AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕೆಂದೇ ಕೊವಿಡ್ ಸೋಂಕು ತಗುಲಿಸಿಕೊಂಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಸಾವು

‘ನನಗೆ ಮತ್ತು ನನ್ನ ತಂದೆಗೆ ಕೊರೊನಾ ಸೋಂಕು ತಗುಲಿತ್ತು. ಕೆಲ ಸ್ಥಳಗಳಿಗೆ ಪ್ರವೇಶಿಸಲು ಚೇತರಿಕೆ ಪಾಸ್ ಸಿಗುತ್ತದೆ ಎನ್ನುವ ಕಾರಣಕ್ಕೆ ನನ್ನ ತಾಯಿ ಬೇಕೆಂದೇ ಸೋಂಕು ತಗುಲಿಸಿಕೊಂಡರು’ ಎಂದು ಹೇಳಿದ್ದಾರೆ.

ಬೇಕೆಂದೇ ಕೊವಿಡ್ ಸೋಂಕು ತಗುಲಿಸಿಕೊಂಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಸಾವು
ಕೊವಿಡ್​ನಿಂದ ಮೃತಪಟ್ಟ ಜಾನಪದ ಗಾಯಕ ಹನ ಹೊರ್ಕಾ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 19, 2022 | 10:57 PM

Share

ಲಸಿಕೆ ಪಡೆಯದ ನನಗೆ ಕೊವಿಡ್ ಸೋಂಕು ತಗುಲಿದೆ, ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಹನ ಹೊರ್ಕಾ ನಿಧನರಾಗಿದ್ದಾರೆ. ತನ್ನ ತಾಯಿಯ ಕುರಿತು ಪ್ರತಿಕ್ರಿಯಿಸಿರುವ ಹನ ಹೊರ್ಕಾರ ಮಗ, ‘ನನಗೆ ಮತ್ತು ನನ್ನ ತಂದೆಗೆ ಕೊರೊನಾ ಸೋಂಕು ತಗುಲಿತ್ತು. ಕೆಲ ಸ್ಥಳಗಳಿಗೆ ಪ್ರವೇಶಿಸಲು ಚೇತರಿಕೆ ಪಾಸ್ ಸಿಗುತ್ತದೆ ಎನ್ನುವ ಕಾರಣಕ್ಕೆ ನನ್ನ ತಾಯಿ ಬೇಕೆಂದೇ ಸೋಂಕು ತಗುಲಿಸಿಕೊಂಡರು’ ಎಂದು ಹೇಳಿದ್ದಾರೆ. ಜೆಕ್ ಗಣರಾಜ್ಯದಲ್ಲಿ ಬುಧವಾರ (ಜ.19) ದಾಖಲೆ ಪ್ರಮಾಣದ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.

ಹನ ಹೊರ್ಕಾರ ಮಗ ರೆಕ್ ಮತ್ತು ಅವನ ತಂದೆ ಲಸಿಕೆ ಪಡೆದಿದ್ದರು. ಆದರೂ ಅವರಿಗೆ ಕಳೆದ ಕ್ರಿಸ್​ಮಸ್ ವೇಳೆ ಕೊರೊನಾ ಸೋಂಕು ಬಂದಿತ್ತು. ಆದರೆ ನನ್ನ ತಾಯಿ ನಮ್ಮಿಂದ ಇರಲು ಒಪ್ಪಲಿಲ್ಲ. ಬೇಕೆಂದೇ ಕೊರೊನಾ ಸೋಂಕಿಗೆ ತೆರೆದುಕೊಂಡರು. ಜೆಕ್ ಗಣರಾಜ್ಯದಲ್ಲಿ ಕೆಫೆ, ಬಾರ್, ಸಿನಿಮಾ ಮಂದಿರಾ ಸೇರಿದಂತೆ ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರದೇಶಗಳಿಗೆ ಪ್ರವೇಶ ಪಡೆಯಲು ಲಸಿಕೆ ಪಡೆದಿರುವ ಅಥವಾ ಇತ್ತೀಚೆಗೆ ಕೊರೊನಾದಿಂದ ಚೇತರಿಸಿಕೊಂಡ ವಿವರ ಅತ್ಯಗತ್ಯ.

ಜಾನಪದ ಗಾಯಕಿ ಹೊನಾ ಬರ್ಕಾ ಜೆಕ್ ಗಣರಾಜ್ಯದ ಅತಿ ಹಳೆಯ ಜಾನಪದ ಗಾಯನ ತಂಡ ಅಸೊನಾನ್ಸ್​ನ ಸದಸ್ಯೆಯಾಗಿದ್ದರು. ಒಮ್ಮೆ ಕೊವಿಡ್ ಬಂದು ಚೇತರಿಸಿಕೊಂಡರೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಸುಲಭವಾಗಲಿದೆ ಎನ್ನುವ ಕಾರಣ ಸೋಂಕಿತೆಯಾಗಲು ಹೊನಾ ಬರ್ಕಾ ನಿರ್ಧರಿಸಿದರು ಎಂದು ಅವರ ಮಗನ ಹೇಳಿಕೆ ಉಲ್ಲೇಖಿಸಿ ಬಿಬಿಸಿ ಜಾಲತಾಣ ವರದಿ ಮಾಡಿದೆ.

ಯೂರೋಪಿನಲ್ಲಿ ಶೇ 65ರಷ್ಟು ಜನರಿಗೆ ಪೂರ್ಣಪ್ರಮಾಣದಲ್ಲಿ ಲಸಿಕಾಕರಣ ನಡೆದಿದೆ. ಜೆಕ್ ಗಣರಾಜ್ಯದಲ್ಲಿ ಶೇ 63ರಷ್ಟು ಜನಸಂಖ್ಯೆಗೆ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ 15-18ವರ್ಷದವರಿಗೆ ಕೊರೊನಾ ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100 ಪೂರ್ಣ ಇದನ್ನೂ ಓದಿ: 5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಕೊವಿಡ್-19 ವಿರುದ್ಧ ಲಸಿಕೆ ಹಾಕಬೇಕು: ತಜ್ಞ ಡಾ.ಫಹೀಮ್ ಯೂನಸ್

Published On - 10:56 pm, Wed, 19 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ