AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕೆಂದೇ ಕೊವಿಡ್ ಸೋಂಕು ತಗುಲಿಸಿಕೊಂಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಸಾವು

‘ನನಗೆ ಮತ್ತು ನನ್ನ ತಂದೆಗೆ ಕೊರೊನಾ ಸೋಂಕು ತಗುಲಿತ್ತು. ಕೆಲ ಸ್ಥಳಗಳಿಗೆ ಪ್ರವೇಶಿಸಲು ಚೇತರಿಕೆ ಪಾಸ್ ಸಿಗುತ್ತದೆ ಎನ್ನುವ ಕಾರಣಕ್ಕೆ ನನ್ನ ತಾಯಿ ಬೇಕೆಂದೇ ಸೋಂಕು ತಗುಲಿಸಿಕೊಂಡರು’ ಎಂದು ಹೇಳಿದ್ದಾರೆ.

ಬೇಕೆಂದೇ ಕೊವಿಡ್ ಸೋಂಕು ತಗುಲಿಸಿಕೊಂಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಸಾವು
ಕೊವಿಡ್​ನಿಂದ ಮೃತಪಟ್ಟ ಜಾನಪದ ಗಾಯಕ ಹನ ಹೊರ್ಕಾ
TV9 Web
| Edited By: |

Updated on:Jan 19, 2022 | 10:57 PM

Share

ಲಸಿಕೆ ಪಡೆಯದ ನನಗೆ ಕೊವಿಡ್ ಸೋಂಕು ತಗುಲಿದೆ, ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಹನ ಹೊರ್ಕಾ ನಿಧನರಾಗಿದ್ದಾರೆ. ತನ್ನ ತಾಯಿಯ ಕುರಿತು ಪ್ರತಿಕ್ರಿಯಿಸಿರುವ ಹನ ಹೊರ್ಕಾರ ಮಗ, ‘ನನಗೆ ಮತ್ತು ನನ್ನ ತಂದೆಗೆ ಕೊರೊನಾ ಸೋಂಕು ತಗುಲಿತ್ತು. ಕೆಲ ಸ್ಥಳಗಳಿಗೆ ಪ್ರವೇಶಿಸಲು ಚೇತರಿಕೆ ಪಾಸ್ ಸಿಗುತ್ತದೆ ಎನ್ನುವ ಕಾರಣಕ್ಕೆ ನನ್ನ ತಾಯಿ ಬೇಕೆಂದೇ ಸೋಂಕು ತಗುಲಿಸಿಕೊಂಡರು’ ಎಂದು ಹೇಳಿದ್ದಾರೆ. ಜೆಕ್ ಗಣರಾಜ್ಯದಲ್ಲಿ ಬುಧವಾರ (ಜ.19) ದಾಖಲೆ ಪ್ರಮಾಣದ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.

ಹನ ಹೊರ್ಕಾರ ಮಗ ರೆಕ್ ಮತ್ತು ಅವನ ತಂದೆ ಲಸಿಕೆ ಪಡೆದಿದ್ದರು. ಆದರೂ ಅವರಿಗೆ ಕಳೆದ ಕ್ರಿಸ್​ಮಸ್ ವೇಳೆ ಕೊರೊನಾ ಸೋಂಕು ಬಂದಿತ್ತು. ಆದರೆ ನನ್ನ ತಾಯಿ ನಮ್ಮಿಂದ ಇರಲು ಒಪ್ಪಲಿಲ್ಲ. ಬೇಕೆಂದೇ ಕೊರೊನಾ ಸೋಂಕಿಗೆ ತೆರೆದುಕೊಂಡರು. ಜೆಕ್ ಗಣರಾಜ್ಯದಲ್ಲಿ ಕೆಫೆ, ಬಾರ್, ಸಿನಿಮಾ ಮಂದಿರಾ ಸೇರಿದಂತೆ ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರದೇಶಗಳಿಗೆ ಪ್ರವೇಶ ಪಡೆಯಲು ಲಸಿಕೆ ಪಡೆದಿರುವ ಅಥವಾ ಇತ್ತೀಚೆಗೆ ಕೊರೊನಾದಿಂದ ಚೇತರಿಸಿಕೊಂಡ ವಿವರ ಅತ್ಯಗತ್ಯ.

ಜಾನಪದ ಗಾಯಕಿ ಹೊನಾ ಬರ್ಕಾ ಜೆಕ್ ಗಣರಾಜ್ಯದ ಅತಿ ಹಳೆಯ ಜಾನಪದ ಗಾಯನ ತಂಡ ಅಸೊನಾನ್ಸ್​ನ ಸದಸ್ಯೆಯಾಗಿದ್ದರು. ಒಮ್ಮೆ ಕೊವಿಡ್ ಬಂದು ಚೇತರಿಸಿಕೊಂಡರೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಸುಲಭವಾಗಲಿದೆ ಎನ್ನುವ ಕಾರಣ ಸೋಂಕಿತೆಯಾಗಲು ಹೊನಾ ಬರ್ಕಾ ನಿರ್ಧರಿಸಿದರು ಎಂದು ಅವರ ಮಗನ ಹೇಳಿಕೆ ಉಲ್ಲೇಖಿಸಿ ಬಿಬಿಸಿ ಜಾಲತಾಣ ವರದಿ ಮಾಡಿದೆ.

ಯೂರೋಪಿನಲ್ಲಿ ಶೇ 65ರಷ್ಟು ಜನರಿಗೆ ಪೂರ್ಣಪ್ರಮಾಣದಲ್ಲಿ ಲಸಿಕಾಕರಣ ನಡೆದಿದೆ. ಜೆಕ್ ಗಣರಾಜ್ಯದಲ್ಲಿ ಶೇ 63ರಷ್ಟು ಜನಸಂಖ್ಯೆಗೆ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ 15-18ವರ್ಷದವರಿಗೆ ಕೊರೊನಾ ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100 ಪೂರ್ಣ ಇದನ್ನೂ ಓದಿ: 5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಕೊವಿಡ್-19 ವಿರುದ್ಧ ಲಸಿಕೆ ಹಾಕಬೇಕು: ತಜ್ಞ ಡಾ.ಫಹೀಮ್ ಯೂನಸ್

Published On - 10:56 pm, Wed, 19 January 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ