AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ಪಕ್ಷದ ಕಾರ್ಯಕ್ರಮದ ವೇಳೆ ಎಕೆ-47 ಹಿಡಿದಿದ್ದ ಮುಸುಕುಧಾರಿಯ ಬಂಧನ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ಹತ್ಯೆಯ ಪ್ರಯತ್ನ ವಿಫಲವಾದ ಕೆಲವೇ ದಿನಗಳಲ್ಲಿ, ರಿಪಬ್ಲಿಕನ್ ರಾಷ್ಟ್ರೀಯ ಸಮಾವೇಶ ನಡೆಯುತ್ತಿರುವ ಪ್ರದೇಶದಲ್ಲಿ ಮಾಸ್ಕ್ ಧರಿಸಿದ್ದ ಶಸ್ತ್ರಸಜ್ಜಿತ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಟ್ರಂಪ್ ಪಕ್ಷದ ಕಾರ್ಯಕ್ರಮದ ವೇಳೆ ಎಕೆ-47 ಹಿಡಿದಿದ್ದ ಮುಸುಕುಧಾರಿಯ ಬಂಧನ
ಡೊನಾಲ್ಡ್​ ಟ್ರಂಪ್
Follow us
ನಯನಾ ರಾಜೀವ್
|

Updated on: Jul 17, 2024 | 9:05 AM

ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ಭಾಷಣದ ವೇಳೆ ಟ್ರಂಪ್​ ಮೇಲೆ ನಡೆದ ಮಾರಣಾಂತಿಕ ದಾಳಿ ಮಾಸುವ ಮುನ್ನ ಮತ್ತೊಂದು ಘಟನೆ ನಡೆದಿದೆ. ಅವರ ಭದ್ರತೆ ವಿರುದ್ಧ ಕಳವಳ ವ್ಯಕ್ತವಾಗಿರುವ ಬೆನ್ನಲ್ಲೇ ರಿಪಬ್ಲಿಕನ್ ಪಕ್ಷದ ಸಮಾವೇಶದ ಸ್ಥಳದಲ್ಲಿ ಎಕೆ-47 ಹಿಡಿದು ನಿಂತಿದ್ದ ಮುಸುಕುಧಾರಿಯನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ರಿಪಬ್ಲಿಕನ್ ರಾಷ್ಟ್ರೀಯ ಸಮಾವೇಶ ಮಿಲ್ವಾಕಿಯಲ್ಲಿ ಆಯೋಜಿಸಲಾಗಿತ್ತು, ಈ ಸಮಾವೇಶದಲ್ಲಿ ಟ್ರಂಪ್ ರಿಪಬ್ಲಿಕನ್ ಪಕ್ಷದಿಂದ ಅಧಿಕೃತ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಆಯ್ಕೆಯಾದರು. ಪೊಲೀಸರು ಇದೀಗ 21 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಆತ ಕೈಯಲ್ಲಿ ಎಕೆ47 ರೈಫಲ್ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಎನ್ನಲಾಗಿದೆ.

ಯುವಕನ ಉಡುಗೆ ನೋಡಿದ ಪೊಲೀಸರಿಗೆ ಅನುಮಾನ ಬಂದಿತ್ತು, ಆತ ಮಾಸ್ಕ್​ ಧರಿಸಿದ್ದ, ಅವನೊಂದಿಗೆ ಒಂದು ಬ್ಯಾಗ್ ಕೂಡ ಇತ್ತು, ಬ್ಯಾಗ್ ಪರಿಶೀಲಿಸಿದಾಗ ಎಕೆ47 ರೈಫಲ್ ಹಾಗೂ ಗುಂಡುಗಳು ಪತ್ತೆಯಾಗಿವೆ. ಹಾಗೆಯೇ ಸಮಾವೇಶದಲ್ಲಿ ಚಾಕು ಹಿಡಿದು ಓಡಾಡುತ್ತಿದ್ದ ಶಂಕಿತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: Donald Trump: ಗುಂಡಿನ ದಾಳಿಯ ನಂತರ ಕಿವಿಗೆ ಬ್ಯಾಂಡೇಜ್ ಹಾಕಿಕೊಂಡೇ ವೇದಿಕೆಯೇರಿದ ಟ್ರಂಪ್

ಅಲ್ಲಿ ಇನ್ನೊಬ್ಬ ವ್ಯಕ್ತಿಯ ಮೇಲೆ ದಾಳಿ ಮಾಡಲು ಉದ್ದೇಶದಿಂದ ಮುಂದಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಪೊಲೀಸರು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಟ್ರಂಪ್ ಭಾಷಣ ಮಾಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

ಟ್ರಂಪ್ ಕಿವಿಗೆ ಸಣ್ಣ ಗಾಯವಾಗಿದ್ದು ಬಿಟ್ಟರೆ ಹೆಚ್ಚಿನ ಸಮಸ್ಯೆಯಾಗಿಲ್ಲ, ದಾಳಿಕೋರ ಓರ್ವ ವ್ಯಕ್ತಿಯನ್ನು ಕೊಂದಿದ್ದ, ಬಳಿಕ ಸ್ನೈಪರ್​ಗಳು ದಾಳಿಕೋರನನ್ನು ಹತ್ಯೆ ಮಾಡಿದ್ದಾರೆ. ಟ್ರಂಪ್ ಟೆಲಿಪ್ರಾಂಪ್ಟರ್​ ಬಳಸುತ್ತಾರೆ ಅದಕ್ಕೆ ಗುಂಡು ತಾಕಿದ ಪರಿಣಾಮ ಅದು ತುಂಡಾಗಿ ಗಾಜಿನ ತುಂಡುಗಳು ಟ್ರಂಪ್ ಕಿವಿ ಹೊಕ್ಕಿದ್ದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ