AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dubai Fire: ದುಬೈನ ಅಪಾರ್ಟ್​ಮೆಂಟ್​ನಲ್ಲಿ ಕಾಣಿಸಿಕೊಂಡ ಬೆಂಕಿ, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನ, 9 ಮಂದಿಗೆ ಗಾಯ

ದುಬೈನ್​ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನವಾಗಿದ್ದು, 9 ಮಂದಿ ಗಾಯಗೊಂಡಿದ್ದಾರೆ.

Dubai Fire: ದುಬೈನ ಅಪಾರ್ಟ್​ಮೆಂಟ್​ನಲ್ಲಿ ಕಾಣಿಸಿಕೊಂಡ ಬೆಂಕಿ, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನ, 9 ಮಂದಿಗೆ ಗಾಯ
ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ
ನಯನಾ ರಾಜೀವ್
|

Updated on: Apr 16, 2023 | 1:14 PM

Share

ದುಬೈ(Dubai)ನ್​ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ(Fire) ಕಾಣಿಸಿಕೊಂಡಿದ್ದು, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನವಾಗಿದ್ದು, 9 ಮಂದಿ ಗಾಯಗೊಂಡಿದ್ದಾರೆ. ದುಬೈನ ವಸತಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ಅಲ್ ರಾಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ದುಬೈ ಸಿವಿಲ್ ಡಿಫೆನ್ಸ್ ವಕ್ತಾರರು ತಿಳಿಸಿದ್ದಾರೆ. ದುಬೈ ಸಿವಿಲ್ ಡಿಫೆನ್ಸ್ ಆಪರೇಷನ್ ರೂಮ್‌ನಲ್ಲಿ ಮಧ್ಯಾಹ್ನ 12.35 ಕ್ಕೆ ಬೆಂಕಿ ಕಾಣಿಸಿಕೊಂಡಿತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಐದಾರು ನಿಮಿಷದಲ್ಲಿ ಸ್ಥಳಕ್ಕಾಗಮಿಸಿ ಜನರನ್ನು ತೆರವುಗೊಳಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು.

ಪೋರ್ಟ್ ಸೈದ್ ಮತ್ತು ಹಮೀರಿಯಾ ಅಗ್ನಿಶಾಮಕ ಠಾಣೆಗಳ ತಂಡಗಳು ಕಾರ್ಯಾಚರಣೆಗೆ ಬ್ಯಾಕಪ್ ಒದಗಿಸಿದವು. ಮಧ್ಯಾಹ್ನ 2.42ಕ್ಕೆ ಬೆಂಕಿ ಹತೋಟಿಗೆ ಬಂದಿದ್ದು, ಬಳಿಕ ಕೂಲಿಂಗ್ ಕಾರ್ಯ ಆರಂಭಿಸಲಾಯಿತು. ಮೃತರ ಕುಟುಂಬಗಳಿಗೆ ತಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ ವಕ್ತಾರರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಜೊತೆಗೆ ಗಾಯಾಳುಗಳಿಗೆ ತಕ್ಷಣದ ಪ್ರಥಮ ಚಿಕಿತ್ಸೆಯನ್ನೂ ನೀಡಿದರು.

ಮತ್ತಷ್ಟು ಓದಿ: ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ

ಕಟ್ಟಡವು ಸುರಕ್ಷತಾ ಅವಶ್ಯಕತೆಗಳನ್ನು ಅನುಸರಿಸದಿರುವುದು ಬೆಂಕಿಗೆ ಕಾರಣವಾಯಿತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಈ ಸಂಬಂಧ ವಿಸ್ತೃತ ತನಿಖಾ ವರದಿಯನ್ನು ಶೀಘ್ರ ನೀಡಲಾಗುವುದು ಎಂದು ತಿಳಿಸಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವರು ಕಟ್ಟಡದಿಂದ ಜ್ವಾಲೆಗಳನ್ನು ನೋಡಿದರು. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊದಲ್ಲಿ, ಅಪಾರ್ಟ್ಮೆಂಟ್ನ ಕಿಟಕಿಯಿಂದ ಕಪ್ಪು ಹೊಗೆ ಹೊರಬರುತ್ತಿರುವುದು ಕಾಣಿಸಿತ್ತು. ಇದರೊಂದಿಗೆ ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದವು.

ಅಲ್ಲೇ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಏನಾಯಿತು ಎಂದು ಆ ಕ್ಷಣದಲ್ಲಿ ಯಾರಿಗೂ ತಿಳಿಯಲಿಲ್ಲ, ಆದರೆ ಕಿಟಕಿಯಿಂದ ಹೊಗೆ ಬರುವುದನ್ನು ನಾವು ನೋಡಿದ್ದೇವೆ. ಕೆಲವರು ಸಹಾಯ ಮಾಡಲು ಕಟ್ಟಡದೊಳಗೆ ಹೋಗಲು ಪ್ರಯತ್ನಿಸಿದರು ಆದರೆ ಹೊಗೆಯಿಂದಾಗಿ ಏನೂ ಮಾಡಲು ಸಾಧ್ಯವಾಗಲಿಲ್ಲ.

ನಾವು ಕಟ್ಟಡದೊಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ಪೊಲೀಸರು ಬರುವವರೆಗೆ ಕಾಯುತ್ತಿದ್ದೆವು ಎಂದು ಉದ್ಯೋಗಿ ಹೇಳಿದರು. ಕೆಲವೇ ನಿಮಿಷಗಳಲ್ಲಿ ಅಗ್ನಿಶಾಮಕ ದಳ ಬಂದು ಕ್ರೇನ್‌ಗಳ ಸಹಾಯದಿಂದ ಜನರಿಗೆ ಸಹಾಯ ಮಾಡಲು ಪ್ರಾರಂಭಿಸಿತು ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ