AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ

ಸಿರಿಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ
ಸಿರಿಯಾ
ನಯನಾ ರಾಜೀವ್
|

Updated on: Oct 06, 2023 | 7:40 AM

Share

ಸಿರಿಯಾ(Syria)ದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿ(Drone Attack)ಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಯುದ್ಧದ ಕರಿನೆರಳನ್ನು ಎದುರಿಸುತ್ತಿರುವ ಸಿರಿಯಾದಲ್ಲಿ ಗುರುವಾರ ಮತ್ತೊಮ್ಮೆ ಭಾರೀ ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಡಜನ್‌ಗಟ್ಟಲೆ ಮಂದಿ ಗಾಯಗೊಂಡಿದ್ದಾರೆ.

ಮಿಲಿಟರಿ ಸಮಾರಂಭದಿಂದ ಸಿರಿಯಾದ ರಕ್ಷಣಾ ಸಚಿವರು ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ಡ್ರೋನ್‌ಗಳಿಂದ ಬಾಂಬ್‌ಗಳ ಮಳೆ ಸುರಿಯಲಾರಂಭಿಸಿತು ಎಂದು ಹೇಳಲಾಗುತ್ತಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸಿರಿಯನ್ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ. ಕಳೆದ ಹದಿಮೂರು ವರ್ಷಗಳಿಂದ ಸಿರಿಯಾದಲ್ಲಿ ಸಂಘರ್ಷ ನಡೆಯುತ್ತಿದೆ.

ಮತ್ತಷ್ಟು ಓದಿ: ರಷ್ಯಾದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ, 4 ವಿಮಾನಗಳಿಗೆ ಹಾನಿ

ಹಲವರ ಸ್ಥಿತಿ ಗಂಭೀರವಾಗಿದ್ದು, ಸಿರಿಯಾದ ಮೂರನೇ ಅತಿ ದೊಡ್ಡ ನಗರವಾದ ಹೋಮ್ಸ್‌ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್-ಅಟಾಸ್ಸಿ ಹೇಳಿದ್ದಾರೆ.

ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಶುಕ್ರವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ ಎಂದು ಸಿರಿಯನ್ ರಾಜ್ಯ ದೂರದರ್ಶನ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ