AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ನಾಯಕತ್ವವನ್ನು ಕಿತ್ತೊಗೆಯಲು ಮೆರವಣಿಗೆ ಮಾಡಲಿಲ್ಲ ಎಂದ ವ್ಯಾಗ್ನರ್ ಗುಂಪಿನ ಮುಖ್ಯಸ್ಥ

ವ್ಯಾಗ್ನರ್ ಗುಂಪಿನ ಸೈನಿಕರು ಮಾಸ್ಕೋಗೆ ಕೇವಲ 200 ಕಿಲೋಮೀಟರ್ಗಳಷ್ಟು ದೂರದಲ್ಲಿದ್ದರೆ, 'ರಕ್ತಪಾತ'ವನ್ನು ತಪ್ಪಿಸುವುದಕ್ಕಾಗಿ ತಾನು ಹಿಂತಿರುಗಲು ನಿರ್ಧರಿಸಿದ್ದೇನೆ ಎಂದು ಪ್ರಿಗೋಜಿನ್ ಹೇಳಿದ್ದಾರೆ.

ರಷ್ಯಾದ ನಾಯಕತ್ವವನ್ನು ಕಿತ್ತೊಗೆಯಲು ಮೆರವಣಿಗೆ ಮಾಡಲಿಲ್ಲ ಎಂದ ವ್ಯಾಗ್ನರ್ ಗುಂಪಿನ ಮುಖ್ಯಸ್ಥ
ಯೆವ್ಗೆನಿ ಪ್ರಿಗೊಜಿನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 26, 2023 | 10:06 PM

Share

ರಷ್ಯಾದಲ್ಲಿ (Russia) ಸ್ಥಗಿತಗೊಂಡ ದಂಗೆಯ ನಂತರ ಮೊದಲ ಬಾರಿ ಸಂದೇಶ ರವಾನಿಸಿರು ವ್ಯಾಗ್ನರ್ ಗುಂಪಿನ (Wagner group) ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ (Yevgeny Prigozhin), ರಷ್ಯಾದ ನಾಯಕತ್ವವನ್ನು ಕಿತ್ತೊಗೆಯಲು ನಮ್ಮ ಗುಂಪು ಮೆರವಣಿಗೆ ನಡೆಸಲಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಟೆಲಿಗ್ರಾಮ್ ಅಪ್ಲಿಕೇಶನ್‌ನಲ್ಲಿ ಬಿಡುಗಡೆಯಾದ ತನ್ನ 11-ನಿಮಿಷದ ಆಡಿಯೊದಲ್ಲಿ, ಉಕ್ರೇನ್‌ನಲ್ಲಿನ ಯುದ್ಧದ ವಿರುದ್ಧ ಪ್ರತಿಭಟನೆ ದಾಖಲಿಸಲು ಗುಂಪು ಉದ್ದೇಶಿಸಿತ್ತು  ಎಂದು ಪ್ರಿಗೋಜಿನ್ ಹೇಳಿದ್ದಾರೆ.

ಅನ್ಯಾಯದ ಬಗ್ಗೆ ನಾವು ನಮ್ಮ ಮೆರವಣಿಗೆ ನಡೆಸಿದ್ದೇವೆ ಎಂದು ಹೇಳಿದ ಪ್ರಿಗೋಜಿನ್, ತಾವು ಎಲ್ಲಿದ್ದಾರೆ ಅಥವಾ ಭವಿಷ್ಯದ ಯೋಜನೆಗಳ ಬಗ್ಗೆ ವಿವರಗಳನ್ನು ನೀಡಲಿಲ್ಲ. ಶನಿವಾರ ರಷ್ಯಾದ ರಾಜಧಾನಿ ಮಾಸ್ಕೋಗೆ ಮೆರವಣಿಗೆಯನ್ನು ನಿಲ್ಲಿಸಿದ ನಂತರ ವ್ಯಾಗ್ನರ್ ಗುಂಪಿನ ಮುಖ್ಯಸ್ಥ ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ.

ವ್ಯಾಗ್ನರ್ ಗುಂಪಿನ ಸೈನಿಕರು ಮಾಸ್ಕೋಗೆ ಕೇವಲ 200 ಕಿಲೋಮೀಟರ್ಗಳಷ್ಟು ದೂರದಲ್ಲಿದ್ದರೆ, ‘ರಕ್ತಪಾತ’ವನ್ನು ತಪ್ಪಿಸುವುದಕ್ಕಾಗಿ ತಾನು ಹಿಂತಿರುಗಲು ನಿರ್ಧರಿಸಿದ್ದೇನೆ ಎಂದು ಪ್ರಿಗೋಜಿನ್ ಹೇಳಿದ್ದಾರೆ. ಕ್ರೆಮ್ಲಿನ್ ಬೆಲರೂಸಿಯನ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ಸಹಾಯದಿಂ ವ್ಯಾಗ್ನರ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಲು ಯಶಸ್ವಿಯಾಯಿತು.

ಇದನ್ನೂ ಓದಿ: ನಿನ್ನೆ ವೈಲೆಂಟ್ ಆಗಿದ್ದ ವ್ಯಾಗ್ನಾರ್ ಸೈನ್ಯ ಇಂದು ಸೈಲೆಂಟ್, ಪುಟಿನ್ ಎಚ್ಚರಿಕೆಗೆ ದಂಗೆ ಕೈಬಿಟ್ಟ ಪ್ರಿಗೋಝಿನ್

ಇದಕ್ಕಿಂತ ಮುನ್ನ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ವ್ಯಾಗ್ನರ್ ದಂಗೆಯನ್ನು ‘ದ್ರೋಹ’ ಮತ್ತು ‘ದೇಶದ್ರೋಹ’ ಎಂದು ಕರೆದಿದ್ದು, ಬಂಡುಕೋರರಿಗೆ ಕಠಿಣ ಶಿಕ್ಷೆ ನೀಡುವುದಾಗಿ ಹೇಳಿದ್ದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ