AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syrian Earthquake: ಅವಶೇಷಗಳಡಿಯಲ್ಲಿ ಜನಿಸಿದ ಸಿರಿಯನ್ ಮಗುವಿಗಿಟ್ಟ ಹೆಸರೇನು ಗೊತ್ತಾ? ಈ ಮಗುವಿನ ಜನನ ಮಿರಾಕಲ್

ಮಹಿಳೆಯೊಬ್ಬರು ತಮ್ಮ ಮನೆಯ ಅವಶೇಷಗಳಡಿಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ತಾಯಿ ಸಾವನ್ನಪ್ಪಿದ್ದಾರೆ. ಇದೀಗ ಮಗುವಿಗೆ "ಆಯಾ" ಎಂದು ಹೆಸರನ್ನು ಇಡಲಾಗಿದೆ. ಸಿರಿಯಾದ ಜೆಂಡರಿಸ್ ಪಟ್ಟಣದಲ್ಲಿ ನಡೆದ ಭೂಕಂಪದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ಮಗುವಿನ ತಾಯಿಯ ಜೊತೆಗೆ ಮಗುವನ್ನು ರಕ್ಷಿಸಲಾಗಿದೆ.

Syrian Earthquake: ಅವಶೇಷಗಳಡಿಯಲ್ಲಿ ಜನಿಸಿದ ಸಿರಿಯನ್ ಮಗುವಿಗಿಟ್ಟ ಹೆಸರೇನು ಗೊತ್ತಾ? ಈ ಮಗುವಿನ ಜನನ ಮಿರಾಕಲ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 10, 2023 | 10:38 AM

Share

ಸಿರಿಯಾ: ಭೂಕಂಪದಿಂದ ನಲುಗಿರುವ ಟಿರ್ಕಿ ಮತ್ತು ಸಿರಿಯಾ (Syrian Earthquake) ಬಹಳ ತೊಂದರೆಯನ್ನು ಅನುಭವಿಸಿದೆ, ಅದೆಷ್ಟೋ ಜನ ಮನೆ, ಪ್ರಾಣ, ಕುಟುಂಬವನ್ನು ಕಳೆದುಕೊಂಡಿದ್ದಾರೆ. ಟಿರ್ಕಿಯಲ್ಲಿ ಒಂದು ಪರಿಸ್ಥಿತಿಯಾದರೆ, ಸಿರಿಯಾದಲ್ಲಿ ಇನ್ನೊಂದು ಕಥೆ, ಹೌದು ಸಿರಿಯಾದಲ್ಲಿ ಒಂದು ಕರುಣಾಜನಕ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ತಮ್ಮ ಮನೆಯ ಅವಶೇಷಗಳಡಿಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ತಾಯಿ ಸಾವನ್ನಪ್ಪಿದ್ದಾರೆ. ಇದೀಗ ಮಗುವಿಗೆ “ಆಯಾ” ಎಂದು ಹೆಸರನ್ನು ಇಡಲಾಗಿದೆ. ಸಿರಿಯಾದ ಜೆಂಡರಿಸ್ ಪಟ್ಟಣದಲ್ಲಿ ನಡೆದ ಭೂಕಂಪದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ಮಗುವಿನ ತಾಯಿಯ ಜೊತೆಗೆ ಮಗುವನ್ನು ರಕ್ಷಿಸಲಾಗಿದೆ. ಈ ಭೂಕಂಪದಲ್ಲಿ ಆಕೆಯ ತಂದೆ ಮತ್ತು ಒಡಹುಟ್ಟಿದವರು ಸಹ ಸಾವನ್ನಪ್ಪಿದರು. ಆಕೆಗೆ ಆಯಾ ಎಂದು ಹೆಸರಿಸಲಾಗಿದೆ, ಇದರರ್ಥ ಇಂಗ್ಲಿಷ್‌ನಲ್ಲಿ ‘ಮಿರಾಕಲ್’.

ಮಗುವಿನ ತಂದೆಯ ಚಿಕ್ಕಪ್ಪ ವಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ಮಗುವಿನ ಹತ್ತಿರದ ಕುಟುಂಬದ ಸದಸ್ಯರೆಲ್ಲರೂ ಸಾವನ್ನಪ್ಪಿದ್ದಾರೆ. ಭೂಕಂಪದಲ್ಲಿ ಸಲಾಹ್ ಅಲ್-ಬದ್ರನ್ ಅವರ ಸ್ವಂತ ಮನೆ ನಾಶವಾಗಿದ್ದು, ಪ್ರಸ್ತುತ ಅವರು ತಮ್ಮ ಕುಟುಂಬದೊಂದಿಗೆ ಟೆಂಟ್‌ನಲ್ಲಿ ವಾಸಿಸುತ್ತಿದ್ದಾರೆ.

ಮಗುವನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಸಿದಿರುವ ನಾಲ್ಕು ಅಂತಸ್ತಿನ ಕಟ್ಟಡದ ಅವಶೇಷಗಳ ಮೇಲೆ ಒಬ್ಬ ವ್ಯಕ್ತಿಯು ಧೂಳಿನಿಂದ ಆವೃತವಾದ ಪುಟ್ಟ ಮಗುವನ್ನು ಹಿಡಿದುಕೊಂಡು ಓಡುತ್ತಿರುವುದನ್ನು ದೃಶ್ಯಾವಳಿಯನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಈ ಹೆಣ್ಣು ಮಗುವನ್ನು ಸಾವಿರಾರು ಜನರು ದತ್ತು ಪಡೆಯಲು ಮುಂದಾಗಿದ್ದರು. ವೈದ್ಯರೊಬ್ಬರ ಪತ್ನಿ ತನ್ನ ಮಗುವಿನ ಜೊತೆಗೆ ಮಿರಾಕಲ್ ಗೂ ಹಾಲುಣಿಸಿದ್ದಾಳೆ.

ಇದನ್ನೂ ಓದಿ:Turkey-Syria earthquake: ಟರ್ಕಿಯಲ್ಲಿ ಜೂಲಿ, ರೋಮಿಯೋ, ಹನಿ, ರಾಂಬೊ, ಮಹತ್ವದ ಕಾರ್ಯಚರಣೆಯಲ್ಲಿ ಭಾರತದ ಶ್ವಾನದಳ

ಸೋಮವಾರದ 7.8 ತೀವ್ರತೆಯ ಭೂಕಂಪದಿಂದ ಅನಾಥವಾಗಿರುವ ಮಕ್ಕಳಲ್ಲಿ ಅಯಾ ಕೂಡ ಒಬ್ಬರು. UN ಮಕ್ಕಳ ಏಜೆನ್ಸಿ, UNICEF, ಇದು ಅವರ ಪೋಷಕರು ಕಾಣೆಯಾದ ಮತ್ತು ಸಾವನ್ನಪ್ಪಿರುವ ಮಕ್ಕಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಇದರ ಜೊತೆಗೆ ಅವರಿಗೆ ಸಂಬಂಧಿದ ಕುಟುಂಬದ ಸದಸ್ಯರನ್ನು ಪತ್ತೆ ಮಾಡುತ್ತಿದೆ. ಟರ್ಕಿ-ಸಿರಿಯಾ ಭೂಕಂಪದಲ್ಲಿ ಸತ್ತವರ ಸಂಖ್ಯೆ 21,000 ದಾಟಿದೆ. ಅವಶೇಷಗಳಡಿಯಲ್ಲಿ ಇನ್ನೂ ಸಿಲುಕಿರುವವರನ್ನು ರಕ್ಷಿಸಲು ನಾಲ್ಕನೇ ದಿನವೂ ರಕ್ಷಣಾ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಭಾರತವೂ ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದೆ.

Published On - 10:38 am, Fri, 10 February 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು