AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ

ಸಿರಿಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ
ಸಿರಿಯಾ
ನಯನಾ ರಾಜೀವ್
|

Updated on: Oct 06, 2023 | 7:40 AM

Share

ಸಿರಿಯಾ(Syria)ದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿ(Drone Attack)ಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಯುದ್ಧದ ಕರಿನೆರಳನ್ನು ಎದುರಿಸುತ್ತಿರುವ ಸಿರಿಯಾದಲ್ಲಿ ಗುರುವಾರ ಮತ್ತೊಮ್ಮೆ ಭಾರೀ ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಡಜನ್‌ಗಟ್ಟಲೆ ಮಂದಿ ಗಾಯಗೊಂಡಿದ್ದಾರೆ.

ಮಿಲಿಟರಿ ಸಮಾರಂಭದಿಂದ ಸಿರಿಯಾದ ರಕ್ಷಣಾ ಸಚಿವರು ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ಡ್ರೋನ್‌ಗಳಿಂದ ಬಾಂಬ್‌ಗಳ ಮಳೆ ಸುರಿಯಲಾರಂಭಿಸಿತು ಎಂದು ಹೇಳಲಾಗುತ್ತಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸಿರಿಯನ್ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ. ಕಳೆದ ಹದಿಮೂರು ವರ್ಷಗಳಿಂದ ಸಿರಿಯಾದಲ್ಲಿ ಸಂಘರ್ಷ ನಡೆಯುತ್ತಿದೆ.

ಮತ್ತಷ್ಟು ಓದಿ: ರಷ್ಯಾದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ, 4 ವಿಮಾನಗಳಿಗೆ ಹಾನಿ

ಹಲವರ ಸ್ಥಿತಿ ಗಂಭೀರವಾಗಿದ್ದು, ಸಿರಿಯಾದ ಮೂರನೇ ಅತಿ ದೊಡ್ಡ ನಗರವಾದ ಹೋಮ್ಸ್‌ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್-ಅಟಾಸ್ಸಿ ಹೇಳಿದ್ದಾರೆ.

ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಶುಕ್ರವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ ಎಂದು ಸಿರಿಯನ್ ರಾಜ್ಯ ದೂರದರ್ಶನ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ