AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?

Donald Trump injured or dead, rumours go viral: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸತ್ತೇ ಹೋಗಿದ್ದಾರೆ ಎನ್ನುವ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಬ್ಬಿವೆ. ಕೆಲವರು ಅಧ್ಯಕ್ಷರ ಬೆಂಬಾವಲು ವಾಹನಗಳು ಆಸ್ಪತ್ರೆಗೆ ಹೋಗುತ್ತಿರುವ ದೃಶ್ಯಗಳ ವಿಡಿಯೋವನ್ನು ಪೋಸ್ಟ್ ಮಾಡಿ ವದಂತಿಗೆ ಇಂಬುಕೊಟ್ಟಿದ್ದಾರೆ.

ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?
ಡೊನಾಲ್ಡ್ ಟ್ರಂಪ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 05, 2026 | 3:53 PM

Share

ವಾಷಿಂಗ್ಟನ್, ಏಪ್ರಿಲ್ 5: ಇರಾನ್ ಅನ್ನು ಹೊಸಕಿ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಡೊನಾಲ್ಡ್ ಟ್ರಂಪ್ ಅವರೇ ಇನ್ನಿಲ್ಲವಾಗಿದ್ದಾರೆ (Donald Trump death rumours) ಎನ್ನುವಂತಹ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಬ್ಬತೊಡಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್​ಗೆ (Walter Reed National Military Medical Center) ದಾಖಲಿಸಲಾಗಿದೆ. ಅವರು ಸತ್ತೇ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇದ್ದಾರೆ. ಅವರಿಗೇನೂ ಆಗಿಲ್ಲ ಎನ್ನುವ ಪ್ರತಿವಾದಗಳೂ ಇವೆ. ಆದರೆ, ಟ್ರಂಪ್ ಅನಾರೋಗ್ಯಗೊಂಡಿರುವ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಮಾಹಿತಿ ಹೊರಬಂದಿಲ್ಲ.

ಟ್ರಂಪ್ ಅವರನ್ನು ವಾಲ್ಟರ್ ರೀಡ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕೆಲ ವರದಿಗಳು ಹೇಳುತ್ತಿವೆ ಎಂದು ವಿಜ್ಞಾನಿ, ವೈದ್ಯಕೀಯ ತಜ್ಞೆ ಎಂದು ಹೇಳಿಕೊಳ್ಳುವ ಡಾ. ಜೇನ್ ರೂಬಿ ಎಂಬಾಕೆ ಟ್ವೀಟ್ ಮಾಡಿದ್ದಾರೆ. ವಾಲ್ಟರ್ ರೀಡ್ ಆಸ್ಪತ್ರೆಯ ಸುತ್ತಲಿನ ರಸ್ತೆಗಳನ್ನು ಮುಚ್ಚಲಾಗಿದೆ. ಅಧ್ಯಕ್ಷರು ಇವತ್ತು ಸಾರ್ವಜರಿಕರಿಗೆ ಕಾಣಿಸಿಕೊಳ್ಳುವುದಿಲ್ಲವೆಂದು ಶ್ವೇತ ಭವನ ಪ್ರಕಟಿಸಿದೆ ಎಂದು ತಮ್ಮ ಮಾಹಿತಿಗೆ ಇಂಬುಕೊಡುವ ಸಂಗತಿಗಳನ್ನು ಡಾ. ಜೇನ್ ತಿಳಿಸಿದ್ದಾರೆ.

ಇದನ್ನೂ ಓದಿ: ಶತ್ರುಗಳ ನೆಲದಲ್ಲಿ ಬಿದ್ದಿದ್ದ ತನ್ನ ಪೈಲಟ್​ನನ್ನು ಅಮೆರಿಕ ರಕ್ಷಿಸಿಕೊಂಡಿದ್ದು ಹೇಗೆ?

ಚಾರ್ಲಿ ಕಿರ್ಕ್ ಎನ್ನುವ ವ್ಯಕ್ತಿಯೊಬ್ಬರು, ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ವಾಹನಗಳು ಆಸ್ಪತ್ರೆಯತ್ತ ಸಾಗುತ್ತಿರುವ ದೃಶ್ಯದ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ. ಆದರೆ, ಈ ವಿಡಿಯೋ 2024ರ ಜುಲೈನದ್ದು. ಚುನಾವಣಾ ಪ್ರಚಾರ ಭಾಷಣದ ವೇಳೆ ಟ್ರಂಪ್ ಗಾಯಗೊಂಡಾಗ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆಗಿನ ದೃಶ್ಯ ಇದು ಎಂದು ಅನೇಕ ಜನರು ಸ್ಪಷ್ಟನೆ ಕೊಟ್ಟಿದ್ದಾರೆ.

2024ರ ಜುಲೈನಲ್ಲಿ ಟ್ರಂಪ್ ಅವರನ್ನು ಗುರಿಯಾಗಿಸಿ ಗುಂಡು ಹಾರಿಸಲಾಗಿತ್ತು. ಗುಂಡು ಕಿವಿಯನ್ನು ಸವರಿಕೊಂಡು ಹೋಗಿತ್ತು. ಟ್ರಂಪ್ ಕೊನೆ ಕ್ಷಣದಲ್ಲಿ ತಲೆ ಅಲುಗಾಡಿಸಿದ ಪರಿಣಾಮ ಅವರು ಸಾವಿನಿಂದ ಬಚಾವಾಗಿದ್ದರು. ಆಗ ಗಾಯಗೊಂಡಿದ್ದ ಅವರನ್ನು ಪೆನ್​ಸಿಲ್ವೇನಿಯಾದ ಬಟ್ಲರ್​ನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿತ್ತು. ಆದರೆ, ಈಗ ವಾಲ್ಟರ್ ರೀಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೇರಿಲ್ಯಾಂಡ್​ನ ಬೆಥೆಸಾದಲ್ಲಿರುವ ವಾಲ್ಟರ್ ರೀಡ್ ಆಸ್ಪತ್ರೆಯಲ್ಲಿ ಐದು ತಿಂಗಳ ಹಿಂದೆ ಟ್ರಂಪ್ ಅವರನ್ನು ದಾಖಲಿಸಲಾಗಿತ್ತು ಎಂದು ಕೆಲ ಓದುಗರು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ಸತ್ತಿದ್ದಾರೆ, ಸ್ಟೀಫನ್ ಮಿಲ್ಲರ್ ಅಧ್ಯಕ್ಷಗಿರಿ ನಿಭಾಯಿಸುತ್ತಿದ್ದಾರಾ?

ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ನಿನ್ನೆ ಇರಾನ್ ವಿರುದ್ಧ ಎಚ್ಚರಿಕೆಯ ಸಂದೇಶ ಪೋಸ್ಟ್ ಮಾಡಿದ್ದರು. ಹಾರ್ಮುಜ್ ಜಲಸಂಧಿ ತೆರೆಯಲು ಅಥವಾ ಒಪ್ಪಂದ ಮಾಡಿಕೊಳ್ಳಲು ಇರಾನ್​ಗೆ ನೀಡಿದ್ದ 10 ದಿನಗಳ ಡೆಡ್​ಲೈನ್ ಮುಗಿಯುತ್ತಾ ಬಂದಿದೆ. ಅವರ ಮೇಲೆ ನರಕ ವಕ್ಕರಿಸಲು 48 ಗಂಟೆ ಮಾತ್ರ ಇದೆ ಎಂದು ಟ್ರಂಪ್ ಬರೆದುಕೊಂಡಿದ್ದರು.

ಇದನ್ನೂ ಓದಿ: 48 ಗಂಟೆಗಳಲ್ಲಿ ಒಪ್ಪಂದವಾಗದಿದ್ದರೆ ನರಕ ನೋಡುತ್ತೀರಿ; ಇರಾನ್‌ಗೆ ಟ್ರಂಪ್ ಹೊಸ ಎಚ್ಚರಿಕೆ

ಆದರೆ, ಟ್ರಂಪ್ ಈ ಟ್ವೀಟ್ ಬರೆದಿಲ್ಲ. ಅವರು ಈಗ ವಾಲ್ಟರ್ ರೀಡ್​ನಲ್ಲಿ ಇದ್ದಾರೆ. ಕೊನೆಯ ಕ್ಷಣಗಳನ್ನು ಎದುರಿಸುತ್ತಿದ್ದಾರೆ. ಶ್ವೇತ ಭವನದ ಅಧಿಕಾರಿ ಸ್ಟೀಫನ್ ಮಿಲ್ಲರ್ ಅವರು ಹಂಗಾಮಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಒಬ್ಬರು ಟ್ವೀಟ್ ಮಾಡಿದ್ದಾರೆ.

ಆದರೆ, ಹೆಚ್ಚಿನ ಆನ್​ಲೈನ್ ಸಮುದಾಯವು ಈ ಸುದ್ದಿಯನ್ನು ಸುಳ್ಳು ಎಂದು ಹೇಳಿವೆ. ಹಿಂದೆಲ್ಲಾ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮೊದಲಾದ ಬೇರೆ ಬೇರೆ ನಾಯಕರ ವಿಷಯದಲ್ಲೂ ಇಂಥ ಸಾವಿನ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿರುವುದುಂಟು.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Sun, 5 April 26

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು