AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !
ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿ
Lakshmi Hegde
|

Updated on:Mar 23, 2021 | 7:15 PM

Share

ಐಸ್​ಲ್ಯಾಂಡ್​​ನ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಜೀವಂತ ಜ್ವಾಲಾಮುಖಿ ನೋಡಲು ಭಯಾನಕವಾಗಿದ್ದರೂ, ತುಂಬ ಸುಂದರವಾಗಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಐಸ್​ಲ್ಯಾಂಡ್​​ನ ರಾಜಧಾನಿ ರೆಯ್ಕ್​ಜಾವಿಕ್​​ನಿಂದ 40 ಕಿಮೀ ದೂರದಲ್ಲಿರುವ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಮಾರ್ಚ್​ 19ರಂದು ಸ್ಫೋಟಗೊಂಡಿದೆ. ಕಳೆದ 800 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಎದ್ದಿರುವ ಜ್ವಲಾಮುಖಿ ಇದಾಗಿದೆ. ​

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ. ಆದರೆ ಡ್ರೋನ್​​ ಕ್ಯಾಮರಾದಲ್ಲಿ ಸೆರೆಯಾದ ಅದರ ಫೋಟೋ ಮತ್ತು ವಿಡಿಯೋಗಳು ತುಂಬ ಸುಂದರವಾಗಿಯೂ, ಭಯಹುಟ್ಟಿಸುವಂತೆಯೂ ಇದೆ. ಜಾರ್ನ್ ಸ್ಟೈನ್ಬೆಕ್​​ರವರು ಸೆರೆಹಿಡಿದ ವೈಮಾನಿಕ ವಿಡಿಯೋ, ಫೋಟೋಗಳನ್ನು ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Published On - 7:04 pm, Tue, 23 March 21

Follow Us
Lakshmi Hegde
Lakshmi Hegde
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ