AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​
ಪಾಕಿಸ್ತಾನದಲ್ಲಿ ಬಾಂಬ್​ ಬ್ಲಾಸ್ಟ್​
Lakshmi Hegde
|

Updated on: Apr 22, 2021 | 9:26 AM

Share

ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ನಗರದ ಐಷಾರಾಮಿ ಹೋಟೆಲ್​​ನ ಕಾರ್​ ಪಾರ್ಕಿಂಗ್​ ಸ್ಥಳದಲ್ಲಿ ಪ್ರಬಲ ಬಾಂಬ್​ ಸ್ಫೋಟವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹೊಟೆಲ್​ ಹೆಸರು ಸೆರೆನಾ ಎಂದಾಗಿದ್ದು, ಬಾಂಬ್​ ಸ್ಫೋಟ ಮಾಡಿದ್ಯಾರು? ಕಾರಣವೇನು ಎಂಬುದಿನ್ನೂ ಗೊತ್ತಾಗಿಲ್ಲ. ಚೀನಾ ರಾಯಭಾರಿ ಸೇರಿ ನಾಲ್ವರ ನಿಯೋಗ ಇದೇ ಹೋಟೆಲ್​​ನಲ್ಲಿ ಇತ್ತು ಎಂದು ವರದಿಯಾಗಿದೆ.

ಹೋಟೆಲ್ ಕಾರ್ ಪಾರ್ಕಿಂಗ್​ ಬಳಿ ಸ್ಫೋಟವಾಗಿದ್ದನ್ನು ಪಾಕಿಸ್ತಾನ ಆಂತರಿಕ ವ್ಯವಹಾರಗಳ ಸಚಿವ ಶೇಖ್​ ರಶೀದ್​ ಅಹ್ಮದ್​ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು, ಇದು ಉಗ್ರರ ಕೈವಾಡ ಎಂದಿದ್ದಾರೆ. ಇನ್ನು ಚೀನಾ ರಾಯಭಾರಿಯ ಆತಿಥ್ಯಕ್ಕಾಗಿ ಇದೇ ಹೊಟೆಲ್​ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಾಂಬ್​ ಸ್ಫೋಟವಾದ ವೇಳೆ ಅವರು ಮೀಟಿಂಗ್​ ನಿಮಿತ್ತ ಹೊರಹೋಗಿದ್ದರು ಎಂದು ತಿಳಿಸಿದ್ದಾರೆ.

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ. ಬಲೂಚಿಸ್ತಾನಕ್ಕೆ ಸ್ವಾತಂತ್ರ್ಯ ಬೇಕು ಎಂಬುದು ಅವರ ದಶಕಗಳ ಬೇಡಿಕೆಯಾಗಿದ್ದು, ಆಗಾಗ ಹಿಂಸಾಚಾರ ನಡೆಸುತ್ತಲೇ ಇರುತ್ತಾರೆ. ಆದರೆ ಈ ಬಾಂಬ್ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಬೆಳಕಿಗೆ ಬರಬೇಕಿದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಹಿರಿಯ ಪುತ್ರ ಕೊವಿಡ್​ ಸೋಂಕಿನಿಂದ ಸಾವು

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ