AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​
ಪಾಕಿಸ್ತಾನದಲ್ಲಿ ಬಾಂಬ್​ ಬ್ಲಾಸ್ಟ್​
Lakshmi Hegde
|

Updated on: Apr 22, 2021 | 9:26 AM

Share

ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ನಗರದ ಐಷಾರಾಮಿ ಹೋಟೆಲ್​​ನ ಕಾರ್​ ಪಾರ್ಕಿಂಗ್​ ಸ್ಥಳದಲ್ಲಿ ಪ್ರಬಲ ಬಾಂಬ್​ ಸ್ಫೋಟವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹೊಟೆಲ್​ ಹೆಸರು ಸೆರೆನಾ ಎಂದಾಗಿದ್ದು, ಬಾಂಬ್​ ಸ್ಫೋಟ ಮಾಡಿದ್ಯಾರು? ಕಾರಣವೇನು ಎಂಬುದಿನ್ನೂ ಗೊತ್ತಾಗಿಲ್ಲ. ಚೀನಾ ರಾಯಭಾರಿ ಸೇರಿ ನಾಲ್ವರ ನಿಯೋಗ ಇದೇ ಹೋಟೆಲ್​​ನಲ್ಲಿ ಇತ್ತು ಎಂದು ವರದಿಯಾಗಿದೆ.

ಹೋಟೆಲ್ ಕಾರ್ ಪಾರ್ಕಿಂಗ್​ ಬಳಿ ಸ್ಫೋಟವಾಗಿದ್ದನ್ನು ಪಾಕಿಸ್ತಾನ ಆಂತರಿಕ ವ್ಯವಹಾರಗಳ ಸಚಿವ ಶೇಖ್​ ರಶೀದ್​ ಅಹ್ಮದ್​ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು, ಇದು ಉಗ್ರರ ಕೈವಾಡ ಎಂದಿದ್ದಾರೆ. ಇನ್ನು ಚೀನಾ ರಾಯಭಾರಿಯ ಆತಿಥ್ಯಕ್ಕಾಗಿ ಇದೇ ಹೊಟೆಲ್​ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಾಂಬ್​ ಸ್ಫೋಟವಾದ ವೇಳೆ ಅವರು ಮೀಟಿಂಗ್​ ನಿಮಿತ್ತ ಹೊರಹೋಗಿದ್ದರು ಎಂದು ತಿಳಿಸಿದ್ದಾರೆ.

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ. ಬಲೂಚಿಸ್ತಾನಕ್ಕೆ ಸ್ವಾತಂತ್ರ್ಯ ಬೇಕು ಎಂಬುದು ಅವರ ದಶಕಗಳ ಬೇಡಿಕೆಯಾಗಿದ್ದು, ಆಗಾಗ ಹಿಂಸಾಚಾರ ನಡೆಸುತ್ತಲೇ ಇರುತ್ತಾರೆ. ಆದರೆ ಈ ಬಾಂಬ್ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಬೆಳಕಿಗೆ ಬರಬೇಕಿದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಹಿರಿಯ ಪುತ್ರ ಕೊವಿಡ್​ ಸೋಂಕಿನಿಂದ ಸಾವು

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!