AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಒಡಿಶಾದ ಪಟ್ಟಚಿತ್ರ ತೋರಿಸಿದ ಡೆನ್ಮಾರ್ಕ್​ ಪ್ರಧಾನಿ

ಭಾರತ-ಡೆನ್ಮಾರ್ಕ್​ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಮೆಟ್ಟೆ ಅವರು ಹಲವು ವಿಚಾರಗಳ ಬಗ್ಗೆ ಆಳವಾದ ಚರ್ಚೆ ನಡೆಸಿದ್ದಾರೆ. ಮಾತುಕತೆಯ ಬಳಿಕ ಎರಡೂ ದೇಶಗಳು ದಿಗ್ಗಜರು ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. 

ಪ್ರಧಾನಿ ಮೋದಿಯವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಒಡಿಶಾದ ಪಟ್ಟಚಿತ್ರ ತೋರಿಸಿದ ಡೆನ್ಮಾರ್ಕ್​ ಪ್ರಧಾನಿ
ನರೇಂದ್ರ ಮೋದಿಯವರನ್ನು ತಮ್ಮ ಮನೆಗೆ ಕರೆದುಕೊಂಡು ಹೋದ ಡ್ಯಾನಿಶ್ ಪ್ರಧಾನಿ
TV9 Web
| Edited By: |

Updated on: May 04, 2022 | 4:01 PM

Share

ಕೋಪನ್​​ಹ್ಯಾಗನ್​: ಸದ್ಯ ಡೆನ್ಮಾರ್ಕ್​​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಸ್ವತಃ ಮೆಟ್ಟೆ ಫ್ರೆಡೆರಿಕ್ಸೆನ್​ ಅವರೇ ಪ್ರಧಾನಿಯವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಅವರ ಮನೆಯ ಗೋಡೆಯ ಮೇಲೆ ಇದ್ದ ಒಡಿಶಾದ ಸಾಂಪ್ರದಾಯಿಕ ವರ್ಣಚಿತ್ರವಾದ ಪಟ್ಟಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿಗೆ ತೋರಿಸಿದ್ದಾರೆ. ಅಂದಹಾಗೇ, ಈ ಪಟ್ಟಚಿತ್ರವನ್ನು ಹಿಂದೊಮ್ಮೆ ಮೆಟ್ಟೆ ಫ್ರೆಡೆರಿಕ್ಸೆನ್ ಭಾರತಕ್ಕೆ ಬಂದಿದ್ದಾಗ ಪ್ರಧಾನಿ ಮೋದಿಯವರೇ ಉಡುಗೊರೆಯಾಗಿ ಕೊಟ್ಟಿದ್ದರು.  ಈ ಬಗ್ಗೆ ಕೇಂದ್ರ ಶಿಕ್ಷಣ ಇಲಾಖೆ ಸಚಿವ ಧರ್ಮೇಂದ್ರ ಪ್ರಧಾನ್,  ಟ್ವೀಟ್ ಮಾಡಿ ಕೆಲವು ಫೋಟೋಗಳನ್ನೂ ಶೇರ್ ಮಾಡಿಕೊಂಡಿದ್ದಾರೆ.  ಪ್ರಧಾನಿಯವರು ನೀಡಿದ್ದ ಉಡುಗೊರೆಯನ್ನು ಜತನದಿಂದ ಕಾಪಾಡಿಕೊಂಡು, ಈಗ ಅವರನ್ನು ಮನೆಗೆ ಕರೆದುಕೊಂಡು ಹೋಗಿ ತೋರಿಸಿದ್ದಾರೆ. ಇದೊಂದು ತುಂಬ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

ನರೇಂದ್ರ ಮೋದಿಯವರು ಮೂರು ದಿನಗಳ ಯುರೋಪ್ ದೇಶಗಳ ಪ್ರವಾಸದಲ್ಲಿದ್ದಾರೆ. ಮೊದಲು ಜರ್ಮನಿಗೆ ಭೇಟಿ ಕೊಟ್ಟಿದ್ದ ಅವರು ಅಲ್ಲಿಂದ ಡೆನ್ಮಾರ್ಕ್​ಗೆ ಬಂದಿದ್ದಾರೆ. ಭಾರತ-ಡೆನ್ಮಾರ್ಕ್​ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಮೆಟ್ಟೆ ಅವರು ಹಲವು ವಿಚಾರಗಳ ಬಗ್ಗೆ ಆಳವಾದ ಚರ್ಚೆ ನಡೆಸಿದ್ದಾರೆ. ಮಾತುಕತೆಯ ಬಳಿಕ ಎರಡೂ ದೇಶಗಳು ದಿಗ್ಗಜರು ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.  ಡೆನ್ಮಾರ್ಕ್​​ಗೆ ಬಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭರ್ಜರಿ ಸ್ವಾಗತ ಸಿಕ್ಕಿತು.

ಹಾಗೇ, ಭಾರತೀಯ ಮೂಲದವರೂ ನರೇಂದ್ರ ಮೋದಿಯವರನ್ನು ಡೋಲು, ಡ್ರಮ್​ ವಾದನಗಳ ಮೂಲಕ ಸ್ವಾಗತಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮೋದಿ, ನೀವೆಲ್ಲ ಡೆನ್ಮಾರ್ಕ್​​ನಲ್ಲಿರುವ ನಿಮ್ಮ ಸ್ನೇಹಿತರಿಗೆ ಭಾರತಕ್ಕೆ ಭೇಟಿ ಕೊಡುವಂತೆ ಹೇಳಬೇಕು ಎಂದು ಹೇಳಿದ್ದಾರೆ. ನಾವೆಲ್ಲರೂ ಒಟ್ಟಾಗಿ ಈ ಭೂಮಿಯ ಮೇಲಿನ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳಬೇಕು. ಪರಿಸರಕ್ಕೆ ಪೂರಕವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಬಳಕೆ ಮಾಡಿ-ಹಾಗೇ ಬಿಸಾಡುವ ನಮ್ಮ ಕ್ರಮ ಈ ಭೂಮಿಗೆ ಮಾರಕವಾಗುತ್ತದೆ. ಎಷ್ಟು ಅಗತ್ಯವಿದೆಯೋ ಅಷ್ಟನ್ನೇ ಬಳಸುವ ಕ್ರಮವನ್ನು ರೂಢಿಸಿಕೊಳ್ಳಬೇಕು. ಜೇಬು ದೊಡ್ಡದಿದೆ ಎಂದು ಅನಗತ್ಯವಾಗಿ ತುಂಬಿಸಿಕೊಳ್ಳಬಾರದು ಎಂದು ಹೇಳಿದರು. ಈ ಮೂಲಕ ಏನನ್ನೂ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ