AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಸ್ತೆಯಲ್ಲಿ ಚಲಿಸುತ್ತಿದ್ದ ಇಂಧನ ಟ್ಯಾಂಕರ್​ ಸ್ಪೋಟ; ವಿಡಿಯೋ ನೋಡಿ

ರಸ್ತೆಯ ಮಧ್ಯದಲ್ಲಿದ್ದ ಕಾಂಕ್ರೀಟ್​ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾಗಿ ಸ್ಪೋಟಗೊಂಡಿದೆ. 46 ವರ್ಷದ​ ಚಾಲಕ ಸ್ಪೋಟದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಪೋಸ್ಟ್​ ಹಂಚಿಕೊಳ್ಳಲಾಗಿದೆ.

Shocking News: ರಸ್ತೆಯಲ್ಲಿ ಚಲಿಸುತ್ತಿದ್ದ ಇಂಧನ ಟ್ಯಾಂಕರ್​ ಸ್ಪೋಟ; ವಿಡಿಯೋ ನೋಡಿ
ಟ್ಯಾಂಕರ್​ ಸ್ಪೋಟ
TV9 Web
| Edited By: |

Updated on: Jul 14, 2021 | 10:56 AM

Share

ಇಂಧನ ಟ್ಯಾಂಕರ್​ ಸ್ಪೋಟಗೊಂಡ ಘಟನೆಯೊಂದು ಮಿಚಿಗನ್​ನಲ್ಲಿ(Michigan) ನಡೆದಿದೆ. ಕ್ಯಾಮರಾ ಮೂಲಕ ದೃಶ್ಯ ಸೆರೆಯಾಗಿದೆ. ಘಟನೆ ಸೋಮವಾರ ನಡೆದಿದ್ದು ಕ್ಯಾಮರಾದಲ್ಲಿ ಸೆರೆಸಿಕ್ಕ ದೃಶ್ಯವನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸಾಗುತ್ತಿದ್ದ ಟ್ಯಾಂಕರ್​ (Tanker ) ಕಾಂಕ್ರೀಟ್​​ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಪಲ್ಟಿಯಾದ ವಾಹನ ಸ್ಪೋಟಗೊಂಡಿದೆ. ಅದೃಷ್ಟವಶಾತ್​ ಚಾಲಕ ಯಾವುದೇ ಅಪಾಯವಾಗಿಲ್ಲ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಈ ದೃಶ್ಯವನ್ನು ಟ್ರಾಯ್​ ಪೊಲೀಸ್​ ಇಲಾಖೆ ಫೇಸ್​​ಬುಕ್​ ಪೇಜ್​ನಲ್ಲಿ​ ಹಂಚಿಕೊಂಡಿದೆ.

ರಸ್ತೆಯ ಮಧ್ಯದಲ್ಲಿದ್ದ ಕಾಂಕ್ರೀಟ್​ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾಗಿ ಸ್ಪೋಟಗೊಂಡಿದೆ. ಸೇಂಟ್​ಕೇರ್​ನ 46 ವರ್ಷದ ಟ್ಯಾಂಕರ್​ ಚಾಲಕ ಸ್ಪೋಟದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಪೋಸ್ಟ್​ ಹಂಚಿಕೊಳ್ಳಲಾಗಿದೆ.

ಕ್ಯಾಮೆರಾದಿಂದ ದೃಶ್ಯ ಸೆರೆಯಾಗಿದೆ. ಈ ಘಟನೆಯ ತುಣುಕನ್ನು ಇಲಾಖೆ ಪೋಸ್ಟ್​ ಮಾಡಿದೆ. ಚಾಲಕನು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಣ್ಣ-ಪುಟ್ಟ ಗಾಯಗಳಾಗಿದ್ದು ಆತನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

14,000 ಗ್ಯಾಲನ್​ ಗ್ಯಾಸೋಲಿನ್​ ತುಂಬಿದ ಟ್ಯಾಂಕರ್​ ಆಗಿತ್ತು. ಸ್ಪೋಟಗೊಂಡ ಸುಮಾರು ಎರಡು ಗಂಟೆಯವರೆಗೆ ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್​ ಘಟನೆಯಿಂದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ ಎಂಬುದು ವರದಿಯಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಢಾಕಾದಲ್ಲಿ ಸ್ಪೋಟ: 7 ಮಂದಿ ಸಾವು, ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗುತ್ತಿಗೆದಾರನ ನಿರ್ಲಕ್ಷ್ಯ; ಡಿಟೋನೇಟರ್ ಸ್ಪೋಟಗೊಂಡು ಮಕ್ಕಳು ಆಸ್ಪತ್ರೆಗೆ ದಾಖಲು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್