AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ

ಸಿರಿಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ
ಸಿರಿಯಾ
ನಯನಾ ರಾಜೀವ್
|

Updated on: Oct 06, 2023 | 7:40 AM

Share

ಸಿರಿಯಾ(Syria)ದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿ(Drone Attack)ಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಯುದ್ಧದ ಕರಿನೆರಳನ್ನು ಎದುರಿಸುತ್ತಿರುವ ಸಿರಿಯಾದಲ್ಲಿ ಗುರುವಾರ ಮತ್ತೊಮ್ಮೆ ಭಾರೀ ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಡಜನ್‌ಗಟ್ಟಲೆ ಮಂದಿ ಗಾಯಗೊಂಡಿದ್ದಾರೆ.

ಮಿಲಿಟರಿ ಸಮಾರಂಭದಿಂದ ಸಿರಿಯಾದ ರಕ್ಷಣಾ ಸಚಿವರು ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ಡ್ರೋನ್‌ಗಳಿಂದ ಬಾಂಬ್‌ಗಳ ಮಳೆ ಸುರಿಯಲಾರಂಭಿಸಿತು ಎಂದು ಹೇಳಲಾಗುತ್ತಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸಿರಿಯನ್ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ. ಕಳೆದ ಹದಿಮೂರು ವರ್ಷಗಳಿಂದ ಸಿರಿಯಾದಲ್ಲಿ ಸಂಘರ್ಷ ನಡೆಯುತ್ತಿದೆ.

ಮತ್ತಷ್ಟು ಓದಿ: ರಷ್ಯಾದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ, 4 ವಿಮಾನಗಳಿಗೆ ಹಾನಿ

ಹಲವರ ಸ್ಥಿತಿ ಗಂಭೀರವಾಗಿದ್ದು, ಸಿರಿಯಾದ ಮೂರನೇ ಅತಿ ದೊಡ್ಡ ನಗರವಾದ ಹೋಮ್ಸ್‌ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್-ಅಟಾಸ್ಸಿ ಹೇಳಿದ್ದಾರೆ.

ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಶುಕ್ರವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ ಎಂದು ಸಿರಿಯನ್ ರಾಜ್ಯ ದೂರದರ್ಶನ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?