AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸರಕುಗಳ ಮೇಲೆ ಅಮೆರಿಕದಿಂದ ಶೇ. 20ರಷ್ಟು ಶುಲ್ಕ; ಟ್ರಂಪ್ ಘೋಷಣೆ

ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ತೀವ್ರಗೊಂಡಿರುವ ಬೆನ್ನಲ್ಲೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕ ಇಂಧನ ಸಾಗಣೆಯ ಅತ್ಯಂತ ಪ್ರಮುಖ ಜಲಮಾರ್ಗವಾದ 'ಹಾರ್ಮುಜ್ ಜಲಸಂಧಿ'ಯನ್ನು (Strait of Hormuz) ಅಮೆರಿಕ ತನ್ನ ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಘೋಷಿಸಿದ್ದಾರೆ. ಸಂದರ್ಶನವೊಂದರಲ್ಲಿ ಟ್ರಂಪ್ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಸತತ ಎರಡನೇ ದಿನವೂ ಪರಸ್ಪರ ದಾಳಿಗಳು ಮುಂದುವರಿದಿದ್ದು, ಇಬ್ಬರೂ ಜಲಸಂಧಿಯ ಮೇಲಿನ ತಮ್ಮ ನಿಯಂತ್ರಣವನ್ನು ಪ್ರತಿಪಾದಿಸುತ್ತಿದ್ದಾರೆ.

ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸರಕುಗಳ ಮೇಲೆ ಅಮೆರಿಕದಿಂದ ಶೇ. 20ರಷ್ಟು ಶುಲ್ಕ; ಟ್ರಂಪ್ ಘೋಷಣೆ
Trump Image Credit source: AP
ಸುಷ್ಮಾ ಚಕ್ರೆ
|

Updated on: Jul 13, 2026 | 10:06 PM

Share

ವಾಷಿಂಗ್ಟನ್, ಜುಲೈ 13: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಅತ್ಯಂತ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಜಾಗತಿಕವಾಗಿ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗಣೆ ಮಾಡಲಾಗುವ ಎಲ್ಲಾ ಸರಕುಗಳ ಮೇಲೆ ಅಮೆರಿಕವು ಶೇ. 20ರಷ್ಟು ಶುಲ್ಕವನ್ನು ವಿಧಿಸಲಿದೆ ಎಂದು ತಿಳಿಸಿದ್ದಾರೆ. “ಇಂದಿನಿಂದ ಯುಎಸ್‌ಎ (USA) ಅನ್ನು ‘ದಿ ಗಾರ್ಡಿಯನ್ ಆಫ್ ದಿ ಹಾರ್ಮುಜ್ ಸ್ಟ್ರೈಟ್’ (ಹಾರ್ಮುಜ್ ಜಲಸಂಧಿಯ ರಕ್ಷಕ) ಎಂದು ಕರೆಯಲಾಗುವುದು. ಜಗತ್ತಿನ ಅತ್ಯಂತ ಅಸ್ಥಿರವಾಗಿರುವ ಈ ಜಲಮಾರ್ಗಕ್ಕೆ ಸಂಪೂರ್ಣ ರಕ್ಷಣೆ ಮತ್ತು ಭದ್ರತೆ ಒದಗಿಸುವ ಕೆಲಸಕ್ಕಾಗಿ, ನ್ಯಾಯದ ದೃಷ್ಟಿಯಿಂದ ಅಮೆರಿಕಕ್ಕೆ ಮರುಪಾವತಿ ಸಿಗಬೇಕಿದೆ. ಹೀಗಾಗಿ ಇಲ್ಲಿ ಸಾಗಣೆಯಾಗುವ ಎಲ್ಲಾ ಸರಕುಗಳ ಮೇಲೆ ಶೇ. 20ರಷ್ಟು ದರದಲ್ಲಿ ಶುಲ್ಕ ವಿಧಿಸಲಾಗುವುದು. ಈ ಪ್ರಕ್ರಿಯೆ ಮತ್ತು ವ್ಯವಸ್ಥೆ ತಕ್ಷಣವೇ ಜಾರಿಗೆ ಬರಲಿದೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ನಾವು ಹಾರ್ಮುಜ್ ಜಲಸಂಧಿಯ ರಕ್ಷಕರು ಎಂದ ಟ್ರಂಪ್:

ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಪೂರೈಕೆಯಲ್ಲಿ ಸುಮಾರು 5ನೇ 1 ಭಾಗ (ಶೇ. 20ರಷ್ಟು) ಇದೇ ಜಲಸಂಧಿಯ ಮೂಲಕ ಸಾಗುವುದರಿಂದ ಇದು ಜಗತ್ತಿನ ಅತ್ಯಂತ ಪ್ರಮುಖ ಜಲಮಾರ್ಗವಾಗಿದೆ. ಈ ಕುರಿತು ಮಾತನಾಡಿದ ಟ್ರಂಪ್, “ನಾವು ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವನ್ನು ತೆಗೆದುಕೊಳ್ಳುತ್ತಿದ್ದೇವೆ. ಇರಾನ್ ಬಳಿ ಏನೂ ಇಲ್ಲ. ಇನ್ನು ಮುಂದೆ ನಾವೇ ಈ ಜಲಸಂಧಿಯ ರಕ್ಷಕರಾಗಲಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ನಾನೇ ನಂಬರ್ 1 ಟಾರ್ಗೆಟ್, ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಡೊನಾಲ್ಡ್ ಟ್ರಂಪ್

ರಕ್ಷಣೆ ನೀಡಿದ್ದಕ್ಕಾಗಿ ಅಮೆರಿಕಕ್ಕೆ ಹಣ:

ಅಮೆರಿಕವು ಈ ಹಾರ್ಮುಜ್ ಜಲಮಾರ್ಗಕ್ಕೆ ಭದ್ರತೆ ಒದಗಿಸುತ್ತಿರುವುದಕ್ಕೆ ಪ್ರತಿಯಾಗಿ ಜಗತ್ತಿನ ಶ್ರೀಮಂತ ರಾಷ್ಟ್ರಗಳಿಂದ ತಮಗೆ ಹಣ ಸಿಗಬೇಕು ಎಂದು ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. “ಈ ಜಲಸಂಧಿಗೆ ಕಾವಲು ಕಾಯುತ್ತಿರುವುದಕ್ಕೆ ನಮಗೂ ಲಾಭ ಬೇಕಲ್ಲವೇ? ನಮ್ಮ ಸೈನಿಕರನ್ನು ಅಪಾಯಕ್ಕೆ ತಳ್ಳಿ ಇಷ್ಟೆಲ್ಲಾ ಭದ್ರತೆ ಒದಗಿಸುತ್ತಿರುವುದಕ್ಕೆ ನಮಗೆ ಮರುಪಾವತಿ ಸಿಗಬೇಕು ಎಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿಯ ನಿಯಂತ್ರಣದ ವಿಷಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ದೀರ್ಘಕಾಲದಿಂದ ಸಂಘರ್ಷ ನಡೆಯುತ್ತಿದೆ. ಈ ಜಲಸಂಧಿಯ ಮೇಲೆ ತನಗೆ ಸಂಪೂರ್ಣ ನಿಯಂತ್ರಣವಿದೆ ಎಂದು ಇರಾನ್ ಹೇಳಿಕೊಳ್ಳುತ್ತಿದೆ. ಆದರೆ, ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಇದು ಮುಕ್ತ ಜಲಮಾರ್ಗವಾಗಿದ್ದು, ಎಲ್ಲಾ ದೇಶಗಳ ಹಡಗುಗಳು ಇಲ್ಲಿ ಮುಕ್ತವಾಗಿ ಸಂಚರಿಸಬಹುದು ಎಂದು ಅಮೆರಿಕ ವಾದಿಸುತ್ತಿದೆ.

ಇರಾನ್ ಎಚ್ಚರಿಕೆ:

ಟ್ರಂಪ್ ಅವರ ಈ ಘೋಷಣೆಗೆ ಇರಾನ್‌ನ ‘ಖಾತಮ್ ಅಲ್-ಅನ್ಬಿಯಾ’ ಮಿಲಿಟರಿ ಕಮಾಂಡ್‌ನ ವಕ್ತಾರರು ವಿಡಿಯೋ ಸಂದೇಶದ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಯಾವುದೇ ಪರಿಸ್ಥಿತಿಯಲ್ಲೂ ಜಲಸಂಧಿಯ ನಿರ್ವಹಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಲು ನಾವು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ. ಈ ಜಲಮಾರ್ಗದ ವಿಷಯದಲ್ಲಿ ಅಮೆರಿಕದೊಂದಿಗೆ ಸಹಕರಿಸುವ ಯಾವುದೇ ಗಲ್ಫ್ ದೇಶಗಳ ಕ್ರಮವನ್ನು “ಯುದ್ಧದ ಘೋಷಣೆ” ಎಂದೇ ಪರಿಗಣಿಸಲಾಗುವುದು ಎಂದು ಅವರು ಗಲ್ಫ್ ರಾಷ್ಟ್ರಗಳಿಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಇರಾನ್‌ನಿಂದ ಹಾರ್ಮುಜ್ ಜಲಸಂಧಿ ಬಂದ್, ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕದಿಂದ ಭೀಕರ ಪ್ರತೀಕಾರ

ಸಂಘರ್ಷಕ್ಕೆ ಕಾರಣವೇನು?:

ಇತ್ತೀಚೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದ ಹಡಗೊಂದರ ಮೇಲೆ ಇರಾನ್ ದಾಳಿ ನಡೆಸಿತ್ತು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅಮೆರಿಕ, ಇರಾನ್‌ನ ಮಿಲಿಟರಿ ನೆಲೆಗಳು ಮತ್ತು ಪ್ರಮುಖವಾಗಿ ಅದರ ಡ್ರೋನ್ ಉತ್ಪಾದನಾ ಕೇಂದ್ರಗಳ ಮೇಲೆ ಭಾರಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಸಹ ಯುಎಇ (UAE) ಮತ್ತು ಕತಾರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ಸಂಘರ್ಷದ ಕಾರಣದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಏಕಾಏಕಿ ಶೇ. 5ರಷ್ಟು ಏರಿಕೆಯಾಗಿವೆ.

ಕಳೆದ ತಿಂಗಳಷ್ಟೇ ಉಭಯ ದೇಶಗಳು ಡಿಜಿಟಲ್ ರೂಪದಲ್ಲಿ ತಾತ್ಕಾಲಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದವು ಮತ್ತು ಮಾತುಕತೆಗೆ ಒಪ್ಪಿಕೊಂಡಿದ್ದವು. ಆದರೆ, ಕಳೆದ ವಾರ ಆ ಕದನ ವಿರಾಮ ಒಪ್ಪಂದವು ಮುಕ್ತಾಯಗೊಂಡಿದೆ ಎಂದು ಟ್ರಂಪ್ ಘೋಷಿಸಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ