AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Rain: ಅಬ್ಬರದ ಮಳೆಗೆ ತತ್ತರಿಸುತ್ತಿದೆ ಜಪಾನ್​; ಇಂದು ಮುಂಜಾನೆ ಅಟಾಮಿಯಲ್ಲಿ ಕಂಡ ದೃಶ್ಯ ನೋಡಿ ಹೆದರಿದ ಸ್ಥಳೀಯರು

ಕಾಣೆಯಾದ 19 ಜನರ ಹುಡುಕಾಟ ನಡೆದಿದೆ. ಇನ್ನುಳಿದವರನ್ನು ರಕ್ಷಣೆ ಮಾಡಲಾಗಿದೆ. ಆ 19 ಮಂದಿ ಬದುಕಿದ್ದಾರೋ..ಇಲ್ಲವೋ ಎಂಬ ಬಗ್ಗೆಯೂ ಅನುಮಾನ ಎಂದು ಶಿಜೌಕಾ ಪ್ರಾಂತದ ಅಧಿಕಾರಿ ತಿಳಿಸಿದ್ದಾರೆ.

Japan Rain: ಅಬ್ಬರದ ಮಳೆಗೆ ತತ್ತರಿಸುತ್ತಿದೆ ಜಪಾನ್​; ಇಂದು ಮುಂಜಾನೆ ಅಟಾಮಿಯಲ್ಲಿ ಕಂಡ ದೃಶ್ಯ ನೋಡಿ ಹೆದರಿದ ಸ್ಥಳೀಯರು
ಜಪಾನ್​ನ ಭೀಕರ ಮಳೆಗೆ ಮಣ್ಣುಕುಸಿತ, ಮನೆಗಳೆಲ್ಲ ಧ್ವಂಸ
TV9 Web
| Edited By: |

Updated on:Jul 03, 2021 | 1:28 PM

Share

ಜಪಾನ್​ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ದೊಡ್ಡ ಅವಾಂತರಗಳನ್ನೇ ಸೃಷ್ಟಿಸುತ್ತಿದೆ. ಟೋಕಿಯೋದ ಅಟಾಮಿಯಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಸಾಲುಸಾಲು ಮನೆಗಳು ಧ್ವಂಸಗೊಂಡಿವೆ ಎಂದು ಜಪಾನ್ ಮಾಧ್ಯಮಗಳು ವರದಿ ಮಾಡಿವೆ. ಈ ದುರಂತದ ನಂತರ ಸುಮಾರು 19 ಜನರು ಮಣ್ಣಿನಡಿ ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿಯೂ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಜಪಾನ್​ನ ಶಿಜೌಕಾ ಪ್ರಾಂತ್ಯದಲ್ಲಿರುವ ಅಟಾಮಿ ಪಟ್ಟಣ ಬಿಸಿನೀರಿನ ಬುಗ್ಗೆಗಳಿಗೆ ಹೆಸರುವಾಸಿ. ಅಟಾಮಿ ಎಂದರೆ ಅರ್ಥವೇ ಬಿಸಿ ಸಾಗರ ಎಂದು. ಈ ಪಟ್ಟಣ ಇಜು ಪೆನಿನ್ಸುಲಾದ ಉತ್ತರದ ತುದಿಯಲ್ಲಿರುವ ಸಗಾಮಿ ಕೊಲ್ಲಿಯಲ್ಲಿ ಭಾಗಶಃ ಮುಳುಗಿರುವ ಜ್ವಾಲಾಮುಖಿ ಕುಂಡದ ಕಡಿದಾದ ಇಳಿಜಾರಿನಲ್ಲಿದೆ. ಸ್ಥಳೀಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಹೇಳುವ ಪ್ರಕಾರ ಇಂದು ಮುಂಜಾನೆ ಹೊತ್ತಿಗೆ ಅಟಾಮಿಯಲ್ಲಿ ಮಣ್ಣು ಕುಸಿದಿದೆ. ಇದರಿಂದ ಧ್ವಂಸಗೊಂಡ ಮನೆಗಳ ಭಗ್ನಾವಶೇಷಗಳು, ಮಣ್ಣನ್ನು ಒಳಗೊಂಡ ಕಪ್ಪು ಬಣ್ಣದ ನೀರಿನ ಪ್ರವಾಹ ರಸ್ತೆಯ ಮೇಲೆಲ್ಲ ಭಯಂಕರವಾಗಿ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಸಹಾಯಕತೆಯಿಂದ ಈ ಭೀಕರ ದೃಶ್ಯವನ್ನು ನೋಡಿದ್ದು ಬಿಟ್ಟರೆ ಇನ್ನೇನೂ ಮಾಡಲು ಸಾಧ್ಯವಾಗಲಿಲ್ಲ. ತುಂಬ ಹೆದರಿಕೆಯಾಯಿತು ಎಂದು ಸ್ಥಳೀಯರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಾಣೆಯಾದ 19 ಜನರ ಹುಡುಕಾಟ ನಡೆದಿದೆ. ಇನ್ನುಳಿದವರನ್ನು ರಕ್ಷಣೆ ಮಾಡಲಾಗಿದೆ. ಆ 19 ಮಂದಿ ಬದುಕಿದ್ದಾರೋ..ಇಲ್ಲವೋ ಎಂಬ ಬಗ್ಗೆಯೂ ಅನುಮಾನ ಎಂದು ಶಿಜೌಕಾ ಪ್ರಾಂತದ ಅಧಿಕಾರಿ ತಿಳಿಸಿದ್ದಾರೆ. ಕಳೆದ ವಾರದಿಂದಲೂ ಜಪಾನ್​​ ಮಳೆಗೆ ತತ್ತರಿಸುತ್ತಿದೆ. ದೇಶದ ನದಿಗಳೆಲ್ಲ ತುಂಬಿ ಹರಿಯುತ್ತಿದ್ದು, ಆತಂಕ ಸೃಷ್ಟಿಸಿವೆ. ದಿನ ಒಂದಲ್ಲ ಒಂದು ಕಡೆ ಮಣ್ಣು ಕುಸಿತದ ವರದಿಯಾಗುತ್ತಿದೆ.

ಇದನ್ನೂ ಓದಿ: ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Due to Heavy Rain mudslide swept away a row of houses in Atami town of Japan

Published On - 1:27 pm, Sat, 3 July 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್