AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Rain: ಅಬ್ಬರದ ಮಳೆಗೆ ತತ್ತರಿಸುತ್ತಿದೆ ಜಪಾನ್​; ಇಂದು ಮುಂಜಾನೆ ಅಟಾಮಿಯಲ್ಲಿ ಕಂಡ ದೃಶ್ಯ ನೋಡಿ ಹೆದರಿದ ಸ್ಥಳೀಯರು

ಕಾಣೆಯಾದ 19 ಜನರ ಹುಡುಕಾಟ ನಡೆದಿದೆ. ಇನ್ನುಳಿದವರನ್ನು ರಕ್ಷಣೆ ಮಾಡಲಾಗಿದೆ. ಆ 19 ಮಂದಿ ಬದುಕಿದ್ದಾರೋ..ಇಲ್ಲವೋ ಎಂಬ ಬಗ್ಗೆಯೂ ಅನುಮಾನ ಎಂದು ಶಿಜೌಕಾ ಪ್ರಾಂತದ ಅಧಿಕಾರಿ ತಿಳಿಸಿದ್ದಾರೆ.

Japan Rain: ಅಬ್ಬರದ ಮಳೆಗೆ ತತ್ತರಿಸುತ್ತಿದೆ ಜಪಾನ್​; ಇಂದು ಮುಂಜಾನೆ ಅಟಾಮಿಯಲ್ಲಿ ಕಂಡ ದೃಶ್ಯ ನೋಡಿ ಹೆದರಿದ ಸ್ಥಳೀಯರು
ಜಪಾನ್​ನ ಭೀಕರ ಮಳೆಗೆ ಮಣ್ಣುಕುಸಿತ, ಮನೆಗಳೆಲ್ಲ ಧ್ವಂಸ
TV9 Web
| Edited By: |

Updated on:Jul 03, 2021 | 1:28 PM

Share

ಜಪಾನ್​ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ದೊಡ್ಡ ಅವಾಂತರಗಳನ್ನೇ ಸೃಷ್ಟಿಸುತ್ತಿದೆ. ಟೋಕಿಯೋದ ಅಟಾಮಿಯಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಸಾಲುಸಾಲು ಮನೆಗಳು ಧ್ವಂಸಗೊಂಡಿವೆ ಎಂದು ಜಪಾನ್ ಮಾಧ್ಯಮಗಳು ವರದಿ ಮಾಡಿವೆ. ಈ ದುರಂತದ ನಂತರ ಸುಮಾರು 19 ಜನರು ಮಣ್ಣಿನಡಿ ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿಯೂ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಜಪಾನ್​ನ ಶಿಜೌಕಾ ಪ್ರಾಂತ್ಯದಲ್ಲಿರುವ ಅಟಾಮಿ ಪಟ್ಟಣ ಬಿಸಿನೀರಿನ ಬುಗ್ಗೆಗಳಿಗೆ ಹೆಸರುವಾಸಿ. ಅಟಾಮಿ ಎಂದರೆ ಅರ್ಥವೇ ಬಿಸಿ ಸಾಗರ ಎಂದು. ಈ ಪಟ್ಟಣ ಇಜು ಪೆನಿನ್ಸುಲಾದ ಉತ್ತರದ ತುದಿಯಲ್ಲಿರುವ ಸಗಾಮಿ ಕೊಲ್ಲಿಯಲ್ಲಿ ಭಾಗಶಃ ಮುಳುಗಿರುವ ಜ್ವಾಲಾಮುಖಿ ಕುಂಡದ ಕಡಿದಾದ ಇಳಿಜಾರಿನಲ್ಲಿದೆ. ಸ್ಥಳೀಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಹೇಳುವ ಪ್ರಕಾರ ಇಂದು ಮುಂಜಾನೆ ಹೊತ್ತಿಗೆ ಅಟಾಮಿಯಲ್ಲಿ ಮಣ್ಣು ಕುಸಿದಿದೆ. ಇದರಿಂದ ಧ್ವಂಸಗೊಂಡ ಮನೆಗಳ ಭಗ್ನಾವಶೇಷಗಳು, ಮಣ್ಣನ್ನು ಒಳಗೊಂಡ ಕಪ್ಪು ಬಣ್ಣದ ನೀರಿನ ಪ್ರವಾಹ ರಸ್ತೆಯ ಮೇಲೆಲ್ಲ ಭಯಂಕರವಾಗಿ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಸಹಾಯಕತೆಯಿಂದ ಈ ಭೀಕರ ದೃಶ್ಯವನ್ನು ನೋಡಿದ್ದು ಬಿಟ್ಟರೆ ಇನ್ನೇನೂ ಮಾಡಲು ಸಾಧ್ಯವಾಗಲಿಲ್ಲ. ತುಂಬ ಹೆದರಿಕೆಯಾಯಿತು ಎಂದು ಸ್ಥಳೀಯರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಾಣೆಯಾದ 19 ಜನರ ಹುಡುಕಾಟ ನಡೆದಿದೆ. ಇನ್ನುಳಿದವರನ್ನು ರಕ್ಷಣೆ ಮಾಡಲಾಗಿದೆ. ಆ 19 ಮಂದಿ ಬದುಕಿದ್ದಾರೋ..ಇಲ್ಲವೋ ಎಂಬ ಬಗ್ಗೆಯೂ ಅನುಮಾನ ಎಂದು ಶಿಜೌಕಾ ಪ್ರಾಂತದ ಅಧಿಕಾರಿ ತಿಳಿಸಿದ್ದಾರೆ. ಕಳೆದ ವಾರದಿಂದಲೂ ಜಪಾನ್​​ ಮಳೆಗೆ ತತ್ತರಿಸುತ್ತಿದೆ. ದೇಶದ ನದಿಗಳೆಲ್ಲ ತುಂಬಿ ಹರಿಯುತ್ತಿದ್ದು, ಆತಂಕ ಸೃಷ್ಟಿಸಿವೆ. ದಿನ ಒಂದಲ್ಲ ಒಂದು ಕಡೆ ಮಣ್ಣು ಕುಸಿತದ ವರದಿಯಾಗುತ್ತಿದೆ.

ಇದನ್ನೂ ಓದಿ: ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Due to Heavy Rain mudslide swept away a row of houses in Atami town of Japan

Published On - 1:27 pm, Sat, 3 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ