AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ಮಾರ್‌ನ ಆಸ್ಪತ್ರೆ ಮೇಲೆ ಮಿಲಿಟರಿಯಿಂದ ವೈಮಾನಿಕ ದಾಳಿ; 34 ಜನ ಸಾವು

ಮ್ಯಾನ್ಮಾರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆದಿದೆ. ಈ ದುರಂತದಲ್ಲಿ ನಾಗರಿಕರು ಮತ್ತು ಆರೋಗ್ಯ ಕಾರ್ಯಕರ್ತರು ಸೇರಿದಂತೆ 34 ಮಂದಿ ಸಾವನ್ನಪ್ಪಿದ್ದಾರೆ. ರಾಖೈನ್ ರಾಜ್ಯದಲ್ಲಿರುವ ಸಾರ್ವಜನಿಕ ಆಸ್ಪತ್ರೆಯ ಮೇಲೆ ಮ್ಯಾನ್ಮಾರ್ ಮಿಲಿಟರಿ ಜುಂಟಾ ನಡೆಸಿದ ಮಾರಕ ವೈಮಾನಿಕ ದಾಳಿಯಲ್ಲಿ 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳಿಗೆ ವೈದ್ಯಕೀಯ ಆರೈಕೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಫೈಟರ್ ಜೆಟ್‌ನಿಂದ ಎರಡು ಬಾಂಬ್‌ಗಳನ್ನು ಎಸೆಯಲಾಗಿದೆ. ಈ ದಾಳಿಯಲ್ಲಿ ಹಲವಾರು ನಾಗರಿಕರು ಮತ್ತು ಆರೋಗ್ಯ ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಮ್ಯಾನ್ಮಾರ್‌ನ ಆಸ್ಪತ್ರೆ ಮೇಲೆ ಮಿಲಿಟರಿಯಿಂದ ವೈಮಾನಿಕ ದಾಳಿ; 34 ಜನ ಸಾವು
Myanmar Airstrike
ಸುಷ್ಮಾ ಚಕ್ರೆ
|

Updated on: Dec 11, 2025 | 7:53 PM

Share

ನವದೆಹಲಿ, ಡಿಸೆಂಬರ್ 11: ಪಶ್ಚಿಮ ರಾಜ್ಯವಾದ ರಾಖೈನ್‌ನಲ್ಲಿರುವ ಜನಾಂಗೀಯ ಅರಕನ್ ಸೈನ್ಯದ ನಿಯಂತ್ರಣದಲ್ಲಿರುವ ಪ್ರದೇಶವಾದ ಮ್ರೌಕ್-ಯು ಪಟ್ಟಣದಲ್ಲಿರುವ ಜನರಲ್ ಆಸ್ಪತ್ರೆಯ ಮೇಲೆ ಬುಧವಾರ ರಾತ್ರಿ ನಡೆದ ದಾಳಿಯಲ್ಲಿ ಸುಮಾರು 80 ಜನರು ಗಾಯಗೊಂಡಿದ್ದಾರೆ. ಮ್ಯಾನ್ಮಾರ್​​​ನ (Myanmar) ರಾಖೈನ್ ರಾಜ್ಯದ ಮ್ರೌಕ್-ಯು ಟೌನ್‌ಶಿಪ್‌ನಲ್ಲಿರುವ ಸಾರ್ವಜನಿಕ ಆಸ್ಪತ್ರೆಯ ಮೇಲೆ ಮ್ಯಾನ್ಮಾರ್‌ನ ಮಿಲಿಟರಿ ಜುಂಟಾ ನಡೆಸಿದ ಮಾರಕ ವೈಮಾನಿಕ ದಾಳಿಯಲ್ಲಿ 34 ಜನರು ಸಾವನ್ನಪ್ಪಿದ್ದಾರೆ. ಮ್ಯಾನ್ಮಾರ್‌ನ ಅಂತರ್ಯುದ್ಧ ಪ್ರಾರಂಭವಾದಾಗಿನಿಂದ ಜುಂಟಾ ವರ್ಷದಿಂದ ವರ್ಷಕ್ಕೆ ವಾಯುದಾಳಿಗಳನ್ನು ಹೆಚ್ಚಿಸಿದೆ.

ಮ್ಯಾನ್ಮಾರ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಪ್ರಮುಖ ಬಂಡುಕೋರ ಸಶಸ್ತ್ರ ಪಡೆ ನಿಯಂತ್ರಣವಿರುವ ಪ್ರದೇಶದಲ್ಲಿ ಆಸ್ಪತ್ರೆ ನಾಶವಾಗಿದೆ. ಇದರಲ್ಲಿ 34 ರೋಗಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ರಾಖೈನ್‌ನಲ್ಲಿನ ರಕ್ಷಣಾ ಸೇವೆಗಳ ಹಿರಿಯ ಅಧಿಕಾರಿ ವೈ ಹುನ್ ಆಂಗ್, ಫೈಟರ್ ಜೆಟ್ ರಾತ್ರಿ 9.13ಕ್ಕೆ ಎರಡು ಬಾಂಬ್‌ಗಳನ್ನು ಎಸೆಯಿತು ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಅರೆಸೇನಾ ಪಡೆಯ ಪ್ರಧಾನ ಕಚೇರಿ ಮೇಲೆ ಭೀಕರ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 6 ಮಂದಿ ಸಾವು

ರಾಖೈನ್ ಮೂಲದ ಆನ್‌ಲೈನ್ ಮಾಧ್ಯಮವು ಹಾನಿಗೊಳಗಾದ ಕಟ್ಟಡಗಳು ಮತ್ತು ವೈದ್ಯಕೀಯ ಉಪಕರಣಗಳು ಸೇರಿದಂತೆ ಭಗ್ನಾವಶೇಷಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್
ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್