AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ನಮ್ಮ ಪಕ್ಷದವರನ್ನು ಪಾಕ್ ವಿರೋಧ ಪಕ್ಷದ ನಾಯಕರಾಗಿ ನಾಮನಿರ್ದೇಶನ ಮಾಡಬೇಡಿ; ಚುನಾವಣಾ ಆಯೋಗಕ್ಕೆ ಇಮ್ರಾನ್ ಖಾನ್ ಪತ್ರ

ಇಮ್ರಾನ್ ಖಾನ್ ಪಾಕ್ ಪ್ರಧಾನಿ ಹುದ್ದೆಯಿಂದ ಪದಚ್ಯುತರಾದ ಹಿನ್ನೆಲೆಯಲ್ಲಿ ಶೆಹಬಾಜ್ ಷರೀಫ್ ಅವರು ಮಧ್ಯರಾತ್ರಿಯ ಮತದಾನದ ನಂತರ ಅದೇ ದಿನ ಪಾಕಿಸ್ತಾನದ 23ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Imran Khan: ನಮ್ಮ ಪಕ್ಷದವರನ್ನು ಪಾಕ್ ವಿರೋಧ ಪಕ್ಷದ ನಾಯಕರಾಗಿ ನಾಮನಿರ್ದೇಶನ ಮಾಡಬೇಡಿ; ಚುನಾವಣಾ ಆಯೋಗಕ್ಕೆ ಇಮ್ರಾನ್ ಖಾನ್ ಪತ್ರ
ಇಮ್ರಾನ್ ಖಾನ್
TV9 Web
| Edited By: |

Updated on: Apr 15, 2022 | 5:41 PM

Share

ಇಸ್ಲಾಮಾಬಾದ್: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (Pakistan Tehreek-e-Insaf) ಮುಖ್ಯಸ್ಥ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರು ತಮ್ಮ ಪಕ್ಷದ ಯಾವುದೇ ಸದಸ್ಯರನ್ನು ಪಾಕಿಸ್ತಾನ ಪಾರ್ಲಿಮೆಂಟ್​ನ ವಿರೋಧ ಪಕ್ಷದ ನಾಯಕರಾಗಿ ನಾಮನಿರ್ದೇಶನ ಮಾಡದಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಏಪ್ರಿಲ್ 10ರಂದು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿಶ್ವಾಸಮತ ಯಾಚನೆ ವೇಳೆ ಬಹುಮತ ಸಾಬೀತುಪಡಿಸಲು ವಿಫಲರಾದ ಬಳಿಕ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ಕೆಳಗಿಳಿದಿದ್ದರು. ಅದಾದ ಮೇಲೆ ನೂತನ ಪ್ರಧಾನಮಂತ್ರಿಯಾಗಿ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದರು.

ಸ್ಪೀಕರ್ ಖಾಸಿಂ ಸೂರಿ ಇಂದು 123 ಎಂಎನ್​ಎಗಳ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಆ ನನ್ನ 123 ಎಂಎನ್‌ಎಗಳಿಗೆ ನಾನು ಕೃತಜ್ಞನಾಗಿದ್ದೇನೆ. ಸರ್ಕಾರದ ಬದಲಾವಣೆಯ ವಿರುದ್ಧ ನಾವು ಸ್ವತಂತ್ರವಾಗಿ ನಿಂತಿದ್ದೇವೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಇಮ್ರಾನ್ ಖಾನ್ ಪಾಕ್ ಪ್ರಧಾನಿ ಹುದ್ದೆಯಿಂದ ಪದಚ್ಯುತರಾದ ಹಿನ್ನೆಲೆಯಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್) ನಾಯಕ ಶೆಹಬಾಜ್ ಷರೀಫ್ ಅವರು ಮಧ್ಯರಾತ್ರಿಯ ಮತದಾನದ ನಂತರ ಅದೇ ದಿನ ಪಾಕಿಸ್ತಾನದ 23ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

2018ರಲ್ಲಿ ‘ನಯಾ ಪಾಕಿಸ್ತಾನ’ ನಿರ್ಮಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಇಮ್ರಾನ್ ಖಾನ್ ಮಧ್ಯಂತರದಲ್ಲೇ ಪ್ರಧಾನಿ ಹುದ್ದೆಯಿಂದ ನಿರ್ಗಮಿಸಬೇಕಾಯಿತು. ನಾನು ಪ್ರಧಾನಮಂತ್ರಿ ಹುದ್ದೆಯಲ್ಲಿ ಇದ್ದಾಗ ಅಪಾಯಕಾರಿ ಆಗಿರಲಿಲ್ಲ. ಆಗ ನಾನು ಸರ್ಕಾರದ ಭಾಗವಾಗಿದ್ದೆ. ಆದರೆ ನಾನು ಅಧಿಕಾರ ಕಳೆದುಕೊಂಡ ಮೇಲೆ ಬಹಳ ಅಪಾಯಕಾರಿ ಮನುಷ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ನಾನು ಅಧಿಕಾರವನ್ನು ಕಳೆದುಕೊಳ್ಳಲು ವಿದೇಶಿ ಕುತಂತ್ರ ಕಾರಣ ಎಂದೇ ಆರೋಪಿಸುತ್ತಿರುವ ಇಮ್ರಾನ್ ಖಾನ್​, ಹೀಗೆ ಆಮದು ಮಾಡಿಕೊಂಡ ಸರ್ಕಾರವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಜನರೂ ವಿರೋಧಿಸುತ್ತಿದ್ದಾರೆ ಎಂದು ನಿನ್ನೆಯಷ್ಟೇ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Imran Khan: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ದೇಶದ್ರೋಹದ ಆರೋಪ ಸಾಧ್ಯತೆ

ನಾನು ಇನ್ಮುಂದೆ ತುಂಬ ಡೇಂಜರಸ್​​ ಮನುಷ್ಯ ಎಂದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!