AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಅಫ್ಘಾನಿಸ್ತಾನ ರಾಯಭಾರಿ ಮಗಳ ಅಪಹರಣ; ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಯುವತಿ

ಘಟನೆಯಿಂದ ನಮಗೂ ಬೇಸರವಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಫ್ಘಾನಿಸ್ತಾನ ರಾಯಭಾರಿ ನಜೀಬುಲ್ಲಾ ಅಲಿಖಿಲ್ ಮತ್ತು ಅವರ ಕುಟುಂಬಕ್ಕೆ ನೀಡಲಾಗಿದ್ದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಪಾಕ್​ ಸರ್ಕಾರ ಹೇಳಿದೆ.

ಪಾಕಿಸ್ತಾನದಲ್ಲಿ ಅಫ್ಘಾನಿಸ್ತಾನ ರಾಯಭಾರಿ ಮಗಳ ಅಪಹರಣ; ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಯುವತಿ
ನಜೀಬುಲ್ಲಾ ಅಲಿಖಿಲ್
TV9 Web
| Edited By: |

Updated on: Jul 18, 2021 | 11:30 AM

Share

ಪಾಕಿಸ್ತಾನದಲ್ಲಿರುವ ಅಫ್ಘಾನಿಸ್ತಾನ (Afghanistan) ರಾಯಭಾರಿ ನಜೀಬುಲ್ಲಾ ಅಲಿಖಿಲ್​​ರ ಮಗಳು ಸಿಲ್​ಸಿಲಾ ಅಲಿಖಿಲ್​​ರನ್ನು ಕೆಲಹೊತ್ತುಗಳ ಕಾಲ ಅಪಹರಿಸಲಾಗಿತ್ತು. ಆಕೆಯನ್ನು ಬಿಡುಗಡೆ ಮಾಡುವುದಕ್ಕೂ ಮೊದಲು ತುಂಬ ಹಿಂಸೆ ನೀಡಲಾಗಿದೆ. ಸಿಲ್​ಸಿಲಾರನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಫ್ಘಾನಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ಹೇಳಿಕೆ ಬಿಡುಗಡೆ ಮಾಡಿದೆ.

ಈ ಘಟನೆ ಜು.16ರಂದು ನಡೆದಿದೆ. ಸಿಲ್​ಸಿಲಾ ಅಲಿಖಿಲ್​ ಪಾಕಿಸ್ತಾನ(Pakistan) ದಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಆಕೆಯನ್ನು ಅಪರಿಚಿತರು ಯಾರೋ ಅಪಹರಿಸಿದ್ದರು. ಕೆಲವು ತಾಸುಗಳ ಬಳಿಕ ಬಿಡುಗಡೆ ಮಾಡಿದರೂ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಇದ್ದರು. ನಾವು ಈ ಕ್ರೂರ ಕೃತ್ಯವನ್ನು ಖಂಡಿಸುತ್ತೇವೆ. ಪಾಕಿಸ್ತಾನದಲ್ಲಿರುವ ಅಫ್ಘಾನಿಸ್ತಾನದ ರಾಯಭಾರಿಗಳು, ಧೂತರು, ಹೈಕಮೀಷನರ್​ಗಳು ಅವರ ಕುಟುಂಬ ಮತ್ತು ಮಕ್ಕಳ ಬಗ್ಗೆ ನಿಜಕ್ಕೂ ಆತಂಕವಾಗುತ್ತಿದೆ. ಅವರ ರಕ್ಷಣೆಯ ಬಗ್ಗೆ ಚಿಂತಾಕ್ರಾಂತರಾಗಿದ್ದೇವೆ ಎಂದು ಆಫ್ಘಾನ್​ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಹಾಗೇ, ಅಂತಾರಾಷ್ಟ್ರೀಯ ಮಟ್ಟದ ಒಪ್ಪಂದದಂತೆ ನಮ್ಮ ರಾಯಭಾರಿಗಳು, ಅಧಿಕಾರಿಗಳು ಮತ್ತವರ ಕುಟುಂಬಗಳ ರಕ್ಷಣೆ ಬಗ್ಗೆ ಗಮನಹರಿಸಿ..ಈ ಅಪಹರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಿ ಎಂದು ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ.

ಇನ್ನು ಈ ಬಗ್ಗೆ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಕಚೇರಿಯೂ ಪ್ರತಿಕ್ರಿಯೆ ನೀಡಿದ್ದು, ಸಿಲ್​ಸಿಲಾ ಅಲಿಖಿಲ್ ಬಾಡಿಗೆ ವಾಹನದ ಮೇಲೆ ತೆರಳುತ್ತಿದ್ದ ವೇಳೆ ಅವರ ಮೇಲೆ ಹಲ್ಲೆಯಾಗಿದೆ ಎಂದು ಅಫ್ಘಾನ್​ ವಿದೇಶಾಂಗ ವ್ಯವಹಾರಗಳ ಇಲಾಖೆ ನಮಗೆ ಹೇಳಿತ್ತು. ಅದೇನೆ ಇರಲಿ ಈ ಘಟನೆಯಿಂದ ನಮಗೂ ಬೇಸರವಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಫ್ಘಾನಿಸ್ತಾನ ರಾಯಭಾರಿ ನಜೀಬುಲ್ಲಾ ಅಲಿಖಿಲ್ ಮತ್ತು ಅವರ ಕುಟುಂಬಕ್ಕೆ ನೀಡಲಾಗಿದ್ದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಪ್ರತಿ ಹೇಳಿಕೆ ಬಿಡುಗಡೆ ಮಾಡಿದ್ದಾಗಿ ರಾಯಿಟರ್ಸ್​ ವರದಿ ಮಾಡಿದೆ.

ಇದನ್ನೂ ಓದಿ: Prem Press Meet: ದರ್ಶನ್ ‘ಜೋಗಿ ಪ್ರೇಮ್ ಪುಡಾಂಗ್’ ಎಂದಿದ್ದು ಬೇಸರವಾಗಿದೆ; ನಿರ್ದೇಶಕ ಪ್ರೇಮ್

Daughter of Afghanistans envoy abducted in Pakistan

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು