AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಆತಿಥ್ಯ ಇಷ್ಟು ಕಷ್ಟ ಅಂತ ಗೊತ್ತಿದ್ದರೆ ಓಡಿ ಹೋಗುತ್ತಿದ್ದೆ: ಪ್ರಧಾನಿ ಮೋದಿಗೆ ತಮಾಷೆ ಮಾಡಿದ ಸೌತ್ ಆಫ್ರಿಕಾ ಅಧ್ಯಕ್ಷ

South Africa president Cyril Ramaphosa speaks to Narendra Modi during G20 summit: ಜಿ20 ಶೃಂಗಸಭೆ ಆಯೋಜನೆಗೆ ಭಾರತದ ನೆರವು ಸಾಕಷ್ಟು ಸಿಕ್ಕಿದೆ ಎಂದು ಸೌತ್ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸಾ ಹೇಳಿದ್ಧಾರೆ. ಈ ಬಾರಿಯ 20ನೇ ಜಿ20 ಶೃಂಗಸಭೆ ಸೌತ್ ಆಫ್ರಿಕಾ ಅಧ್ಯಕ್ಷತೆಯಲ್ಲೇ ನಡೆದಿದೆ. ಜಿ20 ಸಭೆ ಆಯೋಜನೆ ಇಷ್ಟು ಕಷ್ಟ ಎಂದಿದ್ದರೆ ಓಡಿ ಹೋಗುತ್ತಿದ್ದೆವು ಎಂದು ರಮಫೋಸಾ ತಮಾಷೆ ಮಾಡಿದ್ದಾರೆ.

ಜಿ20 ಆತಿಥ್ಯ ಇಷ್ಟು ಕಷ್ಟ ಅಂತ ಗೊತ್ತಿದ್ದರೆ ಓಡಿ ಹೋಗುತ್ತಿದ್ದೆ: ಪ್ರಧಾನಿ ಮೋದಿಗೆ ತಮಾಷೆ ಮಾಡಿದ ಸೌತ್ ಆಫ್ರಿಕಾ ಅಧ್ಯಕ್ಷ
ನರೇಂದ್ರ ಮೋದಿ, ಸಿರಿಲ್ ರಮಫೋಸ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 24, 2025 | 12:35 PM

Share

ಜೋಹಾನ್ಸ್​ಬರ್ಗ್, ನವೆಂಬರ್ 24: ಜಿ20 ಶೃಂಗಸಭೆ (G20 summit) ಆಯೋಜಿಸುವ ಕಾರ್ಯದಲ್ಲಿ ಭಾರತ ನೀಡಿರುವ ಬೆಂಬಲಕ್ಕೆ ಸೌತ್ ಆಫ್ರಿಕಾ ಧನ್ಯವಾದ ಹೇಳಿದೆ. ಈ ಬಾರಿಯ ಜಿ20 ನಾಯಕರ ಶೃಂಗಸಭೆಯನ್ನು (G20 Leaders Summit) ದಕ್ಷಿಣ ಆಫ್ರಿಕಾ ಆಯೋಜಿಸಿದೆ. ಆಫ್ರಿಕಾ ಖಂಡದಲ್ಲಿ ನಡೆಯುತ್ತಿರುವ ಮೊದಲ ಜಿ20 ಸಭೆಯೂ ಇದಾಗಿದೆ. ಈ ವೇಳೆ, ಜಿ20 ಸಭೆ ಆಯೋಜಿಸುವುದು ಇಷ್ಟು ಕಷ್ಟ ಎಂದು ತನಗೆ ಗೊತ್ತಿರಲಿಲ್ಲ ಎಂದು ಸೌತ್ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸ (Cyril Ramaphosa) ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸುವ ವೇಳೆ ದಕ್ಷಿಣ ಆಫ್ರಿಕಾ ಅಧ್ಯಕ್ಷರು, ಜಿ20 ಆಯೋಜನೆ ವಿಚಾರದಲ್ಲಿ ಹಾಸ್ಯ ಮಾಡಿದ್ದಾರೆ. ‘ಜಿ20 ಸಮಿಟ್ ಆಯೋಜಿಸಲು ಸೌತ್ ಆಫ್ರಿಕಾಗೆ ಭಾರತ ಸಹಾಯ ಮಾಡಿದೆ. ಇದಕ್ಕೆ ನಾವು ಧನ್ಯವಾದ ಹೇಳುತ್ತೇವೆ. ಆದರೆ, ಇದನ್ನು ಆಯೋಜಿಸುವುದು ಇಷ್ಟು ಕಷ್ಟದ ಕೆಲಸ ಎಂದು ನೀವು ಮೊದಲೇ ಹೇಳಿದ್ದರೆ, ನಾವು ಓಡಿ ಹೋಗುತ್ತಿದ್ದೆವು’ ಎಂದು ಸಿರಿಲ್ ರಮಫೋಸ ಅವರು ನರೇಂದ್ರ ಮೋದಿಗೆ ತಮಾಷೆ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾ| ಸೂರ್ಯಕಾಂತ್ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕಾರ

ಸೌತ್ ಆಫ್ರಿಕಾ ಅಧ್ಯಕ್ಷರ ಈ ಮಾತಿಗೆ ಸಭೆಯಲ್ಲಿದ್ದವರ ಮೊಗದಲ್ಲಿ ನಗೆಯುಕ್ಕಿಸಿತು. ಜಿ20 ಸಭೆ ಆಯೋಜಿಸುವ ವಿಚಾರದಲ್ಲಿ ಭಾರತದಿಂದ ಸೌತ್ ಆಫ್ರಿಕಾ ಸಾಕಷ್ಟು ಕಲಿತಿದೆ ಎಂದೂ ರಮಫೋಸಾ ಹೇಳಿದ್ದಾರೆ.

‘ನೀವು ಜಿ20 ಆಯೋಜಿಸಿದ್ದು ನೋಡಿ ಸಾಕಷ್ಟು ಕಲಿತಿದ್ದೇವೆ. ನೀವು ಸಭೆ ಆಯೋಜಿಸಿದ ಕಟ್ಟಡ ಬಹಳ ಭವ್ಯವಾಗಿತ್ತು. ನಮ್ಮದು ಬಹಳ ಚಿಕ್ಕದಾಯಿತು’ ಎಂದು ಸಿರಿಲ್ ರಮಫೋಸ ಹೇಳಿದಾಗ ಕೂಡಲೇ ಪ್ರತಿಕ್ರಿಯಿಸಿದ ನರೇಂದ್ರ ಮೋದಿ, ‘ಚಿಕ್ಕದು ಯಾವತ್ತೂ ಸುಂದರವೇ’ ಎಂದು ಸಮಾಧಾನ ಮಾಡಿದ್ದಾರೆ.

ಇದನ್ನೂ ಓದಿ: ಸೌತ್ ಆಫ್ರಿಕಾಗೆ ಕಾಲಿಟ್ಟ ನರೇಂದ್ರ ಮೋದಿ; ಈ 3 ದಿನಗಳ ಭೇಟಿಯ ಅಜೆಂಡಾ ಏನು?

ಸೌತ್ ಆಫ್ರಿಕಾದಲ್ಲಿ ನಡೆದಿರುವುದು 20ನೇ ಜಿ20 ಶೃಂಗಸಭೆ. 18ನೇ ಶೃಂಗಸಭೆಯು ಭಾರತದ ಅಧ್ಯಕ್ಷತೆಯಲ್ಲಿ ನಡೆದಿತ್ತು. ನವದೆಹಲಿಯಲ್ಲಿ ಹೊಸದಾಗಿ ನಿರ್ಮಿತವಾದ ಭವ್ಯವಾದ ಭಾರತ್ ಮಂಡಪ್​ನಲ್ಲಿ ಅದನ್ನು ಆಯೋಜಿಸಲಾಗಿತ್ತು. 2023ರಲ್ಲಿ ನಡೆದ ಆ ಸಮಿಟ್​ನಲ್ಲೇ ಆಫ್ರಿಕನ್ ಯೂನಿಯನ್ ಅನ್ನು ಜಿ20 ಸಭೆಯ ಸದಸ್ಯನಾಗಿ ಸೇರಿಸಿಕೊಳ್ಳಲಾಯಿತು.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!