AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥನ ನಡುವೆ ಮನಸ್ತಾಪ; ಮಾತುಕತೆ ನಡೆದರೂ ಮುಗಿಯದ ಭಿನ್ನಾಭಿಪ್ರಾಯ

ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಗೆ,  ಐಎಸ್​ಐ ನೂತನ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್​ ನದೀಮ್​​ ಗೈರಾಗಿದ್ದಾರೆ ಎಂದು ಪಾಕ್​ ಮಾಧ್ಯಮಗಳೂ ವರದಿ ಮಾಡಿವೆ. 

ಪಾಕ್​ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥನ ನಡುವೆ ಮನಸ್ತಾಪ; ಮಾತುಕತೆ ನಡೆದರೂ ಮುಗಿಯದ ಭಿನ್ನಾಭಿಪ್ರಾಯ
ಪಾಕಿಸ್ತಾನ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥ
TV9 Web
| Edited By: |

Updated on: Oct 14, 2021 | 12:19 PM

Share

ಪಾಕಿಸ್ತಾನ ಸರ್ಕಾರ ಅಲ್ಲಿನ ಸೇನೆಯ ಕೈಯಲ್ಲೇ ಇರುತ್ತದೆ. ಪ್ರಧಾನಮಂತ್ರಿಯಿದ್ದರೂ ಅವರು ಸೇನಾ ಮುಖ್ಯಸ್ಥರಿಗೆ ವಿಧೇಯರಾಗಿಯೇ ಇರಬೇಕು ಎಂಬುದು ಹಲವು ಬಾರಿ ಸಾಬೀತಾಗಿದೆ. ಇದೀಗ ಒಂದು ಸಣ್ಣ ವಿಷಯಕ್ಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​  (Pakistan PM Imran Khan) ಮತ್ತು  ಅಲ್ಲಿನ ಸೇನಾ ಮುಖ್ಯಸ್ಥ ಜನರಲ್​ ಕಮಾರ್​ ಜಾವೇದ್​ ಬಾಜ್ವಾ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್​ಐ (ISI)ಗೆ ಮುಖ್ಯಸ್ಥರನ್ನು ನೇಮಕ ಮಾಡುವ ಸಂಬಂಧ ಈ ಸಂಘರ್ಷ ಪ್ರಾರಂಭವಾಗಿದೆ ಎಂದೂ ಗೊತ್ತಾಗಿದೆ.

ಐಎಸ್​ಐಗೆ ನೂತನ ಮಹಾ ನಿರ್ದೇಶಕರನ್ನಾಗಿ (DG) ಲೆಫ್ಟಿನೆಂಟ್​ ಜನರಲ್​ ನದೀಮ್​ ಅಹ್ಮದ್​ ಅಂಜುಮ್​​ರನ್ನು ನೇಮಕ ಮಾಡಲಾಗಿದೆ ಎಂದು ಅಕ್ಟೋಬರ್​ 6ರಂದು ಪಾಕಿಸ್ತಾನದ ಸಶಸ್ತ್ರ ಪಡೆಯ ಮಾಧ್ಯಮ ವಿಭಾಗವಾದ ಇಂಟರ್​ ಸರ್ವೀಸ್​ ಪಬ್ಲಿಕ್​ ರಿಲೇಶನ್ಸ್​ ಘೋಷಿಸಿತ್ತು. ಆದರೆ  ಈ ನೇಮಕಾತಿಯನ್ನು ಪ್ರಧಾನಮಂತ್ರಿ ಇಮ್ರಾನ್​ ಖಾನ್​​  ತಿರಸ್ಕರಿಸಿದ್ದಾರೆ. ಐಎಸ್​​ಐ ಡಿಜಿಯನ್ನು ನೇಮಕ ಮಾಡುವ ಹಕ್ಕು ಪ್ರಧಾನಿಗೆ ಇದೆ. ಹೀಗಾಗಿ ಸಶಸ್ತ್ರಪಡೆಯ ನೇಮಕವನ್ನು ನಾನು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆಂದು ವರದಿಯಾಗಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಒಂದು ಹಂತದ ಸ್ಥಿರತೆಗೆ ಬರುವವರೆಗೂ ಡಿಜಿ ಬದಲಾವಣೆ ಮಾಡುವುದು ಬೇಡ. ಈಗಿರುವ ಲೆಫ್ಟಿನೆಂಟ್​ ಜನರಲ್​ ಫಯಾಜ್​ ಹಮೀದ್​​ರೇ ಐಎಸ್​ಐನ ಡಿಜಿಯಾಗಿ ಮುಂದುವರಿಯಲಿ ಎಂದೂ ಹೇಳಿದ್ದಾರೆ. ಇದು ಸೇನಾ ಮುಖ್ಯಸ್ಥನ ಅಸಮಾಧಾನಕ್ಕೆ ಕಾರಣವಾಗಿದೆ.

ಐಎಸ್​ಐ ಮುಖ್ಯಸ್ಥನ ನೇಮಕಕ್ಕೆ ಸಂಬಂಧಪಟ್ಟಂತೆ ತಮ್ಮಿಬ್ಬರ ಮಧ್ಯೆ ಎದ್ದಿರುವ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳಲು ಸೇನಾ ಮುಖ್ಯಸ್ಥ ಜನರಲ್​ ಬಾಜ್ವಾ ಮತ್ತು ಇಮ್ರಾನ್​ ಖಾನ್​ ಮಾತುಕತೆ ನಡೆಸುತ್ತಿದ್ದಾರೆ. ಆದರೆ ಅದಕ್ಕೊಂದು ಪರಿಹಾರ ಸಿಗುತ್ತಿಲ್ಲ. ಈ ಮಧ್ಯೆ ನಡೆದ ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಗೆ,  ಐಎಸ್​ಐ ನೂತನ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್​ ನದೀಮ್​​ ಗೈರಾಗಿದ್ದಾರೆ ಎಂದು ಪಾಕ್​ ಮಾಧ್ಯಮಗಳೂ ವರದಿ ಮಾಡಿವೆ.   ಈ ಮಧ್ಯೆ ಪಾಕಿಸ್ತಾನ ಮಾಹಿತಿ ಸಚಿವ ಫಾವಾದ್​ ಚೌಧರಿ ಟ್ವೀಟ್​ ಮಾಡಿ, ಐಎಸ್​ಐಗೆ ಹೊಸ ಡಿಜಿ ನೇಮಕ ಸಂಬಂಧ ನಾಗರಿಕಯಾನ ಮತ್ತು ಸೇನಾ ನಾಯಕತ್ವದ ನಡುವಿನ ಸಮಾಲೋಚನೆ ಮುಕ್ತಾಯಗೊಂಡಿದ್ದು, ಡಿಜಿ ನೇಮಕ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಆರ್ಯನ್ ಖಾನ್ ಜತೆ ಸೆಲ್ಫಿ ಕ್ಲಿಕ್ಕಿಸಿದ ‘ಡಿಟೆಕ್ಟಿವ್’ ಕಿರಣ್ ಗೋಸಾವಿಗೆ ಪುಣೆ ಪೊಲೀಸರಿಂದ ಲುಕೌಟ್ ನೋಟಿಸ್

Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಸ್ಥಿರ; ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ ಮೋದಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ