AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Boxer: ಮೋಸ್ಟ್​ ವಾಂಡೆಟ್ ಗ್ಯಾಂಗ್​ಸ್ಟರ್ ದೀಪಕ್​ ಬಾಕ್ಸರ್​ನನ್ನು ಮೆಕ್ಸಿಕೋದಲ್ಲಿ ಸೆರೆ ಹಿಡಿದ ದೆಹಲಿ ಪೊಲೀಸರು

ದೆಹಲಿಯ ಮೋಸ್ಟ್ ವಾಂಟೆಡ್ ಗ್ಯಾಂಗ್​ಸ್ಟರ್ ದೀಪಕ್ ಬಾಕ್ಸರ್​ನಲ್ಲಿ ದೆಹಲಿ ಪೊಲೀಸರು ಮೆಕ್ಸಿಕೋದಲ್ಲಿ ಬಂಧಿಸಿದ್ದಾರೆ. ಈ ವಾರದ ಕೊನೆಯಲ್ಲಿ ಭಾರತಕ್ಕೆ ಕರೆತರಲಾಗುವುದು

Deepak Boxer: ಮೋಸ್ಟ್​ ವಾಂಡೆಟ್ ಗ್ಯಾಂಗ್​ಸ್ಟರ್ ದೀಪಕ್​ ಬಾಕ್ಸರ್​ನನ್ನು ಮೆಕ್ಸಿಕೋದಲ್ಲಿ ಸೆರೆ ಹಿಡಿದ ದೆಹಲಿ ಪೊಲೀಸರು
ದೀಪಕ್ ಬಾಕ್ಸರ್
Follow us
ನಯನಾ ರಾಜೀವ್
|

Updated on: Apr 04, 2023 | 8:27 AM

ದೆಹಲಿಯ ಮೋಸ್ಟ್ ವಾಂಟೆಡ್ ಗ್ಯಾಂಗ್​ಸ್ಟರ್ ದೀಪಕ್ ಬಾಕ್ಸರ್​ನಲ್ಲಿ ದೆಹಲಿ ಪೊಲೀಸರು ಮೆಕ್ಸಿಕೋದಲ್ಲಿ ಬಂಧಿಸಿದ್ದಾರೆ. ಈ ವಾರದ ಕೊನೆಯಲ್ಲಿ ಭಾರತಕ್ಕೆ ಕರೆತರಲಾಗುವುದು, ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸಹಾಯದಿಂದ ದೆಹಲಿಯ ವಿಶೇಷ ತಂಡವು ಬಾಕ್ಸರ್ ಅನ್ನು ಮೆಕ್ಸಿಕೊದಲ್ಲಿ ಹಿಡಿದಿದೆ. 2022ರಲ್ಲಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಹಾಗೆಯೇ ಬಿಲ್ಡರ್ ಅಮಿತ್ ಗುಪ್ತಾ  ಅವರ ಮೇಲೆ ನಡುರಸ್ತೆಯಲ್ಲಿ ಹಲವು ಬಾರಿ ಗುಂಡು ಹಾರಿಸಿದ್ದ.

ದೆಹಲಿ ಪೊಲೀಸರು ಭಾರತದ ಹೊರಗೆ ಗ್ಯಾಂಗ್​ಸ್ಟರ್​ನನ್ನು ಬಂಧಿಸಿರುವುದು ಇದೇ ಮೊದಲು. ದೀಪಕ್ ಬಾಕ್ಸರ್, ಲೋರೇಶ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನ ಕುಖ್ಯಾತ ಗ್ಯಾಂಗ್​ಸ್ಟರ್, ದೀಪಕ್​ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು 3 ಲಕ್ಷ ರೂ, ಬಹುಮಾನ ನೀಡುವುದಾಗಿ ಘೋಷಿಸಿದ್ದರು.

ಮತ್ತಷ್ಟು ಓದಿ: ಗ್ಯಾಂಗ್​ ಸ್ಟಾರ್ ಆಗಬೇಕು ಅಂದುಕೊಂಡವನ ಇಂಟರೆಸ್ಟಿಂಗ್ ಸ್ಟೋರಿ: ಮೊದಲ ಪ್ರಯತ್ನದಲ್ಲೇ ಕೊಲೆ ಕೇಸ್​ನಲ್ಲಿ ಅಂದರ್

ದೀಪಕ್ ಬಾಕ್ಸರ್ ವಿದೇಶಕ್ಕೆ ಪರಾರಿಯಾಗಲು ಲೋರೇಶ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಸಹಾಯ ಮಾಡಿದ್ದರು ಎನ್ನಲಾಗಿದೆ. ದೀಪಕ್ ಬಾಕ್ಸರ್ ನಕಲಿ ಪಾಸ್‌ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ದೆಹಲಿ ಪೊಲೀಸರು ಕೆಲವು ದಿನಗಳ ಹಿಂದೆ ತಿಳಿಸಿದ್ದರು. ದೀಪಕ್ ಬಾಕ್ಸರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

2021 ರಲ್ಲಿ, ಜಿತೇಂದ್ರ ಗೋಗಿ ಹತ್ಯೆಯ ನಂತರ, ದೀಪಕ್ ಗೋಗಿ ಗ್ಯಾಂಗ್ ಅನ್ನು ಮುನ್ನಡೆಸಲು ಪ್ರಾರಂಭಿಸಿದ್ದ. ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಜಿತೇಂದ್ರ ಗೋಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಗ್ಯಾಂಗ್ ಸದಸ್ಯರು ಕೊಲೆ, ಸುಲಿಗೆಯನ್ನು ನಡೆಸುತ್ತಾರೆ. ಗೋಗಿ ಗ್ಯಾಂಗ್‌ನಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಇದ್ದಾರೆ ಎನ್ನಲಾಗಿದೆ.

ದೀಪಕ್ ಬಾಕ್ಸರ್‌ನ ನಿಜವಾದ ಹೆಸರು ದೀಪಕ್ ಪಹಲ್, 15ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಆರಂಭಿಸಿದ ದೀಪಕ್ ಒಂದು ವರ್ಷದೊಳಗೆ 57 ಕೆಜಿ ವಿಭಾಗದಲ್ಲಿ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಕೂಡ ಆಗಿದ್ದರು. ಜನವರಿ 29 ರಂದು ಕೋಲ್ಕತ್ತಾದಿಂದ ರವಿ ಆಂಟಿಲ್ ಎಂಬ ಹೆಸರಿನಲ್ಲಿ ಮೆಕ್ಸಿಕೋಗೆ ತೆರಳಿದ್ದ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ