AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೇಕೆಯಿಂದ ಕೋಟ್ಯಂತರ ಉದ್ಯೋಗಕ್ಕೆ ಕತ್ತರಿ, ತಜ್ಞರು ಏನ್ ಹೇಳಿದ್ದಾರೆ ಕೇಳಿ

ಕೊರೊನಾ ವೈರಸ್‌ನ ಹಾವಳಿಯಿಂದ ಬಚಾವ್‌ ಆದ ಯಾರೂ ಈ ಭೂಮಿಯ ಮೇಲೆ ಇಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಕೊರೊನಾ ಚೀನಾದಲ್ಲಿ ಹುಟ್ಟಿದ್ದೇ ಬಂತು ಪೂರ್ವದಿಂದ ಪಶ್ಚಿಮದ ಅಂತ್ಯದವರೆಗೂ ರಣಕೇಕೆ ಹಾಕುತ್ತಿದೆ. ಇದರ ಪರಿಣಾಮ ಈಗ ವಿಶ್ವದ ಪ್ರವಾಸೋದ್ಯಮವೂ ಕೂಡಾ ಸಾಕಷ್ಟು ನಷ್ಟ ಅನುಭವಿಸಿದೆ. ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್‌ ಪ್ರಕಾರ ಕಳೆದ ಐದು ತಿಂಗಳಲ್ಲಿ ಕೊರೊನಾದಿಂದಾಗಿ ವಿಶ್ವ ಪ್ರವಾಸೋದ್ಯಮಕ್ಕೆ ಸುಮಾರು 320 ಬಿಲಿಯನ್‌ ಡಾಲರ್‌ ನಷ್ಟವಾಗಿದೆ. ಹಾಗೇನೆ ಸುಮಾರು 120 ಮಿಲಿಯನ್‌ಗೂ ಹೆಚ್ಚು ಉದ್ಯೋಗಿಗಳು […]

ಕೊರೊನಾ ಕೇಕೆಯಿಂದ ಕೋಟ್ಯಂತರ ಉದ್ಯೋಗಕ್ಕೆ ಕತ್ತರಿ, ತಜ್ಞರು ಏನ್ ಹೇಳಿದ್ದಾರೆ ಕೇಳಿ
Guru
| Edited By: |

Updated on: Aug 26, 2020 | 11:50 AM

Share

ಕೊರೊನಾ ವೈರಸ್‌ನ ಹಾವಳಿಯಿಂದ ಬಚಾವ್‌ ಆದ ಯಾರೂ ಈ ಭೂಮಿಯ ಮೇಲೆ ಇಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಕೊರೊನಾ ಚೀನಾದಲ್ಲಿ ಹುಟ್ಟಿದ್ದೇ ಬಂತು ಪೂರ್ವದಿಂದ ಪಶ್ಚಿಮದ ಅಂತ್ಯದವರೆಗೂ ರಣಕೇಕೆ ಹಾಕುತ್ತಿದೆ. ಇದರ ಪರಿಣಾಮ ಈಗ ವಿಶ್ವದ ಪ್ರವಾಸೋದ್ಯಮವೂ ಕೂಡಾ ಸಾಕಷ್ಟು ನಷ್ಟ ಅನುಭವಿಸಿದೆ.

ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್‌ ಪ್ರಕಾರ ಕಳೆದ ಐದು ತಿಂಗಳಲ್ಲಿ ಕೊರೊನಾದಿಂದಾಗಿ ವಿಶ್ವ ಪ್ರವಾಸೋದ್ಯಮಕ್ಕೆ ಸುಮಾರು 320 ಬಿಲಿಯನ್‌ ಡಾಲರ್‌ ನಷ್ಟವಾಗಿದೆ. ಹಾಗೇನೆ ಸುಮಾರು 120 ಮಿಲಿಯನ್‌ಗೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ವಿಶ್ವ ಪ್ರವಾಸೋದ್ಯಮ ವಿಶ್ವದ ಮೂರನೇ ಅತ್ಯಂತ ದೊಡ್ಡ ಉದ್ಯಮವಾಗಿದ್ದು, ವಿಶ್ವದ ಒಟ್ಟು ಜಿಡಿಪಿಯಲ್ಲಿ ಇದರ ಪಾಲೇ ಶೇ.7ರಷ್ಟಿದೆ. ವಿಶ್ವದ ಪ್ರತಿ 10 ಜನರಲ್ಲಿ ಒಬ್ಬರು ಪ್ರವಾಸೋದ್ಯಮಕ್ಕೆ ಸಂಬಂಧಿಸಿ ಕೆಲಸ ಮಾಡುತ್ತಾರೆ. ಒಟ್ಟು ಕೋಟ್ಯಂತರ ಜನರು ಪ್ರವಾಸೋದ್ಯಮದ ಮೇಲೆಯೇ ಅವಲಂಬಿತರಾಗಿದ್ದಾರೆ.

ವಿಶ್ವ ಸಂಸ್ಥೆಯ ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥರ ಪ್ರಕಾರ 2020ರಲ್ಲಿ ಪ್ರವಾಸೋದ್ಯಮ ಸುಮಾರು 910 ಬಿಲಿಯನ್‌ ಡಾಲರ್‌ನಿಂದ ಸುಮಾರು 1.2 ಟ್ರಿಲಿಯನ್‌ ಡಾಲರ್‌ನಷ್ಟು ನಷ್ಟ ಅನುಭವಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೇನೆ ಸುಮಾರು 144 ಮಿಲಿಯನ್‌ ಜನರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಇನ್ನು ಆರ್ಥಿಕವಾಗಿ ಹೇಳೋದಾದ್ರೆ ವಿಶ್ವದ ಜಿಡಿಪಿಯಲ್ಲಿ ಸುಮಾರು 1.5% ನಿಂದ 2.8% ರಷ್ಟು ಕುಸಿತವಾಗಲಿದೆ ಎಂದು ಅಂದಾಜಿಸಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ