ್ ಚಂಡಮಾರುತ; ಪಾಕಿಸ್ತಾನದಲ್ಲಿ ಹೆಚ್ಚಲಿದೆ ಸೈಕ್ಲೋನ್ ಅಬ್ಬರ

Published On - 9:58 am, Mon, 4 October 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು