AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕೆಂದೇ ಕೊವಿಡ್ ಸೋಂಕು ತಗುಲಿಸಿಕೊಂಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಸಾವು

‘ನನಗೆ ಮತ್ತು ನನ್ನ ತಂದೆಗೆ ಕೊರೊನಾ ಸೋಂಕು ತಗುಲಿತ್ತು. ಕೆಲ ಸ್ಥಳಗಳಿಗೆ ಪ್ರವೇಶಿಸಲು ಚೇತರಿಕೆ ಪಾಸ್ ಸಿಗುತ್ತದೆ ಎನ್ನುವ ಕಾರಣಕ್ಕೆ ನನ್ನ ತಾಯಿ ಬೇಕೆಂದೇ ಸೋಂಕು ತಗುಲಿಸಿಕೊಂಡರು’ ಎಂದು ಹೇಳಿದ್ದಾರೆ.

ಬೇಕೆಂದೇ ಕೊವಿಡ್ ಸೋಂಕು ತಗುಲಿಸಿಕೊಂಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಸಾವು
ಕೊವಿಡ್​ನಿಂದ ಮೃತಪಟ್ಟ ಜಾನಪದ ಗಾಯಕ ಹನ ಹೊರ್ಕಾ
TV9 Web
| Edited By: |

Updated on:Jan 19, 2022 | 10:57 PM

Share

ಲಸಿಕೆ ಪಡೆಯದ ನನಗೆ ಕೊವಿಡ್ ಸೋಂಕು ತಗುಲಿದೆ, ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಜೆಕ್ ಗಣರಾಜ್ಯದ ಜಾನಪದ ಗಾಯಕಿ ಹನ ಹೊರ್ಕಾ ನಿಧನರಾಗಿದ್ದಾರೆ. ತನ್ನ ತಾಯಿಯ ಕುರಿತು ಪ್ರತಿಕ್ರಿಯಿಸಿರುವ ಹನ ಹೊರ್ಕಾರ ಮಗ, ‘ನನಗೆ ಮತ್ತು ನನ್ನ ತಂದೆಗೆ ಕೊರೊನಾ ಸೋಂಕು ತಗುಲಿತ್ತು. ಕೆಲ ಸ್ಥಳಗಳಿಗೆ ಪ್ರವೇಶಿಸಲು ಚೇತರಿಕೆ ಪಾಸ್ ಸಿಗುತ್ತದೆ ಎನ್ನುವ ಕಾರಣಕ್ಕೆ ನನ್ನ ತಾಯಿ ಬೇಕೆಂದೇ ಸೋಂಕು ತಗುಲಿಸಿಕೊಂಡರು’ ಎಂದು ಹೇಳಿದ್ದಾರೆ. ಜೆಕ್ ಗಣರಾಜ್ಯದಲ್ಲಿ ಬುಧವಾರ (ಜ.19) ದಾಖಲೆ ಪ್ರಮಾಣದ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.

ಹನ ಹೊರ್ಕಾರ ಮಗ ರೆಕ್ ಮತ್ತು ಅವನ ತಂದೆ ಲಸಿಕೆ ಪಡೆದಿದ್ದರು. ಆದರೂ ಅವರಿಗೆ ಕಳೆದ ಕ್ರಿಸ್​ಮಸ್ ವೇಳೆ ಕೊರೊನಾ ಸೋಂಕು ಬಂದಿತ್ತು. ಆದರೆ ನನ್ನ ತಾಯಿ ನಮ್ಮಿಂದ ಇರಲು ಒಪ್ಪಲಿಲ್ಲ. ಬೇಕೆಂದೇ ಕೊರೊನಾ ಸೋಂಕಿಗೆ ತೆರೆದುಕೊಂಡರು. ಜೆಕ್ ಗಣರಾಜ್ಯದಲ್ಲಿ ಕೆಫೆ, ಬಾರ್, ಸಿನಿಮಾ ಮಂದಿರಾ ಸೇರಿದಂತೆ ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರದೇಶಗಳಿಗೆ ಪ್ರವೇಶ ಪಡೆಯಲು ಲಸಿಕೆ ಪಡೆದಿರುವ ಅಥವಾ ಇತ್ತೀಚೆಗೆ ಕೊರೊನಾದಿಂದ ಚೇತರಿಸಿಕೊಂಡ ವಿವರ ಅತ್ಯಗತ್ಯ.

ಜಾನಪದ ಗಾಯಕಿ ಹೊನಾ ಬರ್ಕಾ ಜೆಕ್ ಗಣರಾಜ್ಯದ ಅತಿ ಹಳೆಯ ಜಾನಪದ ಗಾಯನ ತಂಡ ಅಸೊನಾನ್ಸ್​ನ ಸದಸ್ಯೆಯಾಗಿದ್ದರು. ಒಮ್ಮೆ ಕೊವಿಡ್ ಬಂದು ಚೇತರಿಸಿಕೊಂಡರೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಸುಲಭವಾಗಲಿದೆ ಎನ್ನುವ ಕಾರಣ ಸೋಂಕಿತೆಯಾಗಲು ಹೊನಾ ಬರ್ಕಾ ನಿರ್ಧರಿಸಿದರು ಎಂದು ಅವರ ಮಗನ ಹೇಳಿಕೆ ಉಲ್ಲೇಖಿಸಿ ಬಿಬಿಸಿ ಜಾಲತಾಣ ವರದಿ ಮಾಡಿದೆ.

ಯೂರೋಪಿನಲ್ಲಿ ಶೇ 65ರಷ್ಟು ಜನರಿಗೆ ಪೂರ್ಣಪ್ರಮಾಣದಲ್ಲಿ ಲಸಿಕಾಕರಣ ನಡೆದಿದೆ. ಜೆಕ್ ಗಣರಾಜ್ಯದಲ್ಲಿ ಶೇ 63ರಷ್ಟು ಜನಸಂಖ್ಯೆಗೆ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ 15-18ವರ್ಷದವರಿಗೆ ಕೊರೊನಾ ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100 ಪೂರ್ಣ ಇದನ್ನೂ ಓದಿ: 5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಕೊವಿಡ್-19 ವಿರುದ್ಧ ಲಸಿಕೆ ಹಾಕಬೇಕು: ತಜ್ಞ ಡಾ.ಫಹೀಮ್ ಯೂನಸ್

Published On - 10:56 pm, Wed, 19 January 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ