AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯೇ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ; ತಕ್ಷಣವೇ ಹಾರ್ಮುಜ್ ತೆರೆಯಲಾಗುವುದು ಎಂದ ಟ್ರಂಪ್

ಅಮೆರಿಕ ಮತ್ತು ಇರಾನ್ ನಡುವಿನ ತಿಂಗಳುಗಳ ಸುದೀರ್ಘ ಯುದ್ಧಕ್ಕೆ ಪೂರ್ಣವಿರಾಮ ಇಡಬಲ್ಲ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಭಾನುವಾರವೇ (ಜೂನ್ 14) ಸಹಿ ಬೀಳಲಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಒಪ್ಪಂದಕ್ಕೆ ಸಹಿ ಬಿದ್ದ ತಕ್ಷಣವೇ ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ, ಇರಾನ್ ವಿದೇಶಾಂಗ ಸಚಿವಾಲಯವು ಭಾನುವಾರವೇ ಸಹಿ ಆಗುವ ಸಾಧ್ಯತೆಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ನಾಳೆಯೇ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ; ತಕ್ಷಣವೇ ಹಾರ್ಮುಜ್ ತೆರೆಯಲಾಗುವುದು ಎಂದ ಟ್ರಂಪ್
Donald Trump
ಸುಷ್ಮಾ ಚಕ್ರೆ
|

Updated on: Jun 13, 2026 | 11:26 PM

Share

ವಾಷಿಂಗ್ಟನ್, ಜೂನ್ 13: ಜಾಗತಿಕ ಆರ್ಥಿಕತೆ ಮತ್ತು ಮಧ್ಯಪ್ರಾಚ್ಯದ ಭದ್ರತೆಯ ಮೇಲೆ ತೀವ್ರ ಪರಿಣಾಮ ಬೀರಿದ್ದ ಅಮೆರಿಕ-ಇರಾನ್ ಸಂಘರ್ಷಕ್ಕೆ ದೊಡ್ಡ ತಿರುವು ಸಿಕ್ಕಿದೆ. ಇರಾನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ಶಾಂತಿ ಒಪ್ಪಂದಕ್ಕೆ ಭಾನುವಾರವೇ ಸಹಿ ಹಾಕಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು (ಶನಿವಾರ) ರಾತ್ರಿ ಪ್ರಕಟಿಸಿದ್ದಾರೆ. “ಶಾಂತಿ ಒಪ್ಪಂದದ ಮಾತುಕತೆಗಳು ಅಂತಿಮ ಹಂತ ತಲುಪಿದ್ದು, ಮುಂದಿನ 24 ಗಂಟೆಗಳಲ್ಲಿ ಒಪ್ಪಂದಕ್ಕೆ ಸಹಿ ಬೀಳಲಿದೆ” ಎಂದು ಅಮೆರಿಕ-ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನ ಸರ್ಕಾರ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಟ್ರಂಪ್ ಅವರಿಂದ ಈ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.

“ನಾಳೆ (ಭಾನುವಾರ) ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಲಾಗಿದೆ. ಒಪ್ಪಂದಕ್ಕೆ ಸಹಿ ಬಿದ್ದ ತಕ್ಷಣವೇ, ಹಾರ್ಮುಜ್ ಜಲಸಂಧಿಯು ಜಗತ್ತಿನ ಎಲ್ಲಾ ದೇಶಗಳ ಹಡಗು ಸಂಚಾರಕ್ಕೆ ತಕ್ಷಣದಿಂದಲೇ ಮುಕ್ತವಾಗಲಿದೆ” ಎಂದು ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಇರಾನ್ ಮೇಲಿನ ದಾಳಿ ರದ್ದುಗೊಳಿಸಿದ ಟ್ರಂಪ್, ಶೀಘ್ರದಲ್ಲೇ ಶಾಂತಿ ಒಪ್ಪಂದ

ಟ್ರಂಪ್ ಅವರ ಈ ಘೋಷಣೆಯು ಇರಾನ್ ವಿದೇಶಾಂಗ ಸಚಿವಾಲಯದ ಹೇಳಿಕೆಗೆ ತದ್ವಿರುದ್ಧವಾಗಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ’24 ಗಂಟೆಗಳ ಒಳಗೆ ಒಪ್ಪಂದದ ಮಾಹಿತಿ ಹೊರಬೀಳಲಿದೆ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಕಾಯಿ, “ಒಪ್ಪಂದದ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ. ಆದರೆ ಅದು ನಾಳೆಯಂತೂ ಖಂಡಿತ ಅಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಹೀಗಿದ್ದರೂ ಟ್ರಂಪ್ ಈ ರೀತಿಯ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ. ಈ ಹಿಂದೆ ಕೂಡ ಡೊನಾಲ್ಡ್ ಟ್ರಂಪ್ ನೀಡಿದ್ದ ಹೇಳಿಕೆಗಳನ್ನು ಇರಾನ್ ಅಲ್ಲಗಳೆದಿತ್ತು. ಇದರಿಂದ ಟ್ರಂಪ್​ಗೆ ಜಾಗತಿಕ ಮಟ್ಟದಲ್ಲಿ ಮುಜುಗರ ಉಂಟಾಗಿತ್ತು. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಸಹ ಮುಂಬರುವ ದಿನಗಳಲ್ಲಿ ಸಹಿ ಆಗಬಹುದು ಎಂದಷ್ಟೇ ಹೇಳಿದ್ದರು.

ಇದನ್ನೂ ಓದಿ: ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ

ತಮ್ಮ ಟ್ರುತ್ ಪೋಸ್ಟ್​ನಲ್ಲಿ ಶಾಂತಿ ಒಪ್ಪಂದದ ಬಗ್ಗೆ ಕೆಲವು ಸಂಗತಿಗಳನ್ನು ಕೂಡ ಟ್ರಂಪ್ ಹಂಚಿಕೊಂಡಿದ್ದಾರೆ. ಈ ಒಪ್ಪಂದದ ಮೂಲಕ ಇರಾನ್ ಯಾವುದೇ ಪರಮಾಣು ಅಸ್ತ್ರಗಳನ್ನು ಹೊಂದದಂತೆ ಕಠಿಣ ನಿಯಮ ವಿಧಿಸಲಾಗುವುದು. ಇರಾನ್ ಇನ್ನು ಮುಂದೆ ಯಾವುದೇ ಪರಮಾಣು ಆಸ್ತ್ರವನ್ನು ಹೊಂದುವುದಿಲ್ಲ ಮತ್ತು ಖರೀದಿಸುವ, ಅಭಿವೃದ್ಧಿಪಡಿಸುವ ಯತ್ನವನ್ನೂ ಮಾಡುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಈ ಒಪ್ಪಂದದಲ್ಲಿ ಯಾವುದೇ ರೀತಿಯ ನಗದು ಹಸ್ತಾಂತರ ಇರುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. 2015ರ ಒಬಾಮಾ ಆಡಳಿತದ ಇರಾನ್ ಪರಮಾಣು ಒಪ್ಪಂದವನ್ನು ಟೀಕಿಸಿದ ಅವರು, “ಅಂದು ಒಬಾಮಾ ಬಿಲಿಯನ್‌ಗಟ್ಟಲೆ ಡಾಲರ್ ನಗದನ್ನು ಇರಾನ್‌ಗೆ ನೀಡಿದ್ದರು. ಆದರೆ ಈ ಬಾರಿ ಯಾವುದೇ ಹಣದ ವ್ಯವಹಾರ ನಡೆಯುವುದಿಲ್ಲ” ಎಂದಿದ್ದಾರೆ.

ಒಂದು ವೇಳೆ ಈ ಶಾಂತಿ ಪ್ರಕ್ರಿಯೆ ವಿಫಲವಾದರೆ, ಇರಾನ್‌ನ ಭೂಗತ ಪರಮಾಣು ನೆಲೆಗಳನ್ನು ಧ್ವಂಸಗೊಳಿಸಲು ಅತ್ಯಾಧುನಿಕ ಮಿಲಿಟರಿ ತಂತ್ರಜ್ಞಾನವನ್ನು ಒಳಗೊಂಡ ಅಂತಿಮ ಪರ್ಯಾಯ ಮಾರ್ಗವನ್ನು ಬಳಸಬೇಕಾಗುತ್ತದೆ ಎಂದು ಟ್ರಂಪ್ ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕಳೆದ ಏಪ್ರಿಲ್ 8ರಂದು ಅಮೆರಿಕ ಮತ್ತು ಇರಾನ್ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದವು. ಅದಾದ ನಂತರ ದೀರ್ಘಕಾಲೀನ ಶಾಂತಿ ಒಪ್ಪಂದಕ್ಕಾಗಿ ವಾರಗಟ್ಟಲೆ ಮಾತುಕತೆಗಳು ನಡೆದರೂ ಯಾವುದೇ ಫಲ ಸಿಕ್ಕಿರಲಿಲ್ಲ. ಇತ್ತೀಚೆಗೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರಿದ್ದ ಹಡಗುಗಳ ಮೇಲೆಯೂ ದಾಳಿ ನಡೆದು ಜಾಗತಿಕ ಆರ್ಥಿಕತೆ ಉದ್ವಿಗ್ನಗೊಂಡಿತ್ತು. ಸದ್ಯ ಜಾಗತಿಕ ತೈಲ ಮಾರುಕಟ್ಟೆ ಮತ್ತು ಕಡಲ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ಈ ಒಪ್ಪಂದದ ಮೇಲೆ ಇಡೀ ಜಗತ್ತು ಕಣ್ಣಿಟ್ಟಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!