AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯದ ಪರಮಾವಧಿ: ಊಟದ ತಟ್ಟೆ ಗಾತ್ರದ ಉಪಕರಣ ಹೆರಿಗೆ ವೇಳೆ ಮಹಿಳೆಯ ಹೊಟ್ಟೆ ಸೇರಿತ್ತು! 18 ತಿಂಗಳ ಬಳಿಕ ಹೊರ ತೆಗೆದರು

ಕೂಡಲೇ ಮತ್ತೆ ಶಸ್ತ್ರಚಿಕಿತ್ಸೆ ಕಾರ್ಯಾಚರಣೆ ನಡೆಸಿ ಮಹಿಳೆಯ ಹೊಟ್ಟೆಯಿಂದ ಸಾಧನವನ್ನು ಹೊರತೆಗೆಯಲಾಯಿತು. ಸಿಸೇರಿಯನ್ ಸಮಯದಲ್ಲಿ ವೈದ್ಯರು ಬಳಸುವ ಸಾಧನಗಳಲ್ಲಿ ಒಂದಾದ ಅಲೆಕ್ಸಿಸ್ ರಿಟ್ರಾಕ್ಟರ್ ಆ ಮಹಿಳೆಯ ಹೊಟ್ಟೆಯಲ್ಲಿ ಭದ್ರವಾಗಿ ಕುಳಿತಿತ್ತು. ಆದು ನೋಡಲು ಊಟದ ತಟ್ಟೆಯ ಗಾತ್ರವಿರುತ್ತದೆ. ಈ ಘಟನೆ ನಡೆದಿದ್ದು 2021ರಲ್ಲಿ.

ವೈದ್ಯರ ನಿರ್ಲಕ್ಷ್ಯದ ಪರಮಾವಧಿ: ಊಟದ ತಟ್ಟೆ ಗಾತ್ರದ ಉಪಕರಣ ಹೆರಿಗೆ ವೇಳೆ ಮಹಿಳೆಯ ಹೊಟ್ಟೆ ಸೇರಿತ್ತು! 18 ತಿಂಗಳ ಬಳಿಕ ಹೊರ ತೆಗೆದರು
During cesarean surgery dinner plate size Medical tools kept inside woman abdomen
ಸಾಧು ಶ್ರೀನಾಥ್​
|

Updated on:Sep 06, 2023 | 6:46 PM

Share

ನ್ಯೂಜಿಲೆಂಡ್, ಸೆಪ್ಟೆಂಬರ್ 6: ಆಪರೇಷನ್ ಮಾಡುವಾಗ ವೈದ್ಯರು ಹೊಟ್ಟೆಯಲ್ಲಿ (Stomach) ಹತ್ತಿ, ಕತ್ತರಿ ಮರೆತು ಹೋಗುತ್ತಾರೆ ಎಂದು ನಾವು ಮರೆಯಲಾರದಷ್ಟು ಬಾರಿ ಕೇಳಿದ್ದೇವೆ. ಇಲ್ಲೊಂದು ತಾಜಾ ಪ್ರಕರಣದಲ್ಲಿ ಮರೆವಿನಲ್ಲಿ ಈ ವೈದ್ಯ ಮಹಾಶಯರು ಘಜಿನಿಯನ್ನು ಮೀರಿಸುತ್ತಾರೆ. ಆಪರೇಷನ್ ಬಳಿಕ ಮಹಿಳೆಯ ಹೊಟ್ಟೆಯಲ್ಲಿದ್ದ ಪ್ಲೇಟ್​​ (dinner plate size) ಅನ್ನು ಮರೆತಿಟ್ಟಿದ್ದಾರೆ. ಏನು ಯಾಕೆ ಎಂದು ಯೋಚಿಸುತಿದ್ದೀರಾ? ಹೌದು.. ಹೆರಿಗೆಗೆಂದು ತೆರಳಿದ್ದ ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡಿ (cesarean surgery) ಮಗುವನ್ನು ಹೊರತೆಗೆದಿದ್ದಾರೆ. ಆದರೆ ಶಸ್ತ್ರಚಿಕಿತ್ಸೆ ಮುಗಿಯುವ ಹೊತ್ತಿಗೆ ಹೊಟ್ಟೆಯಲ್ಲಿ ತಟ್ಟೆ ಇಟ್ಟು ಹೊಲಿಗೆ ಹಾಕಿಬಿಟ್ಟಿದ್ದಾರೆ . ಈ ವಿಚಿತ್ರ ಘಟನೆ ನ್ಯೂಜಿಲೆಂಡ್ (New Zealand) ನಲ್ಲಿ ಬೆಳಕಿಗೆ ಬಂದಿದೆ.

ನ್ಯೂಜಿಲೆಂಡ್ ಆರೋಗ್ಯ ಮತ್ತು ಅಂಗವಿಕಲ ಆಯುಕ್ತರು ಸೋಮವಾರ (ಸೆಪ್ಟೆಂಬರ್ 4) ಬಿಡುಗಡೆ ಮಾಡಿದ ವರದಿಯ ಪ್ರಕಾರ 2020 ರಲ್ಲಿ, 20 ವರ್ಷದ ಮಹಿಳೆ ಹೆರಿಗೆ ಮಾಡಿಸಿಕೊಳ್ಳಲು ಆಕ್ಲೆಂಡ್ ಸಿಟಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿನ ವೈದ್ಯರು ಸಿಸೇರಿಯನ್ ಮಾಡಿ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ಸಾರಿದ್ದರು. ಆದರೆ, ಶಸ್ತ್ರಚಿಕಿತ್ಸೆ ಕಾರ್ಯಾಚರಣೆಯ ಸಮಯದಲ್ಲಿ, 17 ಸೆಂ (6 ಇಂಚು) ಅಲೆಕ್ಸಿಸ್ ರಿಟ್ರಾಕ್ಟರ್ (ಶಂಕುವಿನಾಕಾರದ ಸಾಧನ) ಅನ್ನು ಸೇರಿಸಿ, ಹೊಟ್ಟೆಗೆ ಹೊಲಿಗೆ ಹಾಕಿ ಕೈತೊಳೆದುಕೊಂಡಿದೆ ವೈದ್ಯ ತಂಡ. ಬಳಿಕ ಮಹಿಳೆಯನ್ನು ಡಿಸ್ಚಾರ್ಜ್ ಮಾಡಿ ಕಳುಹಿಸಲಾಗಿದೆ. ಆದರೆ ಆ ನಂತರ ಮಹಿಳೆ ಆಗಾಗ್ಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಮಹಿಳೆ ದೀರ್ಘಕಾಲದ ಹೊಟ್ಟೆ ನೋವಿನಿಂದ ಬಳಲಿದ್ದು, ಕೊನೆಗೂ ವೈದ್ಯರ ಬಳಿಗೆ ವಾಪಸಾಗಿದ್ದಾರೆ.

ವೈದ್ಯರು ಮಹಿಳೆಗೆ ಕ್ಷ ಕಿರಣ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿದರು. ಹಲವು ಬಗೆಯ ಔಷಧಗಳನ್ನೂ ನೀಡಲಾಯಿತು. ಆದರೆ ಯಾವುದೂ ಫಲ ನೀಡಲಿಲ್ಲ. ಕೊನೆಗೂ ಸಿಟಿ ಸ್ಕ್ಯಾನ್ ಮಾಡಿದಾಗ ಸತ್ಯಾಂಶ ಹೊರಬಿದ್ದಿದೆ. ಮಹಿಳೆ 18 ತಿಂಗಳಿನಿಂದ ಹೊಟ್ಟೆಯಲ್ಲಿ AWR ಎಂಬ ಹಿಂತೆಗೆದುಕೊಳ್ಳುವ ಸೂಜಿ ಸಾಧನವನ್ನು ಹೊಟ್ಟೆಯಲ್ಲಿ ಹೊತ್ತಿದ್ದಳು ಎಂದು ತಿಳಿದು, ಎಲ್ಲರೂ ಆಘಾತಕ್ಕೊಳಗಾಗಿದ್ದರು. ಸಂತ್ರಸ್ತೆಯ ಹೊಟ್ಟೆಯಲ್ಲಿ ತಟ್ಟೆಯ ಗಾತ್ರದ ಸಾಧನವಿದೆ ಎಂದು ವೈದ್ಯರು ಕೊನೆಗೂ ತಿಳಿಸಿದ್ದಾರೆ. ಇತ್ತ ಮಹಿಳೆ 18 ತಿಂಗಳ ಹಿಂದೆ ತನಗೆ ಸಿಸೇರಿಯನ್ ಆಗಿದ್ದು, ನಂತರ ಯಾವುದೇ ಆಪರೇಷನ್ ಮಾಡಿಲ್ಲ ಎಂದು ವೈದ್ಯರಿಗೆ ತಿಳಿಸಿದ್ದಾಳೆ. ಆದರೆ ಆಗಾಗ ಹೊಟ್ಟೆನೋವು ಯಾಕೆ ಬರುತ್ತೆ ಅನ್ನೋದು ಗೊತ್ತಾಗುತ್ತಿಲ್ಲ ಎಂಗು ತಮ್ಮ ಪಡಿಲಾಟಲು ಹೇಳಿಕೊಂಡಿದ್ದಾರೆ. ಆಗ ವೈದ್ಯರಿಗೆ ಸಾದ್ಯಂತವಾಗಿ ಎಲ್ಲವನ್ನೂ ಊಹಿಸಲು ಸಾಧ್ಯವಾಯಿತು.

ಕೂಡಲೇ ಮತ್ತೆ ಶಸ್ತ್ರಚಿಕಿತ್ಸೆ ಕಾರ್ಯಾಚರಣೆ ನಡೆಸಿ ಮಹಿಳೆಯ ಹೊಟ್ಟೆಯಿಂದ ಸಾಧನವನ್ನು ಹೊರತೆಗೆಯಲಾಯಿತು. ಸಿಸೇರಿಯನ್ ಸಮಯದಲ್ಲಿ ವೈದ್ಯರು ಬಳಸುವ ಸಾಧನಗಳಲ್ಲಿ ಒಂದಾದ ಅಲೆಕ್ಸಿಸ್ ರಿಟ್ರಾಕ್ಟರ್ ಆ ಮಹಿಳೆಯ ಹೊಟ್ಟೆಯಲ್ಲಿ ಭದ್ರವಾಗಿ ಕುಳಿತಿತ್ತು. ಆದು ನೋಡಲು ಊಟದ ತಟ್ಟೆಯ ಗಾತ್ರವಿರುತ್ತದೆ. ಈ ಘಟನೆ ನಡೆದಿದ್ದು 2021ರಲ್ಲಿ. ಈ ವರದಿಯನ್ನು ನ್ಯೂಜಿಲೆಂಡ್ ಆರೋಗ್ಯ ಆಯುಕ್ತ ಮೊರಾಗ್ ಮೆಕ್ ವೆಲ್ ಮೊನ್ನೆ ಸೋಮವಾರ ಬಿಡುಗಡೆ ಮಾಡಿದ್ದಾರೆ.

ಆಕ್ಲೆಂಡ್ ಜಿಲ್ಲಾ ಆರೋಗ್ಯ ಮಂಡಳಿಯು ರೋಗಿಗಳ ಹಕ್ಕುಗಳ ಕೋಡ್ ಅನ್ನು ಉಲ್ಲಂಘಿಸಿದೆ ಎಂದು ಪೆ ನಾಟು ಓರಾ ಆಕ್ಲೆಂಡ್ ಬಹಿರಂಗಪಡಿಸಿದೆ. ಸಿಸೇರಿಯನ್ ಸಮಯದಲ್ಲಿ ಮಹಿಳೆಯನ್ನು ಆರೈಕೆ ಮಾಡಿರುವುದು ಕಂಡುಬಂದಿದೆ. ಮೆಕ್‌ವೆಲ್ ಆಕ್ಲೆಂಡ್ ಜಿಲ್ಲಾ ಆರೋಗ್ಯ ಮಂಡಳಿಯ ವರದಿಯು ಸಂತ್ರಸ್ತ ಮಹಿಳೆಗೆ ಬೇಷರತ್ ಕ್ಷಮೆಯಾಚಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿಗೆ ಆದೇಶಿಸಿದೆ. ಈ ಮಟ್ಟಿಗೆ ಪ್ರಕರಣವನ್ನು ಪ್ರೊಸಿಡಿಂಗ್ಸ್ ನಿರ್ದೇಶಕರು ಉಲ್ಲೇಖಿಸಿದ್ದಾರೆ. ವೈದ್ಯರು ಆಪರೇಷನ್ ಮಾಡುವಾಗ ಹತ್ತಿ, ಕತ್ತರಿ ಮರೆಯುತ್ತಾರೆ ಎಂದು ಕೇಳಿದ್ದೇವೆ. ಆದರೆ ತಟ್ಟೆ ಮರೆಯುವಷ್ಟು ನಿಷ್ಕಾಳಜಿ ವಹಿಸಿದ್ದನ್ನು ಕಂಡು ಹೌಹಾರಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:45 pm, Wed, 6 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ