AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ರಾಜತಾಂತ್ರಿಕ ಜಯ: ಭಾರತೀಯರನ್ನು ಬಂಧಿಸಿಲ್ಲ, ಯಾವಾಗಬೇಕಾದರೂ ಭಾರತಕ್ಕೆ ಹೋಗಬಹುದು

Diplomatic victory for India: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಸಿಕ್ಕಿದೆ. ಇರಾನ್​​​​ ಈ ಹಿಂದೆ ಇಸ್ರೇಲ್​​ಗೆ ಸಂಬಂಧಿಸಿದ ಹಡಗನ್ನು ವಶಪಡಿಸಿಕೊಂಡಿತ್ತು. ಅದರಲ್ಲಿ ಭಾರತೀಯರು ಇದ್ದರು. ಅವರನ್ನು ಇರಾನ್​​​ ಬಂಧಿಸಿದೆ ಎಂದು ಹೇಳಲಾಗಿದೆ. ಇದೀಗ ಇರಾನ್​​ ಈ ಬಗ್ಗೆ ಸ್ಪಷ್ಟನೆ ನೀಡಿದೆ. ನಾವು ಭಾರತೀಯರನ್ನು ಬಂಧಿಸಿಲ್ಲ. ಇಲ್ಲಿ ಹವಾಮಾನ ಸರಿ ಇಲ್ಲ ಅದಕ್ಕಾಗಿ ಅವರನ್ನು ಇಲ್ಲಿ ಇರಿಸಲಾಗಿದೆ. ಖಂಡಿತ ಅವರು ಬಯಸಿದಾಗ ಭಾರತಕ್ಕೆ ಹೋಗಬಹುದು ಎಂದು ಹೇಳಿದೆ.

ಭಾರತಕ್ಕೆ ರಾಜತಾಂತ್ರಿಕ ಜಯ: ಭಾರತೀಯರನ್ನು ಬಂಧಿಸಿಲ್ಲ, ಯಾವಾಗಬೇಕಾದರೂ ಭಾರತಕ್ಕೆ ಹೋಗಬಹುದು
ಜೈಶಂಕರ್ ಮತ್ತು ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್
ಅಕ್ಷಯ್​ ಪಲ್ಲಮಜಲು​​
|

Updated on: Apr 18, 2024 | 10:21 AM

Share

ಇರಾನ್ (Iran)​​​​ ವಶಪಡಿಸಿಕೊಂಡಿದ್ದ ಇಸ್ರೇಲ್​​​ಗೆ ಸಂಬಂಧಿಸಿದ ಹಡಗಿನಲ್ಲಿ 17 ಭಾರತೀಯ ಸಿಬ್ಬಂದಿಗಳಿದ್ದರು, ಅವರನ್ನು ಇರಾನ್​​ ಬಂಧಿಸಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಇರಾನ್​​ ನಾವು ಭಾರತೀಯರನ್ನು ಬಂಧಿಸಿಲ್ಲ. ಇಲ್ಲಿ ಹವಾಮಾನ ಸರಿ ಇಲ್ಲ ಅದಕ್ಕಾಗಿ ಅವರನ್ನು ಇಲ್ಲಿ ಇರಿಸಲಾಗಿದೆ. ಖಂಡಿತ ಅವರು ಬಯಸಿದಾಗ ಭಾರತಕ್ಕೆ ಹೋಗಬಹುದು ಎಂದು ಇರಾನ್ ರಾಯಭಾರಿ ಇರಾಜ್ ಇಲಾಹಿ ಹೇಳಿದ್ದಾರೆ. ಇದೀಗ ಈ ಹೇಳಿಕೆ ಭಾರತ ರಾಜತಾಂತ್ರಿಕತೆಗೆ ಮತ್ತೊಂದು ವಿಜಯ ಎಂದು ಹೇಳಲಾಗಿದೆ.

ಇರಾನ್ ರಾಯಭಾರಿ ಪ್ರಕಾರ, ಪರ್ಷಿಯನ್ ಕೊಲ್ಲಿಯಲ್ಲಿ ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ, ಆ ಕಾರಣದಿಂದ ಆ 17 ಭಾರತೀಯ ಸಿಬ್ಬಂದಿಗಳು ಇಲ್ಲಿದ್ದಾರೆ. ಹವಾಮಾನ ಸುಧಾರಿಸಿದ ನಂತರ ಅವರು ಭಾರತಕ್ಕೆ ಹೋಗಬಹುದು ಎಂದು ಹೇಳಿದ್ದಾರೆ. ಭಾರತಕ್ಕೆ ಹೋಗಲು ಅವರು ಹಡಗನ್ನು ಬಳಸಬಹುದು ಎಂದು ಹೇಳಿದ್ದಾರೆ. ಹಡಗಿನಲ್ಲಿರುವ ರಷ್ಯಾ, ಪಾಕಿಸ್ತಾನ ಮತ್ತು ಫಿಲಿಪೈನ್ಸ್‌ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಇರಾನ್ ಹೇಳಿದೆ.

ಜೈಶಂಕರ್​​​ ಮಾತುಕತೆ ಯಶಸ್ವಿ

ಈ ಹಿಂದೆ ಭಾರತದ ವಿದೇಶಾಂಗ ಸಚಿವ ಜೈಶಂಕರ್​ ಅವರು 17 ಜನ ಭಾರತೀಯ ಸಿಬ್ಬಂದಿಗಳನ್ನು ಭಾರತ ಸರ್ಕಾರಿ ಅಧಿಕಾರಿಗಳು ಭೇಟಿಯಾಗಲು ಅವಕಾಶ ನೀಡಬೇಕು ಹಾಗೂ ಅವರನ್ನು ಬಿಡುಗಡೆ ಮಾಡಬೇಕು ಎಂದು ಇರಾನ್​​​ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರಿಗೆ ಫೋನ್ ಕರೆ ಮೂಲಕ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್, ಖಂಡಿತವಾಗಿ ಜೈಶಂಕರ್​​ ನಿಮ್ಮ ಮನವಿಯನ್ನು ಗೌರವಿಸುತ್ತೇವೆ. ಈಗಾಗಗಲೇ ನಾವು ವಶಪಡಿಸಿಕೊಂಡಿರುವ ಹಡಗಿನ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದೇವೆ. ನಿಮ್ಮ ಅಧಿಕಾರಿಗಳು ಹಡಗಿನಲ್ಲಿದ್ದ 17 ಭಾರತೀಯರನ್ನು ಭೇಟಿಯಾಗಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದರು. ಇದೀಗ ಅವರನ್ನು ಬಂಧಿಸಿಲ್ಲ, ಮರಳಿ ಭಾರತಕ್ಕೆ ಕಳುಹಿಸಲಾಗುವುದು ಎಂದು ಇರಾನ್  ಹೇಳಿದೆ.

ಇದನ್ನೂ ಓದಿ: ದುಬೈನಲ್ಲಿ ಭಾರಿ ಮಳೆ, ವಿಮಾನಗಳ ಹಾರಾಟ ಸ್ಥಗಿತ, ಒಮಾನ್​ನಲ್ಲಿ 18 ಮಂದಿ ಸಾವು

ಇಸ್ರೇಲ್​ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್​ ದಾಳಿ

ಇಸ್ರೇಲ್​ ಮೇಲೆ ಇರಾನ್ ಏ.13ರಂದು ಕ್ಷಿಪಣಿ ಹಾಗೂ ಡ್ರೋನ್​ ದಾಳಿ ನಡೆಸಿತ್ತು. ಕಿಲ್ಲರ್ ಡ್ರೋನ್​ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ ಇರಾನ್ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ದಾಳಿಗಳನ್ನು ನಡೆಸಿತ್ತು. ಸಿರಿಯಾದ ರಾಜಧಾನಿ ಡಮಾಸ್ಕಸ್​ನಲ್ಲಿರುವ ತನ್ನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಈ ಕ್ರಮ ಕೈಗೊಂಡಿತ್ತು. ಇರಾನ್ ಸೇನೆಯು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಇಸ್ರೇಲ್ ಮೇಲೆ ದಾಳಿ ಮಾಡಿತ್ತು. ಇರಾನ್ ಇಸ್ರೇಲ್ ಮೇಲೆ 100ಕ್ಕೂಹೆಚ್ಚು ಡ್ರೋನ್​ಗಳನ್ನು ಹಾರಿಸಿತ್ತು. ಇರಾನ್ ದಾಳಿಯ ನಂತರ ಇಸ್ರೇಲ್ ರಕ್ಷಣಾ ಪಡೆ ತೀವ್ರ ಕಟ್ಟೆಚ್ಚರವಹಿಸಿದೆ. ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಮತ್ತು ಕ್ಷಿಪಣಿದಾಳಿಗಳನ್ನು ತಡೆಹಿಡಿಯಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ