AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯುಕ್ರೇನ್ ಯುದ್ಧ ಕೊನೆಗೊಳಿಸುತ್ತೇನೆ, ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಘೋಷಣೆ

ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನಾದಿನದಂದು ವಿಜಯೋತ್ಸವದಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವುದಾಗಿ ಮತ್ತು ಪಶ್ಚಿಮ ಏಷ್ಯಾದಲ್ಲಿನ ಅವ್ಯವಸ್ಥೆಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದರು. ಗಡಿಗಳ ಮೇಲೆ ನಾವು ಶೀಘ್ರವಾಗಿ ನಿಯಂತ್ರಣವನ್ನು ಮರು ಸ್ಥಾಪಿಸುತ್ತೇವೆ ಎಂದು ಟ್ರಂಪ್ ಹೇಳಿದರು.

ನಾನು ಯುಕ್ರೇನ್ ಯುದ್ಧ ಕೊನೆಗೊಳಿಸುತ್ತೇನೆ, ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಘೋಷಣೆ
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Jan 20, 2025 | 8:10 AM

Share

ಅಮೆರಿಕ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ‘ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ. ನಾನು ಮಧ್ಯಪ್ರಾಚ್ಯದಲ್ಲಿ ಅವ್ಯವಸ್ಥೆಯನ್ನು ನಿಲ್ಲಿಸುತ್ತೇನೆ ಮತ್ತು ಮೂರನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ’ ಎಂದು ಹೇಳಿದ್ದಾರೆ. ಗಡಿಗಳ ಮೇಲೆ ನಾವು ಶೀಘ್ರವಾಗಿ ನಿಯಂತ್ರಣವನ್ನು ಮರು ಸ್ಥಾಪಿಸುತ್ತೇವೆ ಎಂದು ಟ್ರಂಪ್ ಹೇಳಿದರು.

ಎಲಾನ್ ಮಸ್ಕ್ ಅವರ ಅಧ್ಯಕ್ಷತೆಯಲ್ಲಿ ನಾವು ಸರ್ಕಾರದ ದಕ್ಷತೆಯ ಹೊಸ ವಿಭಾಗವನ್ನು ರಚಿಸುತ್ತೇವೆ ಎಂದು ಟ್ರಂಪ್ ಹೇಳಿದರು. ನಾವು ಬಹಳಷ್ಟು ಬದಲಾವಣೆಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಎಲಾನ್ ಹೇಳಿದ್ದಾರೆ. ಮುಂದಿನ ಪ್ರಮುಖವಾದವು ಗಮನಾರ್ಹ ಬದಲಾವಣೆಗಳನ್ನು ಮಾಡುವ ಗುರಿಯನ್ನು ಹೊಂದಿದ್ದೇವೆ ಮತ್ತು ಮುಂಬರುವ ಶತಮಾನಗಳವರೆಗೆ ಅಮೆರಿಕ ಬಲಿಷ್ಠಗೊಳಿಸಲು ಅಡಿಪಾಯವನ್ನು ಹಾಕುತ್ತೇವೆ ಮೇಕಿಂಗ್ ಅಮೆರಿಕ ಮತ್ತೆ ಗ್ರೇಟ್ ಎಂದಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಗಾಗಿ ನಾವು ಮೊದಲ ಹೆಜ್ಜೆಯಾಗಿ ಐತಿಹಾಸಿಕ ಕದನ ವಿರಾಮ ಒಪ್ಪಂದವನ್ನು ಸಾಧಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನವೆಂಬರ್‌ನಲ್ಲಿ ನಮ್ಮ ಐತಿಹಾಸಿಕ ವಿಜಯದ ಪರಿಣಾಮವಾಗಿ ಈ ಒಪ್ಪಂದವನ್ನು ಸಾಧಿಸಲು ಸಾಧ್ಯವಾಯಿತು. ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ನಾನು ಅಧ್ಯಕ್ಷನಾಗಿದ್ದರೆ ಇದು (ಇಸ್ರೇಲ್-ಹಮಾಸ್ ಸಂಘರ್ಷ) ಎಂದಿಗೂ ಸಂಭವಿಸುತ್ತಿರಲಿಲ್ಲ.

ಮತ್ತಷ್ಟು ಓದಿ: ಹೌಡಿ ಮೋದಿ ಬಳಿಕ ಡೊನಾಲ್ಡ್ ಟ್ರಂಪ್ ಪದಗ್ರಹಣದಲ್ಲಿ ಭಾರತೀಯ ಡೋಲ್ ತಾಶಾ ಭಾಗಿ

ಹೊಸದಾಗಿ ಚುನಾಯಿತರಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇಕ್ ಅಮೆರಿಕ ಗ್ರೇಟ್ ಎಗೇನ್ (MAGA) ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು. ನಾವು ನಮ್ಮ ದೇಶವನ್ನು ಹಿಂದೆಂದಿಗಿಂತಲೂ ಶ್ರೇಷ್ಠವಾಗಿಸಲು ಹೊರಟಿದ್ದೇವೆ ಎಂದು ಹೇಳಿದರು. ನಾವು ಅಮೆರಿಕಕ್ಕೆ ಹೊಸ ದಿನ ಆರಂಭಿಸುತ್ತಿದ್ದೇವೆ. ಶಕ್ತಿ ಮತ್ತು ಸಮೃದ್ಧಿ, ಘನತೆ ಮತ್ತು ವೈಭವ ಇವೆಲ್ಲಾ ಇರುತ್ತೆ ನಾವು ವಿಫಲವಾದ, ಭ್ರಷ್ಟ ರಾಜಕೀಯ ಸ್ಥಾಪನೆಯ ಆಡಳಿತವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ.

ರಿಪಬ್ಲಿಕನ್ನರು ಎಂದಿಗೂ ಯುವ ಮತವನ್ನು ಗೆದ್ದಿಲ್ಲ, ನಾನು ಅದನ್ನು 36 ಅಂಕಗಳಿಂದ ಗೆದ್ದಿದ್ದೇನೆ ಅದಕ್ಕಾಗಿಯೇ ನಾನು ಟಿಕ್‌ಟಾಕ್ ಅನ್ನು ಪ್ರೀತಿಸುತ್ತೇನೆ. ನಾವು ಟಿಕ್‌ಟಾಕ್ ಅನ್ನು ಉಳಿಸಬೇಕಾಗಿದೆ ಏಕೆಂದರೆ ನಾವು ಬಹಳಷ್ಟು ಉದ್ಯೋಗಗಳನ್ನು ಉಳಿಸಬೇಕಾಗಿದೆ.

ನಮ್ಮ ವ್ಯವಹಾರವನ್ನು ಚೀನಾಕ್ಕೆ ನೀಡಲು ನಾವು ಬಯಸುವುದಿಲ್ಲ. ನಾನು ಟಿಕ್‌ಟಾಕ್ ಅನ್ನು ಅನುಮೋದಿಸಲು ಒಪ್ಪಿಕೊಂಡಿದ್ದೇನೆ ಆದರೆ ಷರತ್ತಿದೆ ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ