AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ರಾನ್​ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ ವಜಾಗೊಳಿಸಿದ್ದು ಉಪ ಸಭಾಪತಿಯ ತಪ್ಪು: ಪಾಕ್​ ಸುಪ್ರೀಂಕೋರ್ಟ್​

ಸುಪ್ರೀಂಕೋರ್ಟ್​ಗೆ ವರದಿ ಸಲ್ಲಿಸಿದ ಪಾಕಿಸ್ತಾನ ಚುನಾವಣಾ ಆಯೋಗ, ಯಾವ ಕಾರಣಕ್ಕೂ ದೇಶದಲ್ಲಿ ಅಕ್ಟೋಬರ್​ವರೆಗೆ ಚುನಾವಣೆ ನಡೆಸಲು ಸಾಧ್ಯವೇ ಇಲ್ಲ ಎಂದು ಹೇಳಿದೆ.

ಇಮ್ರಾನ್​ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ ವಜಾಗೊಳಿಸಿದ್ದು ಉಪ ಸಭಾಪತಿಯ ತಪ್ಪು: ಪಾಕ್​ ಸುಪ್ರೀಂಕೋರ್ಟ್​
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್
TV9 Web
| Edited By: |

Updated on:Apr 09, 2022 | 10:09 AM

Share

ಸದ್ಯಕ್ಕೆ ಸೇಫ್​ ಎಂದುಕೊಂಡಿದ್ದ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್​ಗೆ ಅಲ್ಲಿನ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಇಮ್ರಾನ್ ಖಾನ್​ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿ, ಸಂಸತ್​ ಕಲಾಪವನ್ನು ಮುಂದೂಡಿದ ಡೆಪ್ಯೂಟಿ ಸ್ಪೀಕರ್​ ಖಾಸಿಂ ಖಾನ್​ ಸೂರಿ ಅವರ ಕ್ರಮ ತಪ್ಪು ಎಂದು ಪಾಕ್​ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಪ್ರಸ್ತುತ ವಿಷಯವನ್ನು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಲ್ ತೀರ್ಪನ್ನು ಕಾಯ್ದಿರಿಸಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಅಂತಿಮ ತೀರ್ಪು ನೀಡುವುದಾಗಿ ತಿಳಿಸಿದ್ದಾರೆ.  

ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ ವಜಾಗೊಂಡಿರುವ ವಿಚಾರವನ್ನು ಪಾಕ್​ ಸುಪ್ರೀಂಕೋರ್ಟ್ ಕಳೆದ ನಾಲ್ಕು ದಿನಗಳಿಂದಲೂ ವಿಚಾರಣೆ ನಡೆಸುತ್ತಿದೆ. ಇದೊಂದು ಸಾರ್ವಜನಿಕ ಹಿತಾಸಕ್ತಿ ವಿಚಾರವೆಂದು ಪರಿಗಣಿಸಿಕೊಂಡಿದ್ದಾಗಿ ಸಿಜೆಪಿ ಹೇಳಿದ್ದಾರೆ. ಹಾಗೇ ಇಂದು ವಿಚಾರಣೆ ವೇಳೆ ಉಪಸಭಾಪತಿಯ ಕ್ರಮ ಸರಿಯಾದುದಲ್ಲ. ಇದು ಅಸಂವಿಧಾನಿಕವಾಗಿದ್ದು, ಆರ್ಟಿಕಲ್​ 95ರ ಉಲ್ಲಂಘನೆ ಎಂದು ಹೇಳಿದ್ದಾರೆ.  ಅಂದಹಾಗೇ, ಈ ಪ್ರಕರಣವನ್ನು ಸಿಜೆಐ ಬಂಡಿಯಲ್ ನೇತೃತ್ವದ, ನ್ಯಾಯಮೂರ್ತಿಗಳಾದ  ಇಜಾಜುಲ್ ಅಹ್ಸಾನ್, ನ್ಯಾಯಮೂರ್ತಿ ಮಜರ್ ಆಲಂ ಮಿಯಾಂಖೇಲ್, ನ್ಯಾಯಮೂರ್ತಿ ಮುನಿಬ್ ಅಖ್ತರ್ ಮತ್ತು ನ್ಯಾಯಮೂರ್ತಿ ಮಂಡೋಖೇಲ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.

ಅಕ್ಟೋಬರ್​ವರೆಗೆ ಚುನಾವಣೆ ಸಾಧ್ಯವಿಲ್ಲ

ಇದೆಲ್ಲದರ ಮಧ್ಯೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಸಂಸತ್ತನ್ನು ವಿಸರ್ಜಿಸಿ, ಇನ್ನು 90 ದಿನಗಳ ಒಳಗೆ ಚುನಾವಣೆ ನಡೆಸುವಂತೆ ಸೂಚಿಸಿದ್ದರು. ಆದರೆ ಸುಪ್ರೀಂಕೋರ್ಟ್​ಗೆ ವರದಿ ಸಲ್ಲಿಸಿದ ಪಾಕಿಸ್ತಾನ ಚುನಾವಣಾ ಆಯೋಗ, ಯಾವ ಕಾರಣಕ್ಕೂ ದೇಶದಲ್ಲಿ ಅಕ್ಟೋಬರ್​ವರೆಗೆ ಚುನಾವಣೆ ನಡೆಸಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಹೀಗಾಗಿ  ಮುಂದೇನಾಗಲಿದೆ ಎಂಬ ಕುತೂಹಲ ದಟ್ಟವಾಗಿದೆ. ಇಂದು ರಾತ್ರಿ 7.30-8 ಗಂಟೆ ಅವಧಿಯಲ್ಲಿ ತೀರ್ಪು ಹೊರಬೀಳಲಿದೆ.

ಇನ್ನು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ ಬೆನ್ನಲ್ಲೇ ಇಮ್ರಾನ್ ಖಾನ್ ಸಿಕ್ಕಾಪಟೆ ಖುಷಿಪಟ್ಟಿದ್ದರು. ಉಪಸಭಾಪತಿ ಖಾಸಿಂ ಸತ್ಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪಿತೂರಿಯನ್ನು ನಿಲ್ಲಿಸಿದ್ದಾರೆ. ಗಬ್ರಾನಾ ನಹೀ ಹೈ (ಚಿಂತಿಸಬೇಡಿ). ದೇವರು ಪಾಕಿಸ್ತಾನವನ್ನು ನೋಡುತ್ತಿದ್ದಾನೆ ಎಂದು ಹೇಳಿದ್ದರು. ಅಷ್ಟೇ ಅಲ್ಲ, ಸಂಸತ್ತು ವಿಸರ್ಜನೆ ಮಾಡುವಂತೆ ನಾನೇ ಅಧ್ಯಕ್ಷರಿಗೆ ತಿಳಿಸಿದ್ದೇನೆ ಎಂದಿದ್ದರು. ಆದರೆ ಉಪಸಭಾಪತಿ ನಿರ್ಣಯವೇ ತಪ್ಪು ಎಂದಿರುವ ಸುಪ್ರೀಂಕೋರ್ಟ್ ತೀರ್ಪು ಏನು ಕೊಡುತ್ತದೆ ಎಂಬುದರ ಆಧಾರದ ಮೇಲೆ ಇಮ್ರಾನ್​ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳೇ ಗಮನಿಸಿ! ಕಲಬುರಗಿ ಜಿಲ್ಲೆಯ 16 ಖಾಸಗಿ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಮಾನ್ಯತೆ ರದ್ದು ಮಾಡಲಾಗಿದೆ

Published On - 6:42 pm, Thu, 7 April 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​