AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಎದುರಾಳಿಗಳನ್ನು ಜೈಲಿಗೆ ಹಾಕುವೇ, ನ್ಯಾಯಂಗ ಇಲಾಖೆ ಭಾಷಣದಲ್ಲಿ ಅಬ್ಬರಿಸಿ ಬೊಬ್ಬರಿದ ಟ್ರಂಪ್

ನಮ್ಮ ಸರ್ಕಾರದಿಂದ ರಾಕ್ಷಸ ಗುಣ ಇರುವ ಹಾಗೂ ಭ್ರಷ್ಟ ಶಕ್ತಿಗಳನ್ನು ನಾವು ಹೊರಹಾಕುತ್ತೇವೆ. ಅವರ ಘೋರ ಅಪರಾಧಗಳು ಮತ್ತು ದುಷ್ಕೃತ್ಯವನ್ನು ನಾವು ಬಹಿರಂಗಪಡಿಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ಹೇಳಿದರು. 2021ರಲ್ಲಿ ಅಫ್ಘಾನಿಸ್ತಾನದಿಂದ ಯುನೈಟೆಡ್ ಸ್ಟೇಟ್ಸ್ ಮಿಲಿಟರಿಯನ್ನು ತೆಗೆಯುವ ಮೂಲಕ ತಾಲಿಬಾನ್​​ಗಳಿಗೆ ಅವಕಾಶ ಮಾಡಿಕೊಟ್ಟು, ಜಗತ್ತಿನ ಮುಂದೆ ನಮ್ಮ ದೇಶಕ್ಕೆ ಅವಮಾನ ಮಾಡಿದ್ದಾರೆ. ತಮ್ಮ ಎದುರಾಳಿಗಳನ್ನು ಜೈಲಿಗೆ ಹಾಕಲು ಮುಂದಾಗಿದ್ದಾರೆ ಟ್ರಂಪ್.

ನನ್ನ ಎದುರಾಳಿಗಳನ್ನು ಜೈಲಿಗೆ ಹಾಕುವೇ, ನ್ಯಾಯಂಗ ಇಲಾಖೆ ಭಾಷಣದಲ್ಲಿ ಅಬ್ಬರಿಸಿ ಬೊಬ್ಬರಿದ ಟ್ರಂಪ್
ಡೊನಾಲ್ಡ್ ಟ್ರಂಪ್
ಅಕ್ಷಯ್​ ಪಲ್ಲಮಜಲು​​
| Edited By: |

Updated on:Mar 15, 2025 | 9:38 AM

Share

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶುಕ್ರವಾರ (ಮಾ.14) ಅಮೆರಿಕದ ನ್ಯಾಯಂಗ ಇಲಾಖೆಯಲ್ಲಿ ತಮ್ಮ ಭಾಷಣವನ್ನು ಮಾಡಿದ್ದಾರೆ. ಈ ವೇಳೆ ತಮ್ಮ ಶತ್ರುಗಳ ಹೆಡೆಮುರಿ ಕಟ್ಟುವ ಬಗ್ಗೆ ಮಾತನಾಡಿದ್ದಾರೆ. ತಮ್ಮ ವಿರೋಧಿಗಳಿಗೆ ಖಡಕ್ ಎಚ್ಚರಿಕೆಯನ್ನು ಈ ಮೂಲಕ ಟ್ರಂಪ್ ನೀಡಿದ್ದಾರೆ. ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ತಮ್ಮ ವಿರುದ್ಧದ ವಿಚಾರಣೆಯಲ್ಲಿ ಭಾಗಿಯಾಗಿರುವ ಎಲ್ಲ ಜನರನ್ನು ಬಹಿರಂಗಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕೆಲವು ತಿಂಗಳುಗಳ ಹಿಂದೆ ತನ್ನ ಮೇಲೆ ಮೊಕದ್ದಮೆ ಹೂಡಿದ್ದ ಬಗ್ಗೆ ನ್ಯಾಯಾಂಗ ಇಲಾಖೆಯ ಪ್ರಧಾನ ಕಚೇರಿಯಲ್ಲಿ ಮಾತನಾಡಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳನ್ನು ಜೈಲಿಗೆ ಕಳುಹಿಸುವುದಾಗಿ ಹೇಳಿದ್ದಾರೆ.

ನಮ್ಮ ಸರ್ಕಾರದಿಂದ ರಾಕ್ಷಸ ಗುಣ ಇರುವ ಹಾಗೂ ಭ್ರಷ್ಟ ಶಕ್ತಿಗಳನ್ನು ನಾವು ಹೊರಹಾಕುತ್ತೇವೆ. ಅವರ ಘೋರ ಅಪರಾಧಗಳು ಮತ್ತು ದುಷ್ಕೃತ್ಯವನ್ನು ನಾವು ಬಹಿರಂಗಪಡಿಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ಹೇಳಿದರು. 2021ರಲ್ಲಿ ಅಫ್ಘಾನಿಸ್ತಾನದಿಂದ ಯುನೈಟೆಡ್ ಸ್ಟೇಟ್ಸ್ ಮಿಲಿಟರಿಯನ್ನು ತೆಗೆಯುವ ಮೂಲಕ ತಾಲಿಬಾನ್​​ಗಳಿಗೆ ಅವಕಾಶ ಮಾಡಿಕೊಟ್ಟು, ಜಗತ್ತಿನ ಮುಂದೆ ನಮ್ಮ ದೇಶಕ್ಕೆ ಅವಮಾನ ಮಾಡಿದ್ದಾರೆ. ಜೋ ಬೈಡನ್​​ ಆಡಳಿತ ಸಮಯದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈ ಸಮಯದಲ್ಲಿದ್ದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಪ್ರಮಾಣವಚನ ಸ್ವೀಕಾರ

ಇದನ್ನೂ ಓದಿ
Image
ವೈಟ್​ಹೌಸ್​ನಿಂದ ಝಲೆನ್ಸ್ಕಿಯನ್ನು ಹೊರದಬ್ಬಿದ ಟ್ರಂಪ್
Image
ಝೆಲೆನ್ಸ್ಕಿ ಶಾಂತಿ ಬಯಸುತ್ತಿಲ್ಲ ಎಂದು ಕಿಡಿಕಾರಿದ ಟ್ರಂಪ್
Image
ಮಾಧ್ಯಮದೆದುರು ಸಣ್ಣ ಮಕ್ಕಳಂತೆ ಕಿತ್ತಾಡಿದ ಟ್ರಂಪ್-ಝೆಲೆನ್ಸ್ಕಿ
Image
ಬೈಡನ್ ಭಾರತದಲ್ಲಿ ಸರ್ಕಾರ ಬದಲಿಸಲು ಪ್ರಯತ್ನಿಸಿದ್ದರೇ?

ಇನ್ನು ಅಮೆರಿಕದ ಆಡಳಿತದಲ್ಲಿ ಅಧ್ಯಕ್ಷರೊಬ್ಬರು ನ್ಯಾಯಾಂಗ ಇಲಾಖೆಗೆ ಭೇಟಿ ನೀಡಿದ್ದು ಇದೇ ಮೊದಲು. ತಮ್ಮ ಭಾಷಣದಲ್ಲಿ, ಬೈಡನ್ ಆಡಳಿತವು ಇಲಾಖೆಯನ್ನು ತಮ್ಮ ವಿರುದ್ಧ ಅಸ್ತ್ರವನ್ನಾಗಿ ಮಾಡಿಕೊಂಡಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.ನಮ್ಮ ಪೂರ್ವಜರು ಈ ನ್ಯಾಯ ಇಲಾಖೆಯನ್ನು ಅನ್ಯಾಯದ ಇಲಾಖೆಯಾಗಿ ಪರಿವರ್ತಿಸಿದರು. ಆದರೆ ಆ ದಿನಗಳು ಮುಗಿದಿವೆ ಮತ್ತು ಅವು ಎಂದಿಗೂ ಹಿಂತಿರುಗುವುದಿಲ್ಲ ಮತ್ತು ಎಂದಿಗೂ ಬರುವುದಿಲ್ಲ ಎಂದು ಘೋಷಿಸಲು ನಾನು ಇಂದು ನಿಮ್ಮ ಮುಂದೆ ನಿಂತಿದ್ದೇನೆ” ಎಂದು ಟ್ರಂಪ್ ಹೇಳಿದರು.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 am, Sat, 15 March 25

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ