AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​
ಪಾಕಿಸ್ತಾನದಲ್ಲಿ ಬಾಂಬ್​ ಬ್ಲಾಸ್ಟ್​
Lakshmi Hegde
|

Updated on: Apr 22, 2021 | 9:26 AM

Share

ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ನಗರದ ಐಷಾರಾಮಿ ಹೋಟೆಲ್​​ನ ಕಾರ್​ ಪಾರ್ಕಿಂಗ್​ ಸ್ಥಳದಲ್ಲಿ ಪ್ರಬಲ ಬಾಂಬ್​ ಸ್ಫೋಟವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹೊಟೆಲ್​ ಹೆಸರು ಸೆರೆನಾ ಎಂದಾಗಿದ್ದು, ಬಾಂಬ್​ ಸ್ಫೋಟ ಮಾಡಿದ್ಯಾರು? ಕಾರಣವೇನು ಎಂಬುದಿನ್ನೂ ಗೊತ್ತಾಗಿಲ್ಲ. ಚೀನಾ ರಾಯಭಾರಿ ಸೇರಿ ನಾಲ್ವರ ನಿಯೋಗ ಇದೇ ಹೋಟೆಲ್​​ನಲ್ಲಿ ಇತ್ತು ಎಂದು ವರದಿಯಾಗಿದೆ.

ಹೋಟೆಲ್ ಕಾರ್ ಪಾರ್ಕಿಂಗ್​ ಬಳಿ ಸ್ಫೋಟವಾಗಿದ್ದನ್ನು ಪಾಕಿಸ್ತಾನ ಆಂತರಿಕ ವ್ಯವಹಾರಗಳ ಸಚಿವ ಶೇಖ್​ ರಶೀದ್​ ಅಹ್ಮದ್​ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು, ಇದು ಉಗ್ರರ ಕೈವಾಡ ಎಂದಿದ್ದಾರೆ. ಇನ್ನು ಚೀನಾ ರಾಯಭಾರಿಯ ಆತಿಥ್ಯಕ್ಕಾಗಿ ಇದೇ ಹೊಟೆಲ್​ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಾಂಬ್​ ಸ್ಫೋಟವಾದ ವೇಳೆ ಅವರು ಮೀಟಿಂಗ್​ ನಿಮಿತ್ತ ಹೊರಹೋಗಿದ್ದರು ಎಂದು ತಿಳಿಸಿದ್ದಾರೆ.

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ. ಬಲೂಚಿಸ್ತಾನಕ್ಕೆ ಸ್ವಾತಂತ್ರ್ಯ ಬೇಕು ಎಂಬುದು ಅವರ ದಶಕಗಳ ಬೇಡಿಕೆಯಾಗಿದ್ದು, ಆಗಾಗ ಹಿಂಸಾಚಾರ ನಡೆಸುತ್ತಲೇ ಇರುತ್ತಾರೆ. ಆದರೆ ಈ ಬಾಂಬ್ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಬೆಳಕಿಗೆ ಬರಬೇಕಿದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಹಿರಿಯ ಪುತ್ರ ಕೊವಿಡ್​ ಸೋಂಕಿನಿಂದ ಸಾವು

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ