AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬ ತಡವಾಗಿದೆ, ಇರಾನ್ ಜೊತೆ ಮಾತುಕತೆ ಸಾಧ್ಯವಿಲ್ಲ; ಟ್ರಂಪ್ ಘೋಷಣೆ

ಯುಎಸ್-ಇಸ್ರೇಲ್ ದಾಳಿಗಳು ಸಂಘರ್ಷವನ್ನು ಹೆಚ್ಚಿಸುತ್ತಿದ್ದಂತೆ ಇರಾನ್ ಜೊತೆ ಮಾತುಕತೆಯ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. 'ಈಗಾಗಲೇ ತುಂಬ ತುಂಬ ತಡವಾಗಿದೆ. ಇರಾನ್ ಜೊತೆ ಮಾತುಕತೆ ನಡೆಸಲು ಸಾಧ್ಯವಿಲ್ಲ' ಎಂದು ಘೋಷಿಸಿದ್ದಾರೆ. 72 ಗಂಟೆಗಳ ಹಿಂದೆ ಇರಾನ್ ಮೇಲೆ ಯುಎಸ್-ಇಸ್ರೇಲ್ ಜಂಟಿ ದಾಳಿ ಪ್ರತೀಕಾರದ ದಾಳಿಗೆ ಕಾರಣವಾಯಿತು.

ತುಂಬ ತಡವಾಗಿದೆ, ಇರಾನ್ ಜೊತೆ ಮಾತುಕತೆ ಸಾಧ್ಯವಿಲ್ಲ; ಟ್ರಂಪ್ ಘೋಷಣೆ
Donald Trump
ಸುಷ್ಮಾ ಚಕ್ರೆ
|

Updated on: Mar 03, 2026 | 8:44 PM

Share

ವಾಷಿಂಗ್ಟನ್, ಮಾರ್ಚ್ 3: ಇಂದು ಸಂಜೆ ಡೊನಾಲ್ಡ್ ಟ್ರಂಪ್ (Donald Trump) ಯುದ್ಧದ ಅಂತ್ಯದ ಬಗ್ಗೆ ಮಾತನಾಡಿದ್ದಾರೆ. ಇರಾನ್‌ನ ವಾಯುಪಡೆ ಮತ್ತು ನೌಕಾಪಡೆ ನಾಶವಾಯಿತು. ಇರಾನ್​ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯಿಂದ ಪ್ರಾರಂಭಿಸಿ ಇರಾನ್​ನ ಎಲ್ಲ ನಾಯಕರನ್ನೂ ಹತ್ಯೆ ಮಾಡಲಾಗಿದೆ. ಹೀಗಾಗಿ ತನ್ನಿಂದ ತಾನಾಗೇ ಯುದ್ಧ ನಿಲ್ಲುತ್ತದೆ. ಈಗಾಗಲೇ ತಡವಾಗಿರುವುದರಿಂದ ಮಾತುಕತೆ ಸಾಧ್ಯವಿಲ್ಲ ಎಂದಿದ್ದಾರೆ.

ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಪ್ರಭಾವಿ ಮುಖ್ಯಸ್ಥ ಅಲಿ ಲಾರಿಜಾನಿ, ಇರಾನ್ ಅಮೆರಿಕದ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ ಒಂದು ದಿನದ ನಂತರ ಟ್ರಂಪ್ ಅವರ ಈ ಘೋಷಣೆ ಹೊರಬಿದ್ದಿದೆ. ಇರಾನಿನ ಅಧಿಕಾರಿಗಳು ಟ್ರಂಪ್ ಜೊತೆ ಮಾತುಕತೆ ನಡೆಸಲು ಪ್ರಯತ್ನಿಸಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಅಮೆರಿಕ ನಿರಾಕರಿಸಿದೆ.

ಇದನ್ನೂ ಓದಿ: ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಯುಎಸ್-ಇಸ್ರೇಲ್ ದಾಳಿಗಳು ಗಣ್ಯ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ ಸೇರಿದಂತೆ ಟೆಹ್ರಾನ್‌ನಲ್ಲಿರುವ ಇರಾನ್ ಆಡಳಿತ ಕಟ್ಟಡಗಳನ್ನು ಗುರಿಯಾಗಿಸಿಕೊಂಡವು. ಬಾಲಕಿಯರ ಶಾಲೆ ಸೇರಿದಂತೆ ನಾಗರಿಕ ಕೇಂದ್ರಗಳನ್ನು ಸಹ ಹೊಡೆದವು ಎಂದು ವರದಿಯಾಗಿದೆ. ಇದರಲ್ಲಿ ಮಕ್ಕಳು ಸೇರಿದಂತೆ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

ಇಂದು ಕ್ಷಿಪಣಿಗಳು ಮತ್ತು ದಾಳಿ ಡ್ರೋನ್‌ಗಳು ಟೆಹ್ರಾನ್‌ನ ಹಲವಾರು ಗುರಿಗಳ ಮೇಲೆ ದಾಳಿ ಮಾಡಿದವು, ಅವುಗಳಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರಿರುವ ಕಟ್ಟಡ ಕೂಡ ಸೇರಿತ್ತು. ನಂತರ ಅವರನ್ನು ಕೊಲ್ಲಲಾಗಿದೆ ಎಂದು ದೃಢಪಡಿಸಲಾಯಿತು. ಇರಾನ್ ಟೆಲ್ ಅವೀವ್, ಇತರ ಇಸ್ರೇಲಿ ನಗರಗಳು ಮತ್ತು ಪಶ್ಚಿಮ ಏಷ್ಯಾದಾದ್ಯಂತದ ಯುಎಸ್ ಮಿಲಿಟರಿ ನೆಲೆಗಳು ಮತ್ತು ರಾಯಭಾರ ಕಚೇರಿಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಸೌದಿ ಅರೇಬಿಯಾದಲ್ಲಿನ ತೈಲ ಸಂಸ್ಕರಣಾಗಾರ ಮತ್ತು ದುಬೈನಲ್ಲಿರುವ ಐಷಾರಾಮಿ ಹೋಟೆಲ್ ಸೇರಿದಂತೆ ನಾಗರಿಕ ಮತ್ತು ಇಂಧನ ಸೌಲಭ್ಯಗಳು ಸಹ ಹಾನಿಗೊಳಗಾದವು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್