AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dominic Raab Resigns: ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ರಾಜೀನಾಮೆ

ಬ್ರಿಟನ್​ (United Kingdom) ಉಪ ಪ್ರಧಾನಿ ಡೊಮಿನಿಕ್ ರಾಬ್ (Dominic Raab) ರಾಜೀನಾಮೆ ನೀಡಿದ್ದಾರೆ

Dominic Raab Resigns: ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ರಾಜೀನಾಮೆ
ಬ್ರಿಟನ್​ ಉಪ ಪ್ರಧಾನಿ ಡೊಮಿನಿಕ್ ರಾಬ್
ಅಕ್ಷಯ್​ ಪಲ್ಲಮಜಲು​​
|

Updated on:Apr 21, 2023 | 3:57 PM

Share

ಲಂಡನ್: ಬ್ರಿಟನ್​ (United Kingdom) ಉಪ ಪ್ರಧಾನಿ ಡೊಮಿನಿಕ್ ರಾಬ್ (Dominic Raab) ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ AFP ತಿಳಿಸಿದೆ. ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರ ಆಪ್ತ ಸಹಾಯಕ ಮತ್ತು ಉಪ ಪ್ರಧಾನಿ ಡೊಮಿನಿಕ್ ರಾಬ್ ಅವರು ಕಚೇರಿ ಸಿಬ್ಬಂದಿಗಳನ್ನು ಬೆದರಿಸುತ್ತಿದ್ದಾರೆ ಎಂಬ ಆರೋಪದ ನಡುವೆ ರಾಜೀನಾಮೆ ನೀಡಿದ್ದಾರೆ. ಡೊಮಿನಿಕ್ ರಾಬ್ ಅವರು ಯುಕೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದ ಸಮಯದಿಂದ ಈ ಆರೋಪಗಳು ಬಂದಿವೆ.

ಡೊಮಿನಿಕ್ ರಾಬ್ ಅವರು ತನ್ನ ನಡವಳಿಕೆಯ ವರದಿಯು ತನ್ನ ವಿರುದ್ಧದ ಎರಡು ಹಕ್ಕುಗಳನ್ನು ಎತ್ತಿಹಿಡಿದಿದೆ ಮತ್ತು ಎರಡೂ “ದೋಷಪೂರಿತ” ಎಂದು ಹೇಳಿದ್ದಾರೆ. ಈ ತನಿಖೆಯ ಆದೇಶವನ್ನು ನಾನು ಒಪ್ಪುತ್ತೇನೆ. ಈ ತನಿಖಾ ವರದಿ ನನ್ನ ವಿರುದ್ಧದ ಎರಡು ಹಕ್ಕುಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ತಳ್ಳಿಹಾಕಿದೆ. ನನ್ನ ಮೇಲೆ ಬಂದಿರುವ ಆರೋಪ ದೋಷಪೂರಿತವಾಗಿವೆ, ಆದರೂ ನಾನು ನಮ್ಮ ಉತ್ತಮ ಸರ್ಕಾರದ ನಡವಳಿಕೆಗೆ ಇದು ಅಪಾಯಕಾರಿ ಆಗಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತವು ಕುಟುಂಬ ಮತ್ತು ಸಂಸ್ಕೃತಿಯನ್ನು ಪರಸ್ಪರ ಬೆಸೆದುಕೊಂಡಿದೆ; ರಿಷಿ ಸುನಕ್ ಪುತ್ರಿ ಅನೌಷ್ಕಾ

ಡೊಮಿನಿಕ್ ರಾಬ್ ಅವರ ಈ ನಡವಳಿಕೆಯ ಬಗ್ಗೆ ತಿಂಗಳ ಹಿಂದೆ ಸುದೀರ್ಘ ತನಿಖೆ ನಡೆದಿದೆ. ಇದೀಗ ಅವರ ರಾಜೀನಾಮೆ ನೀಡಿದ್ದಾರೆ. ಮೂರು ವಿಭಿನ್ನ ಇಲಾಖೆಗಳಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನ ಆಧಾರದಲ್ಲಿ ಅವರ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಸರ್ಕಾರಿ ಅಧಿಕಾರಿಗಳಿಂದ ಪುರಾವೆಗಳು ಕೇಳಲಾಗಿದೆ ಮತ್ತು ಔಪಚಾರಿಕ ದೂರುಗಳ ನಂತರ ಡೊಮಿನಿಕ್ ರಾಬ್ ನವೆಂಬರ್‌ನಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 2:46 pm, Fri, 21 April 23

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ