AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ – ಉಕ್ರೇನ್ ಮಧ್ಯೆ ಕದನ ವಿರಾಮ ಅಲ್ಲ, ಶೀಘ್ರದಲ್ಲೇ ಶಾಶ್ವತ ಶಾಂತಿ ಒಪ್ಪಂದ: ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ!

ಅಲಾಸ್ಕಾದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಮಾತುಕತೆಯ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ ಮತ್ತು ಉಕ್ರೇನ್ ನಡುವೆ ಶಾಶ್ವತ ಶಾಂತಿ ಒಪ್ಪಂದದ ಸಾಧ್ಯತೆ ಇದೆ ಎಂದು ಘೋಷಿಸಿದ್ದಾರೆ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ಮುಂದಿನ ಮಾತುಕತೆಯು ಈ ಒಪ್ಪಂದವನ್ನು ಅಂತಿಮಗೊಳಿಸಲಿದೆ ಎಂದು ಅವರು ಹೇಳಿದ್ದಾರೆ.

ರಷ್ಯಾ - ಉಕ್ರೇನ್ ಮಧ್ಯೆ ಕದನ ವಿರಾಮ ಅಲ್ಲ, ಶೀಘ್ರದಲ್ಲೇ ಶಾಶ್ವತ ಶಾಂತಿ ಒಪ್ಪಂದ: ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ!
ವೊಲೊಡಿಮಿರ್ ಝೆಲೆನ್ಸ್ಕಿ, ಡೊನಾಲ್ಡ್ ಟ್ರಂಪ್, ವ್ಲಾಡಿಮಿರ್ ಪುಟಿನ್
Ganapathi Sharma
|

Updated on: Aug 16, 2025 | 3:13 PM

Share

ಅಲಾಸ್ಕಾ, ಆಗಸ್ಟ್ 16: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ದ್ವಿಪಕ್ಷೀಯ ಮಾತುಕತೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮಹತ್ವದ ಘೋಷಣೆ ಮಾಡಿದ್ದಾರೆ. ಪುಟಿನ್ ಜತೆಗಿನ ಮಾತುಕತೆ ಅತ್ಯಂತ ಚೆನ್ನಾಗಿ ನಡೆದಿದೆ. ರಷ್ಯಾ ಮತ್ತು ಉಕ್ರೇನ್ ಮಧ್ಯೆ ಕದನ ವಿರಾಮ ಅಲ್ಲ, ಶಾಶ್ವತ ಶಾಂತಿ ಒಪ್ಪಂದ ಏರ್ಪಡಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕವೂ ಟ್ರಂಪ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಹ ಅಮೆರಿಕಕ್ಕೆ ಬರಲಿದ್ದು, ಅವರ ಜತೆಗೂ ಮಾತುಕತೆ ನಡೆಯಲಿದೆ. ನಂತರದಲ್ಲಿ ಒಪ್ಪಂದ ಏರ್ಪಡಲಿದೆ ಎಂದು ಟ್ರಂಪ್ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

‘‘ಅಲಾಸ್ಕಾದಲ್ಲಿ ಒಂದು ಅದ್ಭುತ ಮತ್ತು ಅತ್ಯಂತ ಯಶಸ್ವಿ ದಿನ! ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸಭೆ ತುಂಬಾ ಚೆನ್ನಾಗಿ ನಡೆಯಿತು, ಉಕ್ರೇನ್‌ನ ಅಧ್ಯಕ್ಷ ಝೆಲೆನ್ಸ್ಕಿ ಮತ್ತು ನ್ಯಾಟೋದ (NATO) ಗೌರವಾನ್ವಿತ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಯುರೋಪಿಯನ್ ನಾಯಕರೊಂದಿಗೆ ತಡರಾತ್ರಿಯ ಫೋನ್ ಕರೆಯೂ ನಡೆಯಿತು. ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ ಯುದ್ಧ ಕೊನೆಗೊಳಿಸಲು ನೇರವಾಗಿ ಶಾಂತಿ ಒಪ್ಪಂದ ಮಾಡಿಕೊಳ್ಳುವುದೇ ಉತ್ತಮ ಮಾರ್ಗವೆಂದು ಎಲ್ಲರೂ ನಿರ್ಧರಿಸಿದ್ದಾರೆ. ಇದರಿಂದ ಯುದ್ಧ ಕೊನೆಯಾಗಲಿದೆ. ಇದು ಕೇವಲ ಕದನ ವಿರಾಮ ಒಪ್ಪಂದವಲ್ಲ, ಶಾಶ್ವತ ಶಾಂತಿ ಒಪ್ಪಂದ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸೋಮವಾರ ಮಧ್ಯಾಹ್ನ ವಾಷಿಂಗ್ಟನ್ ಡಿಸಿ, ಓವಲ್ ಕಚೇರಿಗೆ ಬರಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ, ನಾವು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಸಭೆ ನಿಗದಿಪಡಿಸುತ್ತೇವೆ. ಇದು ಲಕ್ಷಾಂತರ ಜನರ ಜೀವಗಳನ್ನು ಉಳಿಸುವ ಸಾಧ್ಯತೆಯಿದೆ’’ ಎಂದು ಎಕ್ಸ್ ಸಂದೇಶದಲ್ಲಿ ಟ್ರಂಪ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಭಾರತದ ಉತ್ಪನ್ನಗಳಿಗೆ ಹೆಚ್ಚುವರಿ ಸುಂಕ ವಾಪಸ್ ಪಡೆಯುತ್ತಾರಾ ಟ್ರಂಪ್?
Image
ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸಿದೆ ಎಂದ ಟ್ರಂಪ್! ಇದು ನಿಜವೇ?
Image
ಅಮೆರಿಕ - ರಷ್ಯಾ ಮಧ್ಯೆ ಮೂಡದ ಒಮ್ಮತ: ಭಾರತಕ್ಕೆ ಮತ್ತಷ್ಟು ತೆರಿಗೆ ಬರೆ?
Image
ರಷ್ಯಾ ಅಧ್ಯಕ್ಷ ಪುಟಿನ್​​ಗೆ ಬಹಿರಂಗವಾಗಿ ಬೆದರಿಕೆ ಹಾಕಿದ ಟ್ರಂಪ್

ಡೊನಾಲ್ಡ್ ಟ್ರಂಪ್ ಸಂದೇಶ

ಇದರೊದಿಗೆ, ರಷ್ಯಾ ಹಾಗೂ ಉಕ್ರೇನ್ ನಡುವಣ ವರ್ಷಗಳ ಯುದ್ಧ ಕೊನೆಯಾಗುವ ಸಾಧ್ಯತೆ ಗೋಚರಿಸಿದೆ. ಆದಾಗ್ಯೂ, ಈ ಹೇಳಿಕೆ ಬಿಡುಗಡೆ ಮಾಡುವ ಕೆಲವೇ ಕ್ಷಣಗಳ ಮುನ್ನ ‘ಫಾಕ್ಸ್ ನ್ಯೂಸ್​’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಟ್ರಂಪ್, ಉಕ್ರೇನ್​ ಯದ್ಧವು ಪ್ರಾದೇಶಿಕ ವಿನಾಯಿತಿಗಳೊಂದಿಗೆ ಕೊನೆಗೊಳ್ಳಲಿದೆ. ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಭೂ ವಿನಿಮಯ ಒಪ್ಪಂದ ಏರ್ಪಡಲಿದೆ. ಅದೇ ರೀತಿ, ಉಕ್ರೇನ್​​ಗೆ ಅಮೆರಿಕವು ಸಂಭಾವ್ಯ ಭದ್ರತೆಯ ಖಾತರಿ ಒದಗಿಸುವ ಬಗ್ಗೆಯೂ ಚರ್ಚೆಯಾಗಿದೆ ಎಂದಿದ್ದರು.

ಇದನ್ನೂ ಓದಿ: ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸಿದೆ ಎಂದ ಡೊನಾಲ್ಡ್ ಟ್ರಂಪ್! ಇದು ನಿಜವೇ? ಇಲ್ಲಿದೆ ವಿವರ

ಅಲ್ಲದೆ, ಈ ಒಪ್ಪಂದವು ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಮಾತುಕತೆಯ ನಂತರವೇ ಅಂತಿಮಗೊಳ್ಳಲಿದೆ. ಅವರು ನಮ್ಮ ಆಗ್ರಹಕ್ಕೆ ಒಪ್ಪದೆ ಇರಲೂಬಹುದು. ಆದರೆ, ಉಕ್ರೇನ್ ಒಪ್ಪಂದಕ್ಕೆ ಒಪ್ಪಿಕೊಳ್ಳಬೇಕು ಎಂದು ಟ್ರಂಪ್ ಆಗ್ರಹಿಸಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಅಂತಿಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ