AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ; US ಕೊವಿಡ್ ನಿಯಂತ್ರಣ ಕಾರ್ಯಪಡೆಗೆ ನಿಯೋಜನೆ!

ಬರಾಕ್ ಒಬಾಮಾ ಅಮೇರಿಕದ ಅಧ್ಯಕ್ಷರಾಗಿದ್ದಾಗ ಸರ್ಜನ್ ಜನರಲ್ ಆಗಿ ಹೆಸರು ಮಾಡಿದ್ದ ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹೊಸದಾಗಿ ಅಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಜೋ ಬೈಡನ್ ಅವರು ರಚಿಸಿರುವ ಕೊರೊನಾ ಟಾಸ್ಕ್​ ಫೋರ್ಸ್​ನಲ್ಲಿ ವಿವೇಕ್ ಮೂರ್ತಿ ಇದ್ದಾರೆ. ಈ ವಿಚಾರ ಅಧಿಕೃತವಾಗಿ ಹೊರಬಿದ್ದಿದೆ. ಅಮೆರಿಕ ಚುನಾವಣೆಯಲ್ಲಿ ಜೋ ಬೈಡೆನ್ ಗೆಲುವು ಖಚಿತವಾಗುತ್ತಿದ್ದಂತೆ ಹಲವು ಸಮಿತಿ, ಸಭೆ, ಶಿಫಾರಸ್ಸುಗಳ ಕೆಲಸಕಾರ್ಯದಲ್ಲಿ ಅವರು ತೊಡಗಿದ್ದಾರೆ. ಅದರಂತೆ ಕೊವಿಡ್ ನಿಯಂತ್ರಣ ಕಾರ್ಯಪಡೆ ರಚನೆಯಾಗಿದ್ದು, ಪ್ರಮುಖ ವಿಜ್ಞಾನಿಗಳು ಮತ್ತು ವೈದ್ಯರು ತಂಡದಲ್ಲಿ ಸದಸ್ಯರಾಗಿದ್ದಾರೆ. […]

ಡಾ. ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ; US ಕೊವಿಡ್ ನಿಯಂತ್ರಣ ಕಾರ್ಯಪಡೆಗೆ ನಿಯೋಜನೆ!
ವೈದ್ಯ ವಿವೇಕ್​ ಮೂರ್ತಿ
ಸಾಧು ಶ್ರೀನಾಥ್​
| Updated By: ಪೃಥ್ವಿಶಂಕರ|

Updated on: Nov 10, 2020 | 2:20 PM

Share

ಬರಾಕ್ ಒಬಾಮಾ ಅಮೇರಿಕದ ಅಧ್ಯಕ್ಷರಾಗಿದ್ದಾಗ ಸರ್ಜನ್ ಜನರಲ್ ಆಗಿ ಹೆಸರು ಮಾಡಿದ್ದ ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹೊಸದಾಗಿ ಅಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಜೋ ಬೈಡನ್ ಅವರು ರಚಿಸಿರುವ ಕೊರೊನಾ ಟಾಸ್ಕ್​ ಫೋರ್ಸ್​ನಲ್ಲಿ ವಿವೇಕ್ ಮೂರ್ತಿ ಇದ್ದಾರೆ. ಈ ವಿಚಾರ ಅಧಿಕೃತವಾಗಿ ಹೊರಬಿದ್ದಿದೆ.

ಅಮೆರಿಕ ಚುನಾವಣೆಯಲ್ಲಿ ಜೋ ಬೈಡೆನ್ ಗೆಲುವು ಖಚಿತವಾಗುತ್ತಿದ್ದಂತೆ ಹಲವು ಸಮಿತಿ, ಸಭೆ, ಶಿಫಾರಸ್ಸುಗಳ ಕೆಲಸಕಾರ್ಯದಲ್ಲಿ ಅವರು ತೊಡಗಿದ್ದಾರೆ. ಅದರಂತೆ ಕೊವಿಡ್ ನಿಯಂತ್ರಣ ಕಾರ್ಯಪಡೆ ರಚನೆಯಾಗಿದ್ದು, ಪ್ರಮುಖ ವಿಜ್ಞಾನಿಗಳು ಮತ್ತು ವೈದ್ಯರು ತಂಡದಲ್ಲಿ ಸದಸ್ಯರಾಗಿದ್ದಾರೆ. ಕಾರ್ಯಪಡೆಯ ಮುಖ್ಯಸ್ಥರಾಗಿ ಡಾ. ಕೆಸ್ಲರ್, ಡಾ. ಸ್ಮಿತ್ ಜೊತೆಗೆ ಮಂಡ್ಯ ಮೂಲದ ವೈದ್ಯ ಡಾ. ವಿವೇಕ್ ಮೂರ್ತಿ ನಿಯೋಜನೆಗೊಂಡಿದ್ದು, ಕರುನಾಡಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ಹುಟ್ಟೂರಿನ ಜೊತೆಗೆ ಬಿಟ್ಟುಬಿಡದ ನಂಟು! ಸದ್ಯ ಅಮೆರಿಕದಲ್ಲಿ ನೆಲೆಸಿರುವ 43 ವರ್ಷದ ಡಾ. ವಿವೇಕ್ ಮೂರ್ತಿ, ಡಾ. ಎಚ್.ಎನ್. ಲಕ್ಷ್ಮಿನರಸಿಂಹಮೂರ್ತಿ ಮತ್ತು ಮೈತ್ರೇಯಿ ದಂಪತಿಗಳ ಪುತ್ರ. ಡಾ. ಲಕ್ಷ್ಮಿನರಸಿಂಹಮೂರ್ತಿ ಅವರು ಕೂಡ ವೈದ್ಯರಾಗಿದ್ದು, ಲಂಡನ್​ನಲ್ಲಿ ಇದ್ದರು. ಬಳಿಕ ಅವರ ಕುಟುಂಬವು ಅಮೆರಿಕದಲ್ಲಿ ನೆಲೆಸಿತು.

ವಿದೇಶದಲ್ಲಿ ವೃತ್ತಿಯಲ್ಲಿದ್ದರೂ ತವರಿನ ಕಡೆಗೆ ಅಪಾರವಾದ ಸೆಳೆತ ಹೊಂದಿರುವ ಡಾ. ವಿವೇಕ್, ತಮ್ಮ ಹುಟ್ಟೂರಿಗೆ ವಿವಿಧ ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಪ್ರತಿವರ್ಷ ಮಂಡ್ಯದ ಹಲ್ಲೇಗೆರೆಗೆ ಭೇಟಿ ನೀಡುವ ಅಭ್ಯಾಸವನ್ನು ಇಟ್ಟುಕೊಂಡಿರುವ ಅವರು, ಸುಮಾರು ಹತ್ತು ವರ್ಷಗಳಿಂದ ವೈದ್ಯಕೀಯ ಕ್ಯಾಂಪ್​ಗಳನ್ನು ನಡೆಸುತ್ತಿದ್ದಾರೆ. ಸರ್ಕಾರಿ ಶಾಲಾ ಕಾಲೇಜುಗಳಿಗೆ ಸಹಾಯ ಮಾಡುತ್ತಿದ್ದಾರೆ. ಹಲ್ಲೇಗೆರೆಯಲ್ಲಿರುವ ತಮ್ಮ ಮೂಲ ಆಸ್ತಿಯನ್ನು ಬಳಸಿ, ಸರ್ವಧರ್ಮೀಯರೂ ಪ್ರಾರ್ಥಿಸುವಂಥ ‘ಭೂಮಂಡಲ ಆರಾಧನಾ ಕೇಂದ್ರ’ ಸ್ಥಾಪಿಸುವ ಯೋಜನೆಯಲ್ಲಿದ್ದಾರೆ.

ವಿವೇಕ್ ಮೂರ್ತಿ ಅಮೆರಿಕದಲ್ಲಿ,’ಡಾಕ್ಟರ್ ಫಾರ್ ಅಮೆರಿಕ’ ಸಂಸ್ಥೆಯ ಸಹ ಸಂಸ್ಥಾಪಕರು ಮತ್ತು ಡೆಮಾಕ್ರಟಿಕ್ ಪಕ್ಷದ ವೈದ್ಯಕೀಯ ವಿಭಾಗದ ಮುಖ್ಯಸ್ಥರೂ ಆಗಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಪರ ಪ್ರಚಾರ ನಡೆಸಿರುವ ಅವರು, ಬರಾಕ್ ಒಬಾಮ ಸರ್ಕಾರದಲ್ಲಿ ಯುಎಸ್ ಸರ್ಜನ್ ಜನರಲ್ ಆಗಿ ಕೆಲಸ ನಿರ್ವಹಿಸಿದ್ದರು. ಒಬಾಮಾ ಕೇರ್ ಕಾರ್ಯಕ್ರಮ ರೂಪಿಸುವಲ್ಲೂ ಮುಖ್ಯಪಾತ್ರ ವಹಿಸಿದ್ದರು. ಅವರು ಕೋವಿಡ್ ಸಮಯದಲ್ಲಿ ಬರೆದ ‘ಟುಗೆದರ್’ ಎಂಬ ಪುಸ್ತಕ 25 ರಾಷ್ಟ್ರಗಳಲ್ಲಿ ಬಿಡುಗಡೆ ಕಂಡಿತ್ತು. ಇದೀಗ ಅಮೆರಿಕದ ಕೊವಿಡ್ ನಿಯಂತ್ರಣ ಕಾರ್ಯಪಡೆಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿರುವ ಡಾ. ವಿವೇಕ್ ಹೊಸ ಸಾಧನೆಯ ಹಾದಿಯಲ್ಲಿ ಸಾಗಲಿದ್ದಾರೆ.

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ